ಯಕ್ಷಗಾನದ ಮೂಲ ಸ್ವರೂಪ ಉಳಿಯಬೇಕು: ಸಚಿವ ಶೋಭಾ ಕರಂದ್ಲಾಜೆ

ರಾಜ್ಯ ಮಟ್ಟದ ಸಮಗ್ರಯಕ್ಷಗಾನ ಸಮ್ಮೇಳನ

Team Udayavani, Feb 11, 2023, 11:38 PM IST

ಯಕ್ಷಗಾನದ ಮೂಲ ಸ್ವರೂಪ ಉಳಿಯಬೇಕು: ಸಚಿವ ಶೋಭಾ ಕರಂದ್ಲಾಜೆ

ಉಡುಪಿ: ಭಾಷೆ, ಸಾಹಿತ್ಯ, ಮಾತುಗಾರಿಕೆ, ಪ್ರಬುದ್ಧತೆ, ಸಂಸ್ಕೃತಿ, ಸಂಸ್ಕಾರ ಎಲ್ಲವನ್ನು ಒಳಗೊಂಡಿರುವ ಯಕ್ಷಗಾನದ ಮೂಲ ಸ್ವರೂಪವನ್ನು ಉಳಿಸಿಕೊಳ್ಳಬೇಕು. ಇದಕ್ಕಾಗಿ ಸಾಮಾಜಿಕ ಪ್ರಸಂಗಗಳ ಬದಲಾಗಿ ಪೌರಾಣಿಕ ಪ್ರಸಂಗಗಳಿಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಜಿಲ್ಲಾಡಳಿತ ವತಿಯಿಂದ ಎಂಜಿಎಂ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ದೇವಸ್ಥಾನ, ಸಂಸ್ಕೃತಿ, ಸಂಸ್ಕಾರ, ವೇದ, ಪುರಾಣ, ನಾಟ್ಯ, ಹಾಡುಗಾರಿಕೆ ಹಾಗೂ ಯಕ್ಷಗಾನದ ನಡುವೆ ಅವಿನಾಭಾವ ಸಂಬಂಧವಿದೆ. ವೇದ, ಪುರಾಣಗಳ ಸಾರವನ್ನು ಯಕ್ಷಗಾನದ ಮೂಲಕ ಸುಲಭವಾಗಿ ಮಕ್ಕಳಿಗೆ ತಿಳಿಸಬಹುದು. ಈ ನಿಟ್ಟಿನಲ್ಲಿ ಶಾಲಾ ಪಠ್ಯಕ್ರಮದಲ್ಲಿ ಯಕ್ಷಗಾನವನ್ನು ಅಳವಡಿಸಬೇಕಿದೆ ಎಂದು ಹೇಳಿದರು.

ಯಕ್ಷಗಾನವನ್ನು ಧರ್ಮದ ದೃಷ್ಟಿಕೋನದಲ್ಲಿ ನೋಡಬಾರದು. ಧರ್ಮವನ್ನು ಮೀರಿ ನಿಂತ ಕಲೆಯಿದು. ಯಕ್ಷಗಾನ ವಿಷಯದಲ್ಲಿ ವಿವಾದವನ್ನು ಸೃಷ್ಟಿಸುವುದೂ ಸರಿಯಲ್ಲ. ಎಲ್ಲರೂ ಒಂದಾಗಿ ಯಕ್ಷಗಾನವನ್ನು ಉಳಿಸಿ, ಬೆಳೆಸಬೇಕು. ಇದಕ್ಕಾಗಿ ಸರಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

ಸಮ್ಮೇಳನ ಸಮಿತಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ| ಜಿ.ಎಲ್‌. ಹೆಗಡೆ ಪ್ರಸ್ತಾವನೆಗೈದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ್‌, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಶಾಸಕ ಕೆ. ರಘುಪತಿ ಭಟ್‌, ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಕೆ. ಉದಯ ಕುಮಾರ್‌ ಶೆಟ್ಟಿ, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಗುರ್ಮೆ ಸುರೇಶ್‌ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ., ಜಿಪಂ ಸಿಇಒ ಪ್ರಸನ್ನ ಎಚ್‌., ಕಟೀಲು ದೇವಸ್ಥಾನ ಅರ್ಚಕ ವಾಸುದೇವ ಆಸ್ರಣ್ಣ, ಕೊಲ್ಲೂರು ದೇವಸ್ಥಾನದ ಆಡಳಿತ ಮೊಕ್ತೇಸರ ಕೆರಾಡಿ ಚಂದ್ರಶೇಖರ ಶೆಟ್ಟಿ, ಕುಂಭಾಶಿ ವಿನಾಯಕ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯ, ಮಂದಾರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್‌. ಧನಂಜಯ ಶೆಟ್ಟಿ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಎಂಜಿಎಂ ಕಾಲೇಜು ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತr ಉಪಸ್ಥಿತರಿದ್ದರು. ಸಮ್ಮೇಳನದ ಪ್ರಧಾನ ಸಂಚಾಲಕ ಪಿ. ಕಿಶನ್‌ ಹೆಗ್ಡೆ ಸ್ವಾಗತಿಸಿ, ಕೆ.ಎಂ.ಶೇಖರ್‌ ವಂದಿಸಿದರು. ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.

ಮೇಳದ ಪ್ರಮುಖ ಆಕರ್ಷಣೆ
ಯಕ್ಷಗಾನದ ಪಾರಂಪರಿಕ ದಿರಿಸುಗಳು, ಪ್ರಸಾಧನ ಸಾಮಗ್ರಿಗಳು, ದಶಕಗಳ ಹಿಂದಿನ ಮಾವಿನ ಸೊಪ್ಪಿನ ರಂಗಸ್ಥಳ, ಆಧುನಿಕ ರಂಗಸ್ಥಳ, ಸೆಲ್ಫಿ ಪಾಯಿಂಟ್‌, ಯಕ್ಷಗಾನಂ ಗೆಲ್ಗೆ ಮರಳು ಶಿಲ್ಪ, ಸ್ಥಳದಲ್ಲಿಯೇ ಯಕ್ಷಗಾನ ವೇಷ ಧರಿಸುವ, ಮುಖ ವರ್ಣಿಕೆ, ಕಿರೀಟ ಧಾರಣೆ ಹೀಗೆ ಯಕ್ಷಗಾನದ ಕೌತುಕಗಳ ಸ್ವಯಂ ಅನುಭವ ಪಡೆಯಲು ಅವಕಾಶವಿದೆ. ಹಿಂದಿನ ಕಾಲದ ರಂಗಸ್ಥಳ, ಅದರ ಚೌಕಿ, ವೇಷಭೂಷಣಗಳ ಪೆಟ್ಟಿಗೆ, ಯಕ್ಷಗಾನಕ್ಕೆ ಸಂಬಂಧಿಸಿದ ವಿವಿಧ ಪುಸ್ತಕಗಳ ಪ್ರದರ್ಶನ, ಸುಮಾರು 200 ಕೀರ್ತಿಶೇಷ ಹಿರಿಯ ಯಕ್ಷ ಸಾಧಕರ ಭಾವಚಿತ್ರ ಸಹಿತ ಪರಿಚಯದ ಜತೆಗೆ ವಿವಿಧ ಮಳಿಗೆಗಳು ಪ್ರಮುಖ ಆಕರ್ಷಣೆಯಾಗಿವೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.