![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 21, 2024, 6:40 AM IST
ಕುಂದಾಪುರ: ಭಾರೀ ಮಳೆ ಯಿಂದಾಗಿ ಘಾಟಿ ಪ್ರದೇಶಗಳಲ್ಲಿ ರಸ್ತೆ ಸಂಚಾರ ದುಸ್ತರಗೊಂಡಿರುವುದರಿಂದ ರಾಜಧಾನಿ ಬೆಂಗ ಳೂರು ಹಾಗೂ ಕರಾವಳಿ ಭಾಗದ ಜನರ ಅನುಕೂಲ ಕ್ಕಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮನವಿಗೆ ಸ್ಪಂದಿಸಿರುವ ರೈಲ್ವೆ ಸಚಿವಾಲಯ ಬೆಂಗಳೂರಿನಿಂದ ಮಂಗಳೂರುವರೆಗೆ ಸಂಚರಿಸಲಿ ರುವ ರೈಲನ್ನು ಮಂಗಳೂರಿನಿಂದ ಮಡಗಾಂವ್ವರೆಗೆ ವಿಶೇಷ ಲಿಂಕ್ ರೈಲನ್ನಾಗಿ ವಿಸ್ತರಿಸಲು ವ್ಯವಸ್ಥೆ ಕಲ್ಪಿಸಿದೆ.
ಬೆಂಗಳೂರು – ಮಂಗಳೂರು ರೈಲಿಗೆ ಮಡ ಗಾಂವ್ – ಮಂಗಳೂರು ಜಂಕ್ಷನ್ ಮಧ್ಯೆ 3 ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ.
ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ಅವರು ಸಂಸದರಿಗೆ ಸಮಸ್ಯೆ ಬಗ್ಗೆ ತಿಳಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಸಂಸದರು, ತತ್ಕ್ಷಣವೇ ರೈಲ್ವೇ ಖಾತೆ ರಾಜ್ಯ ಸಚಿವ ಸೋಮಣ್ಣನವರಿಗೆ ಲಿಂಕ್ ಸೇವೆಗಳ ಆರಂಭಕ್ಕೆ ತಿಳಿಸಿದರಲ್ಲದೆ, ಮಳೆಗಾಲದ ಸಮಸ್ಯೆ ಜಾಸ್ತಿ ಇರುವ ಅವಧಿಯಲ್ಲಿ ಬೆಂಗಳೂರು – ಕಾರವಾರ ಮಧ್ಯೆ ಪಡೀಲ್ ಬೈಪಾಸ್ ಮಾರ್ಗದಲ್ಲಿ ವಿಶೇಷ ರೈಲಿಗೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು – ಮಂಗಳೂರು ವಿಶೇಷ ರೈಲು ಬಂದ ಕೆಲವೇ ಹೊತ್ತಲ್ಲಿ ಈ ಲಿಂಕ್ ರೈಲು ಉಡುಪಿ- ಕುಂದಾಪುರ – ಕಾರವಾರ ಮಾರ್ಗವಾಗಿ ಗೋವಾ ಕಡೆಗೆ ತೆರಳಲಿದೆ. ಈ ಸೇವೆ ಮೂರು ದಿನಗಳ ಕಾಲ ಮುಂದುವರಿ ಯಲಿದ್ದು, ಪ್ರಯಾ ಣಿಕರಿಗೆ ಅನುಕೂಲವಾಗಲಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.