Udupi ಸ್ಥಿತಪ್ರಜ್ಞೆ,ಸಮಾಜಮುಖಿ ಸೇವೆ: ಕೃಷ್ಣಾಪುರ ಶ್ರೀ

ಶೀರೂರು ಶ್ರೀವೇದವರ್ಧನತೀರ್ಥ ಶ್ರೀಪಾದರ 18ನೇ ಜನ್ಮನಕ್ಷತ್ರ ಕಾರ್ಯಕ್ರಮ

Team Udayavani, Oct 11, 2023, 11:40 PM IST

Udupi ಸ್ಥಿತಪ್ರಜ್ಞೆ,ಸಮಾಜಮುಖಿ ಸೇವೆ: ಕೃಷ್ಣಾಪುರ ಶ್ರೀ

ಉಡುಪಿ: ಶೀರೂರು ಮಠದ ಕೀರ್ತಿಶೇಷರಾದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಉತ್ತರಾಧಿಕಾರಿಗಳಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ 18ನೇ ಜನ್ಮನಕ್ಷತ್ರದ ಆಚರಣೆ ಮಠದ ಮುಂಭಾಗದ ರಥಬೀದಿಯ ಶ್ರೀ ಅನ್ನವಿಟ್ಠಲ ವೇದಿಕೆಯಲ್ಲಿ ಬುಧವಾರ ನೆರವೇರಿತು.

ವೇದವರ್ಧನತೀರ್ಥರಿಗೆ 18 ವರ್ಷ ತುಂಬಿದೆ ಎನ್ನುವ ಘೋಷಣೆಯ 18 ಎಂದು ಬರೆಯಲಾದ ಹೂವಿನ ಫ‌ಲಕವನ್ನು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಮುಟ್ಟಿ ಅಧಿಕೃತಗೊಳಿಸಿದರು.

ಸನ್ಯಾಸಿಗಳಿಗೆ ಸಮಾಜದಲ್ಲಿ ಸಾಕಷ್ಟು ಜವಾಬ್ದಾರಿಗಳಿರುತ್ತವೆ. ದೇವತಾರಾಧನೆಯೊಂದಿಗೆ ದೇವರ ಅನುಗ್ರಹ ಪಡೆದು, ಎಲ್ಲ ಕಡೆ, ಎಲ್ಲರಲ್ಲಿ ಯೂ ದೇವರಿದ್ದಾನೆ ಎಂಬುದನ್ನು ಪರಿಗಣಿಸಿ ಎಲ್ಲರನ್ನು ಸಮಾನ ಭಾವದಿಂದ ಕಾಣಬೇಕಾಗುತ್ತದೆ. ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದೆನ್ನುವ ಸ್ಥಿತಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಸಾಗಬೇಕಾದ ಜವಾಬ್ದಾರಿ ಇದೆ ಎಂದು ಶ್ರೀಗಳು ತಿಳಿಸಿದರು.
ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು, ಸಂತನಂತೆ ಬದುವವನಿಗೆ ಸಂಕಟವಿರದು. ಸನ್ಯಾಸ ತ್ಯಾಗದ ಸಂಕೇತ. ಅಂತಹ ಪವಿತ್ರವಾದ ಸನ್ಯಾಸದ ಮೂಲಕ ಕೀರ್ತಿ ಪಾತ್ರರಾಗಿರಿ ಎಂದು ಹಾರೈಸಿದರು.

ಶಾಸಕ ಗುರುರಾಜ ಗಂಟಿಹೊಳೆ ಅವರು, ಹಿಂದೂ ಸಮಾಜದ ರಕ್ಷಣೆ ಮತ್ತು ಮಾರ್ಗದರ್ಶನ ನೀಡುತ್ತಾ ಬಂದವರು ಸೈನಿಕರು ಮತ್ತು ಸಂತರು. ಇವರಿಬ್ಬರ ಬದುಕು ಸಮಾಜಕ್ಕೆ. ಅಂತಹ ಕಾರ್ಯ ನಡೆಯಲಿ, ತನ್ಮೂಲಕ ಲೋಕ ಕಲ್ಯಾಣವಾಗಲಿ ಎಂದು ಹಾರೈಸಿದರು.

ಕಟೀಲು ಕ್ಷೇತ್ರದ ಲಕ್ಷ್ಮೀನಾರಾಯಣ ಆಸ್ರಣ್ಣ, ಮಾಜಿ ಶಾಸಕ ಕೆ. ರಘುಪತಿ ಭಟ್‌, ವಿಹಿಂಪ ಪ್ರಾಂತ ಕಾರ್ಯಾಧ್ಯಕ್ಷ ಡಾ| ಎಂ.ಬಿ. ಪುರಾಣಿಕ್‌ ಮಾತನಾಡಿದರು. ಸಮಾಜ ಸೇವಕ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಕೀರ್ತಿಶೇಷರಾದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರನ್ನು ಸ್ಮರಿಸಿದರು.

ಪ್ರಮುಖರಾದ ಪುರುಷೋತ್ತಮ ಪಿ. ಶೆಟ್ಟಿ, ಮನೋಹರ ಎಸ್‌. ಶೆಟ್ಟಿ, ಹರಿಕೃಷ್ಣ ಪುನರೂರು, ಪ್ರದೀಪ ಕಲ್ಕೂರ, ಭುವನಾಭಿರಾಮ ಉಡುಪ, ಡಾ| ತಲ್ಲೂರು ಶಿವರಾಮ ಶೆಟ್ಟಿ, ರಂಜನ ಕಲ್ಕೂರ, ರಘುರಾಮ ಆಚಾರ್ಯ, ವೆಂಕಟರಮಣ ಮುಚ್ಚಿಂತ್ತಾಯ, ಗಿರೀಶ್‌ ಅಂಚನ್‌, ಅಮೃತಾ ಕೃಷ್ಣಮೂರ್ತಿ, ಬಾಲಕೃಷ್ಣ ಶೆಟ್ಟಿ, ಅದಮಾರು ಮಠದ ಗೋವಿಂದರಾಜ್‌, ಶೀರೂರು ಮಠದ ದಿವಾನರಾದ ಉದಯ ಸರಳತ್ತಾಯ ಉಪಸ್ಥಿತರಿದ್ದರು.

ವಾಸುದೇವ ರಂಗ ಭಟ್ಟರ ಸಾರಥ್ಯದಲ್ಲಿ ಪಾದುಕಾ ಪ್ರದಾನ ಮತ್ತು ಪಂಚವಟಿ ತಾಳಮದ್ದಳೆ ಪ್ರಸ್ತುತಗೊಂಡಿತು. ಶಾಸಕ ಯಶ್‌ಪಾಲ್‌ ಎ. ಸುವರ್ಣ ಸ್ವಾಗತಿಸಿದರು. ಹಿಂಜಾವೇ ಪ್ರಮುಖ ಶ್ರೀಕಾಂತ ಶೆಟ್ಟಿ ಪ್ರಸ್ತಾವನೆಗೈದರು. ಕಬ್ಬಿನಾಲೆ ಅಶ್ವತ್ಥ ಭಾರದ್ವಾಜ್‌ ನಿರೂಪಿಸಿದರು.

ಧರ್ಮದ ರಕ್ಷಣೆಗೆ ಮಠ,ಸಮಾಜ ಒಟ್ಟಾಗಬೇಕು
ಶ್ರೀ ವೇದವರ್ಧನತೀರ್ಥರು ಮಾತನಾಡಿ, “ಜನಸೇವೆಯೇ ಜನಾರ್ದನ ಸೇವೆ’ ಎನ್ನುವ ಧ್ಯೇಯದೊಂದಿಗೆ ಸಮಾಜ ಸೇವೆಯನ್ನೇ ಗುರಿಯನ್ನಾಗಿಸಿ ಬದುಕಬೇಕಾದ ಹೊಣೆಗಾರಿಕೆ ಸಂತರಿಗಿದೆ. ಮಧ್ವಾಚಾರ್ಯರು, ವಾದಿರಾಜರು ಇದನ್ನೇ ಸಾರಿದ್ದರು. ಈ ನೆಲೆಯಲ್ಲಿ ಮಠ ಮತ್ತು ಸಮಾಜ ಒಂದಾಗಿ ಕೆಲಸ ಮಾಡಬೇಕಾಗಿದೆ. ಭಕ್ತರಿಂದ ಬಂದ ಸಂಪತ್ತನ್ನು ದೇವರಿಗೆ ಸಮರ್ಪಿಸಿ ಮತ್ತೆ ಪ್ರಸಾದ ರೂಪವಾಗಿ ಸಮಾಜ ಸೇವಾ ಕಾರ್ಯಕ್ಕೆ ಬಳಸಬೇಕಾಗಿದೆ. ಸಜ್ಜನರಿಗೆ ಪರಮಾತ್ಮನ ದಯೆ ಇದ್ದೇ ಇರುತ್ತದೆ. ಸನಾತನ ಹಿಂದೂ ಧರ್ಮದ ಸಂರಕ್ಷಣೆಗೆ ಮಠ ಮತ್ತು ಸಮಾಜ ಒಟ್ಟಾಗಬೇಕಾಗಿದೆ ಎಂದರು.

ಸಮಾಜಮುಖಿ ಕಾರ್ಯಗಳಿಗೆ ಚಾಲನೆ
ಶೀರೂರು ಮಠದಿಂದ ನಿರಂತರವಾಗಿ ಸಮಾಜಮುಖಿ ಕಾರ್ಯ ನಡೆಯಲಿದೆ ಎನ್ನುವ ನೆಲೆಯಲ್ಲಿ ಸುಧಾಕರ ಅವರಿಗೆ ಮನೆ ಕಟ್ಟಲು ಅನುಕೂಲವಾಗುವಂತೆ 50 ಸಾವಿರ ರೂ. ಸಹಾಯ ಧನದ ಚೆಕ್‌ ಅನ್ನು ಶೀರೂರು ಶ್ರೀಪಾದರು ನೀಡಿ ಹರಸಿದರು.

ಟಾಪ್ ನ್ಯೂಸ್

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.