“ಸಣ್ಣ  ಕೈಗಾರಿಕೆಗಳಿಂದ ಆರ್ಥಿಕಾಭಿವೃದ್ಧಿ’


Team Udayavani, Dec 2, 2017, 9:12 AM IST

02-16.jpg

ಉಡುಪಿ: ಸಣ್ಣ  ಕೈಗಾರಿಕೆಗಳಿಂದ ದುಡಿಯುವ ಕೈಗಳಿಗೆ ಕೆಲಸ ದೊರೆತು ಆರ್ಥಿಕಾಭಿವೃದ್ಧಿ ಸಾಧ್ಯ. ಪ್ರತಿ ಊರಿನಲ್ಲಿಯೂ ಒಂದು ಸಣ್ಣ ದಾದರೂ ಕೈಗಾರಿಕೆ ಇರುವುದು ಅವಶ್ಯ ಎಂದು ಮಾಜಿ ಸಚಿವ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ರಜತ ಮಹೋತ್ಸವ ಅಂಗ ವಾಗಿ ಉಡುಪಿ ಬೀಡಿನಗುಡ್ಡೆಯ ಮಹಾತ್ಮಾಗಾಂಧಿ ಬಯಲು ರಂಗ ಮಂದಿರ ದಲ್ಲಿ  ಡಿ.1ರಿಂದ 3ರವರೆಗೆ ಆಯೋಜಿಸಲಾಗಿರುವ ಕೈಗಾರಿಕಾ ವಸ್ತು ಪ್ರದರ್ಶನ “ಎಕ್ಸ್‌ಪೋ- 2017′ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದ ಸೌಲಭ್ಯಗಳನ್ನು ಅವಲಂಬಿಸುವುದಕ್ಕಿಂತಲೂ ಹೆಚ್ಚಾಗಿ ಉದ್ಯಮಿ ಗಳ ಸ್ವಂತ ಪರಿಶ್ರಮದಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳು ಬೆಳೆದು ನಿಂತಿವೆ. ಸರಕಾರ ಕೈಗಾರಿಕಾಭಿವೃದ್ಧಿ ಗಾಗಿ ಯೋಜನೆ ಜಾರಿಗೆ ತಂದಿದೆ ಯಾದರೂ ಅವುಗಳ ನಿಯಮಗಳು ಕಠಿನವಾಗಿವೆ ಎಂದು ಅವರು ಹೇಳಿದರು.

ವಿರೋಧದಿಂದ ಹಿನ್ನಡೆ
ಎಲ್ಲಾ ಕೈಗಾರಿಕೆಗಳಿಗೂ ಪರಿಸರ ನಾಶದ ಕಾರಣವೊಡ್ಡಿ ವಿರೋಧ ವ್ಯಕ್ತಪಡಿಸುವ ಮನೋಭಾವವನ್ನು ಜನರು ಬದಲಿಸಿಕೊಳ್ಳಬೇಕು. ಅಂತೆಯೇ ಕೈಗಾರಿಕೆಗಳು ಕೂಡ ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಅತ್ಯಾಧುನಿಕ ವ್ಯವಸ್ಥೆ ಅಳವಡಿಸಿಕೊಳ್ಳಬೇಕು. ಕೈಗಾರಿಕೆಗಳನ್ನು ಪ್ರೋತ್ಸಾಹಿಸದಿದ್ದರೆ ಉದ್ಯೋಗ ಸೃಷ್ಟಿ ಅಸಾಧ್ಯ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉಡುಪಿ ಪವರ್‌ ಕಾರ್ಪೊರೇಷನ್‌ನ ಜಂಟಿ ಅಧ್ಯಕ್ಷ ಕಿಶೋರ್‌ ಆಳ್ವ ಅವರು ಮಾತನಾಡಿ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘವು ಜಿಲ್ಲೆಯ ಸಣ್ಣ ಕೈಗಾರಿಕೆಗಳ ಬೆಳವಣಿಗೆಗೆ ಸಹಕರಿಸುತ್ತಿರುವುದು ಶ್ಲಾಘನೀಯ. ಅದಾನಿ ಸಂಸ್ಥೆ ಕೂಡ ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದರು. 

ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, “ಎಕ್ಸ್‌ಪೋ 2017’ರ ಚೇರ್‌ವೆುನ್‌ ಶಂಕರ ಸುವರ್ಣ, ಕೋ ಚೇರ್‌ವೆುನ್‌ ಜಗದೀಶ್‌ ರಾವ್‌, ಸಂಘದ ಮಾಜಿ ಅಧ್ಯಕ್ಷ ಮಟ್ಟಾರ್‌ ಗಣೇಶ್‌ ಕಿಣಿ, ಖಜಾಂಚಿ ಹೃಷಿಕೇಶ್‌ ಹೆಗ್ಡೆ ಉಪಸ್ಥಿತರಿದ್ದರು. ಅಧ್ಯಕ್ಷ ಎಚ್‌.ಸುಧೀರ್‌ ನಾಯಕ್‌ ಸ್ವಾಗತಿಸಿದರು. ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಕಾರ್ಯದರ್ಶಿ ಎಂ.ವಸಂತ ಕಿಣಿ ವಂದಿಸಿದರು. ಮಂಜುಳಾ ಪ್ರಸಾದ್‌ ಕಾರ್ಯಕ್ರಮ ನಿರ್ವಹಿಸಿದರು. 

ಅದಾನಿ, ಉದಯವಾಣಿ ಮತ್ತು ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಸಹಯೋಗದಲ್ಲಿ ಈ ವಸ್ತುಪ್ರದ ರ್ಶನವನ್ನು ಆಯೋಜಿಸಲಾಗಿದ್ದು ಕೈಗಾರಿಕೆ, ಕೃಷಿಗೆ ಸಂಬಂಧಿಸಿದ ಯಂತ್ರಗಳು, ಸಣ್ಣ ಗುಡಿಕೈಗಾರಿಕೆ, ವಾಹನ, ಎಲೆಕ್ಟ್ರಿಕಲ್‌, ಸೋಲಾರ್‌, ಗೋಡಂಬಿ, ರೂಫಿಂಗ್‌, ಕಟ್ಟಡಗಳಿಗೆ ಸಂಬಂಧಿಸಿದ ಮಳಿಗೆ ಗಳು, ಆಹಾರ, ಕ್ರಿಯಾತ್ಮಕ ವಸ್ತುಗಳು, ಕರ ಕೌಶಲ ಮಳಿಗೆಗಳು ಸೇರಿದಂತೆ 102 ಮಳಿಗೆಗಳಿವೆ. 

ಲಕ್ಷ  ಲೈಸನ್ಸ್‌  ; ಶೇ. 5 ಪ್ರಗತಿ !
ರಾಜ್ಯದಲ್ಲಿ ಕೈಗಾರಿಕಾ ಪ್ರಗತಿಯ ಬಗ್ಗೆ  ಕೈಗಾರಿಕಾ ಸಚಿವರನ್ನು ಪ್ರಶ್ನಿಸಿದೆ. ಆಗ ಅವರು “ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 1 ಲಕ್ಷದಷ್ಟು ಕೈಗಾರಿಕೆಗಳಿಗೆ ಪರವಾನಿಗೆ ನೀಡಿದ್ದೇವೆ’ ಎಂದಿದ್ದರು. ಆದರೆ ಅವುಗಳಿಗೆ ಮೂಲಸೌಕರ್ಯ ಒದಗಿಸಿಲ್ಲ. ಪರಿಣಾಮವಾಗಿ ಶೇ.5ರಷ್ಟು ಮಾತ್ರ ಕೈಗಾರಿಕಾ ಪ್ರಗತಿ ಆಗಿದೆ. 
ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್‌ ಸದಸ್ಯರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.