ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ಬೇಕು : ಗುರುರಾಜ್‌


Team Udayavani, Apr 20, 2018, 10:31 AM IST

Gururaj-Interview-19-4.jpg

ಕುಂದಾಪುರ: ಗೋಲ್ಡ್‌ ಕೋಸ್ಟ್‌ ನಲ್ಲಿ ನಡೆದ ಈ ಬಾರಿಯ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದಿತ್ತ ವೇಟ್‌ ಲಿಫ್ಟರ್‌ ಗುರುರಾಜ್‌ ಅವರು ಗುರುವಾರ ಹುಟ್ಟೂರು ಕುಂದಾಪುರಕ್ಕೆ ಆಗಮಿಸಿದ್ದು, ಈ ವೇಳೆ ‘ಉದಯವಾಣಿ’ಯೊಂದಿಗೆ ತಮ್ಮ ಸಾಧನೆಯ ಯಶೋಗಾಥೆಯನ್ನು ತೆರೆದಿಟ್ಟಿದ್ದಾರೆ.   

ಹುಟ್ಟೂರ ಭವ್ಯ ಸ್ವಾಗತದ ಕುರಿತು ಏನನ್ನಿಸುತ್ತಿದೆ ?
ನಿಜಕ್ಕೂ ಖುಷಿಯಾಗುತ್ತಿದೆ. ನಾನು ಈ ಮಟ್ಟದ ಸ್ವಾಗತವನ್ನು ನಿರೀಕ್ಷಿಸಿರಲಿಲ್ಲ. ಹುಟ್ಟೂರ ಜನರ ಈ ಅದ್ದೂರಿ ಸ್ವಾಗತಕ್ಕೆ ನಾನು ಚಿರಋಣಿ. ಎಲ್ಲ ಕಡೆ, ಮನೆಯಲ್ಲೂ ಸಮ್ಮಾನ ನಡೆಯಿತು. ಗ್ರಾಮೀಣ ಭಾಗದಲ್ಲಿ ಬೆಳೆದ ನನ್ನ ಈ ಸಾಧನೆಗೆ ಹೆತ್ತವರು, ಗುರುಗಳು, ಊರವರು, ಈ ರಾಜ್ಯದ ಜನರೇ ಪ್ರೇರಣೆ. ಅವರ ಆಶೀರ್ವಾದ, ಬೆಂಬಲ, ಸಹಕಾರದಿಂದ ಈ ಮಟ್ಟಿಗಿನ ಯಶಸ್ಸು ಸಿಕ್ಕಿದೆ. ನಿಮ್ಮ ಸಹಕಾರವಿದ್ದರೆ ಮುಂದಿನ ಒಲಿಂಪಿಕ್ಸ್‌, ಏಶ್ಯನ್‌ ಗೇಮ್ಸ್‌
ನಲ್ಲೂ ಪದಕ ಗೆದ್ದು ತರುತ್ತೇನೆ.

ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟಿದ್ದೀರಿ, ಹೇಗೆನಿಸುತ್ತಿದೆ?
ಹೌದು, ಇದು ನಿಜಕ್ಕೂ ಹೆಮ್ಮೆಯ ಸಂಗತಿ. ನಿಜ ಹೇಳಬೇಕೆಂದರೆ ಉದ್ಘಾಟನ ಸಮಾರಂಭದ ಪಥಸಂಚಲನದಲ್ಲಿ ಭಾಗವಹಿಸಬೇಕು ಎನ್ನುವುದು ಮಹದಾಸೆಯಾಗಿತ್ತು. ಆದರೆ ಮರುದಿನ ಬೆಳಗ್ಗೆ ನನಗೆ ಮೊದಲ ಸ್ಪರ್ಧೆ ಇದ್ದುದರಿಂದ ಸಾಧ್ಯವಾಗಲಿಲ್ಲ. ದೇಶದ ಮೊದಲ ಪದಕ ಗೆಲ್ಲುವ ಅವಕಾಶವಿದೆ. ನೀನು ಮೊದಲ ಪದಕ ಗೆದ್ದರೆ ಭಾರತಕ್ಕೆ ಅದೃಷ್ಟ ತರಲಿದೆ ಎಂದು ಸ್ನೇಹಿತರೆಲ್ಲ ಹುರಿದುಂಬಿಸಿದರು. ಅಷ್ಟೊಂದು ದೊಡ್ಡ ಮಟ್ಟದ ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿರುವುದರಿಂದ ಮೊದಲು ನರ್ವಸ್‌ ಆಗಿದ್ದೆ. ಆದರೆ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದೆ. ಬೆಳ್ಳಿ ಪದಕ ಗೆದ್ದೆ. ಖುಷಿಯಾಯಿತು.

ನಿಮ್ಮನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರಲ್ಲ?
ನನಗೆ ಮಣಿಪಾಲಕ್ಕೆ ಬರುವವರೆಗೆ ಗೊತ್ತೇ ಇರಲಿಲ್ಲ. ಜಿಲ್ಲಾಧಿಕಾರಿ ಘೋಷಣೆ ಮಾಡಿದಾಗ ಖುಷಿಯ ಜತೆಗೆ ಅಚ್ಚರಿಯೂ ಆಯಿತು. ಇದೊಂದು ಮಹತ್ವದ ಹೊಣೆಗಾರಿಕೆ. 

ಫಿಸಿಯೋ ಇಲ್ಲದಿರುವುದು ನಿಮಗೆ ಸಮಸ್ಯೆ ಆಗಿರಲಿಲ್ಲವೇ? 
ಭಾರತದ ಶೇ. 50ರಷ್ಟು ವೇಟ್‌ಲಿಫ್ಟರ್‌ಗಳು ಫಿಸಿಯೋ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸಿದರು. ನನಗೂ ಕಾಲಿಗೆ ನೋವಾಗಿತ್ತು. ನಾನು ಟೇಪ್‌ ಕಟ್ಟಿಕೊಂಡು ತರಬೇತಿ ಮಾಡುತ್ತಿದ್ದೆ. ಅದಕ್ಕೂ ಬಿಡುತ್ತಿರಲಿಲ್ಲ. ಲಿಫ್ಟರ್‌ಗಳು ನೋವಿನ ಮಧ್ಯೆಯೂ ಅನೇಕ ಪದಕ ಗೆದ್ದು ತಂದಿದ್ದಾರೆ. 

ನೀವು ರಾಜ್ಯದಿಂದ ವೈಯಕ್ತಿಕ ಪದಕ ಗೆದ್ದ ಏಕೈಕ ಕ್ರೀಡಾಳು ಅಲ್ಲವೆ?
ಹೌದು. ಕರ್ನಾಟಕಕ್ಕೆ ಇನ್ನಷ್ಟು ಹೆಚ್ಚಿನ ಪದಕಗಳು ಬರುವ ನಿರೀಕ್ಷೆ ಇತ್ತು. ಆದರೆ ಓರ್ವನಿಗೆ ಮಾತ್ರ ಸಿಕ್ಕಿರುವುದಕ್ಕೆ ಇಲ್ಲಿ ಕ್ರೀಡೆಗೆ ಸಿಗುತ್ತಿರುವ ಅಲ್ಪ ಪ್ರೋತ್ಸಾಹವೇ ಕಾರಣ. ಅದೇ ಹರಿಯಾಣಕ್ಕೆ 22 ಪದಕಗಳು ಬಂದಿವೆ. ಅಲ್ಲಿ ಆ್ಯತ್ಲೀಟ್‌ಗಳಿಗೆ ಭಾರೀ ಪ್ರೋತ್ಸಾಹ ನೀಡುವ ಜತೆ ಪದಕ ಗೆದ್ದವರಿಗೆ ಲಕ್ಷ, ಕೋಟಿ ರೂ. ಕೊಡುತ್ತಾರೆ. ನಮ್ಮಲ್ಲಿ ಚಿನ್ನ ಗೆದ್ದರೆ 25 ಸಾವಿರ ರೂ. ಮಾತ್ರ ಕೊಡುತ್ತಾರೆ. ನಾವು ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿ, ತರಬೇತಿಗಾಗಿ ಸಾಕಷ್ಟು ಹಣ ವ್ಯಯಸಿ, ಸ್ಪರ್ಧಿಸಿ ಪದಕ ಗೆದ್ದು ತರುತ್ತೇವೆ. ಆದರೆ ಸರಕಾರಗಳು ಇನ್ನಷ್ಟು  ಪ್ರೋತ್ಸಾಹ ಕೊಡಬೇಕಾಗಿದೆ ಎಂದರು.

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

16-kumbashi

Ganesh Chaturthi; ಆನೆಗುಡ್ಡೆ: ಸಂಭ್ರಮದ ಶ್ರೀ ವಿನಾಯಕ ಚತುರ್ಥಿ; ಹರಿದು ಬಂದ ಭಕ್ತ ಸಮೂಹ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.