ಸಮಾಜಕ್ಕೆ ಒಳ ಮೀಸಲಾತಿ ಅಗತ್ಯವಿದೆ: ವೈ.ಎಸ್‌.ವಿ. ದತ್ತ

ಸಂವಾದ ಕಾರ್ಯಕ್ರಮ

Team Udayavani, Aug 3, 2019, 5:44 AM IST

0208GK3

ಉಡುಪಿ: ಇಂದು ಅನೇಕರು ಮೀಸಲಾತಿಯಿಂದ ಅಧಿಕಾರ, ಶೈಕ್ಷಣಿಕ ಸೇರಿದಂತೆ ವಿವಿಧ ಸವಲತ್ತು ಪಡೆದುಕೊಂಡು ಬಲಿಷ್ಠವಾಗಿ ಬೆಳೆದ ಮೇಲೆ ಅವರ ಮಕ್ಕಳೂ ಸಹ ಮೀಸಲಾತಿ ಪಡೆಯುತ್ತಿದ್ದಾರೆ. ಅದನ್ನು ತಪ್ಪಿಸಲು ಮೀಸಲಾತಿಯೊಳಗೆ ಒಳ ಮೀಸಲಾತಿಯನ್ನು ಮಾಡಬೇಕು ಎಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ತಿಳಿಸಿದ್ದಾರೆ.

ಅಜ್ಜರಕಾಡು ಪುರಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮತ್ತೆ ಕಲ್ಯಾಣ ವಿದ್ಯಾರ್ಥಿ ಸಂವಾದ ಕಾರ್ಯಕ್ರಮದಲ್ಲಿ ಇಂದು ಜಾತಿ ಮೀಸಲಾತಿ ಅಗತ್ಯವೇ ಎನ್ನುವ ವಿದ್ಯಾರ್ಥಿನಿ ಪ್ರಶ್ನೆಗೆ ಉತ್ತರಿಸಿದರು.

ಬಸವಣ್ಣ ಅವರು ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಮಾಜಕ್ಕೆ ನೀಡಿದ್ದಾರೆ. ಅವರಿಂದ ಪ್ರೇರಿತರಾಗಿ ಮೀಸಲಾತಿ ಜಾರಿಗೆ ತರಲಾಗಿದೆ. ಶೋಷಣೆಗೆ ಒಳಗಾದವರು ಅಭಿವೃದ್ಧಿ ಹೊಂದಬೇಕಾದರೆ ಅವರಿಗೆ ಮೀಸಲಾತಿ ಅಗತ್ಯವಿದೆ. ಸಮಾನತೆಯ ಸಮಾಜ ನಿರ್ಮಾಣವಾದರೆ ಮೀಸಲಾತಿ ಬೇಕಾಗಿಲ್ಲ. ಆದರೆ ಇಂದು ಆನೇಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೀಸಲಾತಿ ಬೇಕಾಗಿದೆ ಎಂದರು.

21ನೇ ಶತಮಾನದಲ್ಲಿ ವಚನಗಳ ಮೂಲಕ ಕ್ರಾಂತಿ ಮೂಲಕ ಸಾಧ್ಯವೆ?
ವಚನಗಳಿಗೆ ಸಮಾಜವನ್ನು ಬದಲಾಯಿಸುವ ಶಕ್ತಿಯಿದೆ. 12ನೇ ಶತಮಾನದಲ್ಲಿ ಶರಣರು ಕಾಯಕ ವ್ಯಕ್ತಿಗಳಿಗೆ ನಿಜಾವಾದ ಜ್ಞಾನವನ್ನು ಹಂಚಿದರು. ಸುಜ್ಞಾನಿಗಳಾಗಿದ್ದರೆ ಜಾತಿಯೆಂಬ ಭೂತಕ್ಕೆ ಅಂಟಿಕೊಳ್ಳಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಮನುಕುಲದ ಜ್ಞಾನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀ ತರಳಬಾಳು ಜಗದ್ಗುರು ಶಾಖಾಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಉತ್ತರಿಸಿದರು.

ಯಾವ ದೇವರನ್ನು ನಾವು ನಂಬಬೇಕು? ಆತ್ಮಸಾಕ್ಷಿ ದೇವರನ್ನು…
ಇಂದು ದೇವರ ಹೆಸರಿನಲ್ಲಿ ಪೂಜಾರಿಗಳು, ಪುರೋಹಿತರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅಂತಹ ದೇವರಗಳ ಕೊಡವೇ ನಮಗೆ ಬೇಡ. ದೇವರುಗಳ ಅಭರಣ ದರೋಡೆಯಾದಾಗ ದೇವರು ಕಳ್ಳರಿಗೆ ಶಿಕ್ಷೆ ನೀಡಿದ ನಿದರ್ಶನವಿಲ್ಲ. ತನ್ನ ಆಭರಣಗಳನ್ನು ಹುಡುಕಿಕೊಳ್ಳದ ಸ್ಥಾವರ ದೇವರು ಎಲ್ಲಾದರೂ ವರ ಹಾಗೂ ಶಾಪ ಕೊಡಲು ಸಾಧ್ಯವೇ?. ಪೂಜಾರಿ ಹಾಗೂ ಪುರೋಹಿತರು ವರ ಹಾಗೂ ಶಾಪದ ಪಾಪವನ್ನು ಜನರ ತಲೆಯಲ್ಲಿ ತುಂಬಿ ತಮ್ಮ ಬೇಳೆ ಬೆಳೆಸಿಕೊಳ್ಳುತ್ತಿದ್ದಾರೆ.
ಆದರಿಂದ ಅಂತಹ ದೇವರು ನಂಬಬೇಡಿ. ಮೊದಲು ನಿಮ್ಮ ಆತ್ಮಸಾಕ್ಷಿಯನ್ನು ನಂಬಿ ಎಂದು ಸ್ವಾಮೀಜಿ ಉತ್ತರಿಸಿದರು.

ವಿದ್ಯಾರ್ಥಿಗಳು ಯಾಕೆ ಮತ್ತೆ ಕಲ್ಯಾಣ ಆಯ್ಕೆ ಮಾಡಬೇಕು?
“ಮತ್ತೆ ಕಲ್ಯಾಣ’ ಮೂಲಕ ಮನಸ್ಸು ಪರಿಪಕ್ವವಾಗಲು ಸಾಧ್ಯ. ಇದಕ್ಕೆ ಪೂರಕವಾಗಿ ವಚನ ಧರ್ಮ ನೆರವು ನೀಡುತ್ತಿದೆ. ಇಲ್ಲಿ ಶುದ್ಧ ಮಾನವೀಯ ಆಂತಕರಣವನ್ನು ಅರಳಿಸುವ ತತ್ವಗಳಿವೆ. ಈ ನಿಟ್ಟಿನಲ್ಲಿ ವಚನಗಳ ಮೂಲಕ ಇವತ್ತಿನ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನವಾಗಬೇಕಿದೆ. ಇಲ್ಲಿ ಯಾವುದೇ ಧರ್ಮದ ಪ್ರಚಾರವಿಲ್ಲ ಎಂದು ಸ್ವಾಮೀಜಿ ತಿಳಿಸಿದರು.

ರಾಜಕಾರಣಿಗಳನ್ನು ತಿರಸ್ಕರಿಸಿ
ನಾವೆಲ್ಲ ಮೊದಲು ಮನುಷ್ಯ ಜಾತಿ ಎನ್ನುವುದನ್ನು ಅರಿತಕೊಂಡಾಗ ಮಾತ್ರ ಜಾತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ. ಇಂದು ರಾಜಕೀಯದಲ್ಲಿ ಜಾತಿಯನ್ನು ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದೆ. ಇಂತಹ ಭ್ರಷ್ಟ ರಾಜಕಾರಣಿಗಳನ್ನು ತಿರಸ್ಕರಿಸಿ ಒಳ್ಳೆಯ ರಾಜಕಾರಣಿಗಳನ್ನು ಆಯ್ಕೆ ಮಾಡಿ ಎಂದು ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಎಂದರು.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.