Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಸಂಸದರ ಮನವಿಗೆ ಸ್ಪಂದಿಸಿದ ನೈಋತ್ಯ ರೈಲ್ವೇ

Team Udayavani, Oct 2, 2024, 7:50 AM IST

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

ಕುಂದಾಪುರ: ದಸರಾ ಹಬ್ಬದ ಸಂದರ್ಭ ಬೆಂಗಳೂರಿನಿಂದ ಕರಾವಳಿಯ ಊರಿಗೆ ಬರಲು ಟಿಕೆಟ್‌ ಸಿಗದೇ ಸಮಸ್ಯೆಗೆ ಸಿಲುಕಿದ್ದ ನಾಗರಿಕರಿಗೆ ಸಂಸದರು ಹೊಸ ಸುದ್ದಿ ನೀಡಿದ್ದಾರೆ.

ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರ ನೆರವಿಗೆ ವಿಶೇಷ ರೈಲು ಓಡಿಸುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಯಂತೆ ನೈಋತ್ಯ ರೈಲ್ವೇ ಅ. 10 ಹಾಗೂ ಅ. 12ರಂದು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ.

ಕುಂದಾಪುರ ರೈಲು ಹಿತರಕ್ಷಣ ಸಮಿತಿಯ ಗಣೇಶ್‌ ಪುತ್ರನ್‌ ಅವರು ಬಸ್‌ ಮತ್ತು ಈಗಿರುವ ರೈಲುಗಳ ಟಿಕೆಟ್‌ ಸಂಪೂರ್ಣ ಖಾಲಿಯಾದ ಬಗ್ಗೆ ಸಂಸದರ ಗಮನ ಸೆಳೆದಿದ್ದರು. ಬಸ್‌ ಟಿಕೆಟ್‌ ದರ ಏರಿಕೆಯೂ ಆಗಿದೆ. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಂಸದರು ರೈಲ್ವೇ ಇಲಾಖೆಗೆ ನವರಾತ್ರಿ ವಿಶೇಷ ರೈಲುಗಳ ಪ್ರಯಾಣಕ್ಕೆ ಸೂಚನೆ ನೀಡಿದ್ದರು.

ಮೈಸೂರಿನಿಂದ ಮೆಜೆಸ್ಟಿಕ್‌ ಮಾರ್ಗವಾಗಿ ಒಂದು ರೈಲು ಮತ್ತೂಂದು ರೈಲು ಯಶವಂತಪುರದಿಂದ ಹೊರಡಲಿದೆ. ಈ ಬಗ್ಗೆ ಸಂಸದರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆ ನೀಡಿದ್ದಾರೆ.

ರೈಲಿನ ವೇಳಾಪಟ್ಟಿ ಹೀಗಿದೆ
ಅ. 10 ಗುರುವಾರ ರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡುವ ರೈಲು (ನಂ. 06569) ಪಡೀಲ್‌ ಬೈಪಾಸ್‌ ಮೂಲಕ ಶುಕ್ರವಾರ ಬೆ. 11.30ಕ್ಕೆ ಉಡುಪಿ ತಲುಪಿ ಸಂಜೆ 4ಕ್ಕೆ ಕಾರವಾರ ತಲುಪಲಿದೆ.

ಅ. 11ರ ಶುಕ್ರವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡುವ ರೈಲು (06570) ಕುಂದಾಪುರ ಮಧ್ಯ ರಾತ್ರಿ 2ಕ್ಕೆ ಉಡುಪಿ 2.40 ತಲುಪಿ ಮರುದಿನ ಮಧ್ಯಾಹ್ನ 1ಕ್ಕೆ ಯಶವಂತಪುರ ಹಾಗೂ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.

06585 ರೈಲು
ಅ. 12ರ ಶನಿವಾರ ರಾತ್ರಿ 9.20ಕ್ಕೆ ಮೈಸೂರಿನಿಂದ ಹೊರಟು (06585) ಮೆಜೆಸ್ಟಿಕ್‌ನಿಂದ ರಾತ್ರಿ 12.20 ಹಾಗೂ 12.40ಕ್ಕೆ ಯಶವಂತಪುರದಿಂದ ಹೊರಟು ಪಡೀಲ್‌ ಬೈಪಾಸ್‌ ಮೂಲಕ ರವಿವಾರ ಬೆ. 11.30ಕ್ಕೆ ಉಡುಪಿ ತಲುಪಿ 4ಕ್ಕೆ ಕಾರವಾರ ತಲುಪಲಿದೆ.

ಅ.13ರ ರವಿವಾರ ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು (06586) ಉಡುಪಿಗೆ ಮಧ್ಯರಾತ್ರಿ 2.40 ತಲುಪಿ ಅ. 14ರ ಸೋಮವಾರ ಮಧ್ಯಾಹ್ನ ಯಶವಂತಪುರ 1ಕ್ಕೆ ಮತ್ತು ಸಂಜೆ 4.40ಕ್ಕೆ ಮೈಸೂರು ಸಂಜೆ 4.40 ಕ್ಕೆ ತಲುಪಲಿದೆ.

ಮನವಿಗೆ ಸ್ಪಂದನ
ನವರಾತ್ರಿ ಹಾಗೂ ವಿಜಯ ದಶಮಿಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಕರಾವಳಿಗೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೇ ಎರಡು ವಿಶೇಷ ರೈಲುಗಳನ್ನು ಹೊರಡಿಸುವುದಾಗಿ ಪ್ರಕಟಿಸಿದೆ. ಇದಕ್ಕಾಗಿ ನೈಋತ್ಯ ರೈಲ್ವೇ, ಸಚಿವ ಆಶ್ವಿ‌ನಿ ವೈಷ್ಣವ್‌ರಿಗೆ ವಂದನೆಗಳು.
ಕೋಟ ಶ್ರೀನಿವಾಸ ಪೂಜಾರಿ, ಸಂಸದ

 

ಟಾಪ್ ನ್ಯೂಸ್

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

14(1)

Pajagudde ಲಾರಿ-ಬೈಕ್‌ ಅಪಘಾತ ಮೃತಪಟ್ಟ ನಾಲ್ವರ ಅಂತಿಮ ಸಂಸ್ಕಾರ

Hebri: ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಸರಕಾರಿ ಬಸ್‌ ಸಿಬಂದಿ

Hebri: ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಸರಕಾರಿ ಬಸ್‌ ಸಿಬಂದಿ

Court-1

Kundapura: ಚೆಕ್‌ ಅಮಾನ್ಯ ಪ್ರಕರಣ ಆರೋಪಿ ದೋಷಮುಕ್ತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.