ನಕ್ಸಲ್‌ ಬಾಧಿತ ಅಮಾಸೆಬೈಲಿನಲ್ಲಿ “ಸೌರ ವಿದ್ಯುತ್‌ ಕ್ರಾಂತಿ’

1,643 ಮನೆಗಳಿಗೆ ಸೋಲಾರ್‌ ಬೆಳಕು

Team Udayavani, Jun 8, 2019, 10:43 AM IST

amase

ಸಾಂದರ್ಭಿಕ ಚಿತ್ರ

ಕುಂದಾಪುರ: ಸೋಲಾರ್‌ ಬೆಳಕಿನ ಅಳವಡಿಕೆಯ ಮೂಲಕ ದೇಶದ ಗಮನ ಸೆಳೆದಿರುವ ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮದಲ್ಲಿ ವಿದ್ಯುತ್‌ ಸೌಕರ್ಯವಿಲ್ಲದ 1,643 ಮನೆಗಳಿಗೆ ವಿಕೇಂದ್ರೀಕೃತ ಬೆಳಕಿನ ವ್ಯವಸ್ಥೆ ಮತ್ತು 27 ಸೋಲಾರ್‌ ದಾರಿ ದೀಪಗಳನ್ನು ಅಳವಡಿಸಲಾಗಿದೆ. ಇದರ ಉದ್ಘಾಟನೆ ಜೂ. 9ರಂದು ಅಮಾಸೆಬೈಲು ಪ್ರೌಢಶಾಲಾ ಆವರಣದಲ್ಲಿ ನಡೆಯಲಿದೆ.

ಅಮಾಸೆಬೈಲಿನಲ್ಲಿ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಸೋಲಾರ್‌ ಬೆಳಕಿನ ವ್ಯವಸ್ಥೆ ಅಳವಡಿಕೆ ಕಾರ್ಯ ಈಗಾಗಲೇ ಸಾಕಾರಗೊಂಡಿದ್ದು, ಒಟ್ಟು 2.13 ಕೋ.ರೂ. ವ್ಯಯಿಸಲಾಗಿದೆ. ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ಣಾಟಕ ಬ್ಯಾಂಕ್‌ ಲಿ. ಮಂಗಳೂರು, ಅಮಾಸೆಬೈಲು ಗ್ರಾ.ಪಂ., ಕರ್ನಾಟಕ ನವೀಕರಿಸಲಾಗುವ ಇಂಧನ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲಾಡಳಿತ ಮತ್ತು ಸೆಲ್ಕೋ ಸೋಲಾರ್‌ ಲೈಟ್‌ ಪ್ರೈ.ಲಿ. ಸಹಭಾಗಿತ್ವದಲ್ಲಿ ಯೋಜನೆಯ ಅನುಷ್ಠಾನಗೊಂಡಿದೆ.

ನಾಳೆ ಉದ್ಘಾಟನೆ
ಜೂ. 9ರಂದು ಬೆಳಗ್ಗೆ 10.30ಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ಬ್ಯಾಂಕ್‌ ಆಡಳಿತ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸೆಲ್ಕೋ ಇಂಡಿಯಾದ ಅಧ್ಯಕ್ಷ ಡಾ| ಎಚ್‌. ಹರೀಶ್‌ ಹಂದೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಪಾಲ್ಗೊಳ್ಳಲಿದ್ದಾರೆ.

ಸಹಭಾಗಿತ್ವ
ಅಂದಿನ ಉಡುಪಿ ಜಿಲ್ಲಾಧಿಕಾರಿ ನಕ್ಸಲ್‌ ಪ್ರದೇಶಾಭಿವೃದ್ಧಿಯಡಿ 25 ಲಕ್ಷ ರೂ. ಅನುದಾನ ನೀಡಿದರು. ಫ‌ಲಾನುಭವಿಗಳು 3 ಸಾವಿರ ರೂ.ಗಳಂತೆ ಭರಿಸಿದರು. ಶಾಸಕರಾಗಿದ್ದ ಗೋಪಾಲ ಪೂಜಾರಿ, ವಿ.ಪ. ಸದಸ್ಯರಾದ ಕ್ಯಾ| ಗಣೇಶ್‌ ಕಾರ್ಣಿಕ್‌, ಪ್ರತಾಪಚಂದ್ರ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ ತಲಾ 5 ಲಕ್ಷ ರೂ., ಸಂಸದೆ ಶೋಭಾ ಕರಂದ್ಲಾಜೆ 2 ಲಕ್ಷ ರೂ. ಅನುದಾನ ನೀಡಿದರು. ಸೆಲ್ಕೋ ಕಂಪೆನಿಯು 497 ಮನೆಗಳಿಗೆ 2 ದೀಪಗಳ ಸಂಪರ್ಕ, 1 ಸಾವಿರ ಮನೆಗಳಿಗೆ 4 ದೀಪಗಳ ಸಂಪರ್ಕ, 20 ಬೀದಿ ದೀಪಗಳನ್ನು ಅಳವಡಿಸಿತು. ಅಮಾಸೆಬೈಲು ಟ್ರಸ್ಟ್‌ ಮೂಲಕ 51 ಮನೆಗಳಿಗೆ, ಪೇಜಾವರ ಮಠದ ಸಹಯೋಗದಲ್ಲಿ 1 ಚರ್ಚ್‌, 32 ದೇವಸ್ಥಾನಗಳಿಗೆ ಉಚಿತವಾಗಿ ನೀಡಲಾಯಿತು. 750 ಮನೆಗಳಿಗೆ ಧರ್ಮಸ್ಥಳ ಯೋಜನೆ ಮೂಲಕ ಬೆಳಕು ಹರಿಸಲು ಆರ್ಥಿಕ ನೆರವು ದೊರೆಯಿತು.

ಟ್ರಸ್ಟ್‌ ಮುಂದಾಳತ್ವ
ಎ.ಜಿ. ಕೊಡ್ಗಿ ನೇತೃತ್ವದ ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌ ಗ್ರಾಮವನ್ನು ಸೋಲಾರ್‌ ಗ್ರಾಮವನ್ನಾಗಿ ಪರಿವರ್ತಿಸಲು ಶ್ರಮಿಸಿದೆ. 2012ರಲ್ಲಿ ವಿದ್ಯುತ್ಛಕ್ತಿ ಕೊರತೆಯ ಗ್ರಾಮೀಣ ಪ್ರದೇಶಗಳಿಗೆ ಕೇಂದ್ರದಿಂದ ಎಂಎನ್‌ ಆರ್‌ಇ ಸಬ್ಸಿಡಿ ಮೂಲಕ ಸೋಲಾರ್‌ ದೀಪ ಹಾಕುವ ಯೋಜನೆ ಬಂತು. ಇದರ ಸದ್ಬಳಕೆಗೆ ಟ್ರಸ್ಟ್‌ ಮುಂದಾಯಿತು. ಕೊಡ್ಗಿಯವರು 2.13 ಕೋ.ರೂ.ಗಳ ಯೋಜನಾ ರೂಪುರೇಷೆ ತಯಾರಿಸಿ ಕ್ರೆಡೆಲ್‌ ಮೂಲಕ ಪ್ರಸ್ತಾವನೆ ಕಳುಹಿಸಿದರು. 2014ರಲ್ಲಿ ಕೇಂದ್ರದಿಂದ ಶೇ.30 ಮತ್ತು ರಾಜ್ಯದಿಂದ ಶೇ. 20- ಹೀಗೆ ಒಟ್ಟು ಶೇ.50 ನೆರವಿಗೆ ಅನುಮೋದನೆ ದೊರೆಯಿತು. 2016ರಲ್ಲಿ ಅನುಷ್ಠಾನಕ್ಕೆ ಸಿದ್ಧವಾಗಿ 2017ರಲ್ಲಿ ಪೂರ್ಣಗೊಂಡು ಉದ್ಘಾ ಟನೆಯಾಯಿತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.