ಒಂಟಿ ಮಹಿಳೆ ಕೊಲೆ: ಬಾಡಿಗೆ ಮನೆಯಲ್ಲಿದ್ದ ದಂಪತಿ ಬಂಧನ

ಉಡುಪಿಯ ಸುಬ್ರಹ್ಮಣ್ಯ ನಗರದಲ್ಲಿ ಜು.2ರಂದು ಕೃತ್ಯ ; ಗೋವಾದಲ್ಲಿ ಸಿಕ್ಕಿಬಿದ್ದ ಜೋಡಿ

Team Udayavani, Jul 11, 2019, 5:12 AM IST

ARREST

ಸಾಂದರ್ಭಿಕ ಚಿತ್ರ.

ಉಡುಪಿ: ನಗರಸಭಾ ವ್ಯಾಪ್ತಿಯ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದ್ದ ಒಂಟಿ ವೃದ್ಧೆ ರತ್ನಾವತಿ ಜಿ.ಶೆಟ್ಟಿ (80) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆಪಾದಿತ ದಂಪತಿಯನ್ನು ಗೋವಾದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡ ನರಗುಂದ ಮೂಲದ ಅಂಬಣ್ಣ ಅಲಿಯಾಸ್‌ ಅಂಬರೀಶ್‌ ಅಲಿಯಾಸ್‌ ಅಂಬಣ್ಣ ಬಸಪ್ಪ ಜಾಡರ್‌ ಅಲಿಯಾಸ್‌ ಶಿವ (31) ಮತ್ತು ಆತನ ಪತ್ನಿ ರಶೀದಾ ಅಲಿಯಾಸ್‌ ಖಾಜಿ ಆಲಿಯಾಸ್‌ ಜ್ಯೋತಿ (26) ಬಂಧಿತರು.

ಬಾಡಿಗೆಗೆಂದು ಬಂದಿದ್ದರು
ರತ್ನಾವತಿ ಜಿ.ಶೆಟ್ಟಿ ಅವರ ಮನೆಯ ಹಿಂಭಾಗದಲ್ಲಿ ನಾಲ್ಕು ಬಾಡಿಗೆ ಕೋಣೆಗಳಿದ್ದವು. ಎರಡರಲ್ಲಿ ತಲಾ ಒಬ್ಬೊಬ್ಬರು ವಾಸವಾಗಿದ್ದರು. ಅವರು ಕೆಲವು ದಿನಗಳ ಹಿಂದೆ ಊರಿಗೆ ಹೋಗಿದ್ದರು.

ಜು.1ರಂದು ಬಾಡಿಗೆ ಮನೆ ಕೇಳಿಕೊಂಡು ದಂಪತಿ ಬಂದಿದ್ದು, ಅವರಿಗೆ ರತ್ನಾವತಿ ಅವರು ಬಾಡಿಗೆ ಕೋಣೆ ನೀಡಿದ್ದರು. ಅಂದು ಆ ಕೊಠಡಿಯಲ್ಲಿ ವಾಸವಿದ್ದ ಈ ಜೋಡಿ ಮರುದಿನ ಅಪರಾಹ್ನ 3.30ರ ವೇಳೆಗೆ ರತ್ನಾವತಿ ಅವರನ್ನು ಮಲಗುವ ಕೋಣೆಯಲ್ಲಿ ಕತ್ತಿಯಿಂದ ಕಡಿದು ಕೊಲೆ ಮಾಡಿ ಕಾಲ್ಕಿತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ರತ್ನಾವತಿ ಅವರ ಶವ ಜು.5ರಂದು ರಾತ್ರಿ ಮನೆಯೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಚಿನ್ನಾಭರಣಕ್ಕಾಗಿ ಕೊಲೆ
ಆರೋಪಿಗಳು ದುಂದುವೆಚ್ಚ ಮಾಡುತ್ತಿದ್ದು, ಚಿನ್ನಾಭರಣ ಮತ್ತು ಹಣಕ್ಕಾಗಿಯೇ ಕೊಲೆ ನಡೆಸಿರುವುದನ್ನು ಪೊಲೀಸ್‌ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಇವರು ರತ್ನಾವತಿ ಶೆಟ್ಟಿ ಮೈಮೇಲಿದ್ದ ಸುಮಾರು 2 ಲ.ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಕೊಂಡೊಯ್ದಿದ್ದು, ಅದನ್ನು ಇನ್ನಷ್ಟೇ ಸ್ವಾಧೀನಪಡಿಸಿಕೊಳ್ಳಬೇಕಾಗಿದೆ.

ಬಂಧಿತರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ.

ಚಿನ್ನ ನೋಡಿ ಬಾಡಿಗೆ ಮನೆ ಫಿಕ್ಸ್‌ !
ಆರೋಪಿಗಳು ಬಾಡಿಗೆ ಮನೆಯನ್ನು ಒಪ್ಪಿಕೊಳ್ಳುವ ಮೊದಲು ರತ್ನಾವತಿ ಜತೆ ತುಂಬಾ ಹೊತ್ತು ಮಾತನಾಡಿದ್ದರು. ಈ ವೇಳೆ ರತ್ನಾವತಿ ಮೈಮೇಲಿದ್ದ ಚಿನ್ನಾಭರಣಗಳನ್ನು ಗಮನಿಸಿದ್ದರು. ಮನೆಯಲ್ಲಿ ಇನ್ನೂ ಚಿನ್ನಾಭರಣಗಳು ಇರಬಹುದು ಎಂದು ಸ್ಕೆಚ್ ಹಾಕಿ ಬಾಡಿಗೆ ಮನೆಯನ್ನು ಒಪ್ಪಿಕೊಂಡಿದ್ದರು.

ಆರೋಪಿಗಳು ಗೋವಾದ ಓಲ್ಡ್ ಗೋವಾ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವುದನ್ನು ಉಡುಪಿ ಪೊಲೀಸರು ಖಚಿತಪಡಿಸಿಕೊಂಡಿದ್ದರು. ಕೂಡಲೇ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿ ವಶಕ್ಕೆ ಪಡೆಯುವಂತೆ ಕೋರಿಕೊಂಡಿದ್ದರು. ಅನಂತರ ಉಡುಪಿಯ ವಿಶೇಷ ತಂಡ ಗೋವಾಕ್ಕೆ ತೆರಳಿತ್ತು.

ಎಸ್‌ಪಿ ನಿಶಾ ಜೇಮ್ಸ್‌ ನಿರ್ದೇಶನ, ಎಎಸ್‌ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಸಿಐ ಮಂಜುನಾಥ್‌ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಲ್ಪೆ ಠಾಣಾಧಿಕಾರಿ ಮಧು, ಉಡುಪಿ ಎಎಸ್‌ಐ ಗೋಪಾಲಕೃಷ್ಣ, ಡಿಸಿಐಬಿ ಸಿಬಂದಿ ಪಾಲ್ಗೊಂಡಿದ್ದರು.

ಆರೋಪಿಗೆ
ಕ್ರಿಮಿನಲ್ ಹಿನ್ನೆಲೆ

ಅಂಬರೀಶ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಮೊಬೈಲ್ ಕಳವು, ಬಿಜಾಪುರದಲ್ಲಿ ಸ್ಕೂಟರ್‌ ಕಳವು, ಬಾದಾಮಿಯಲ್ಲಿ ಸರ ಸುಲಿಗೆ ಹಾಗೂ ಮಂಗಳೂರಿನ ಕಾವೂರಿನಲ್ಲಿ ಮನೆ ಕಳವು ಪ್ರಕರಣಗಳು ದಾಖಲಾಗಿವೆ. ಈತ ರಶೀದಾಳನ್ನು ಮದುವೆಯಾಗಿ 8 ವರ್ಷಗಳಾಗಿವೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.