![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 9, 2019, 6:00 AM IST
ಉಡುಪಿ: ಪಲಿಮಾರು ಪರ್ಯಾಯ ಶ್ರೀಗಳ ಮಹತ್ವಾಕಾಂಕ್ಷಿ ಯೋಜನೆ ಸುವರ್ಣ ಗೋಪುರ ಸಮರ್ಪಣೆ ಅಂಗವಾಗಿ ಜೂ. 9ರಂದು ಬ್ರಹ್ಮ ಕಲಶೋತ್ಸವ ನಡೆಯಲಿದೆ.
ಶ್ರಿಕೃಷ್ಣದೇವರಿಗೆ 108 ಕಲಶಗಳ ಅಭಿಷೇಕಗಳು ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ನಡೆಯಲಿದೆ. ಅನಂತರ ಮಹಾಪೂಜೆ ಸಂಪನ್ನಗೊಳ್ಳಲಿದೆ. ಪರ್ಯಾಯ ಶ್ರಿಪಲಿಮಾರು ಮಠದ ಶ್ರಿವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸಹಿತ ವಿವಿಧ ಮಠಾಧೀಶರೇ ಈ ಕಲಶಾಭಿಷೇಕವನ್ನು ನಡೆಸಲಿದ್ದಾರೆ. ಕಲಶಗಳ ಪೂಜೆಗಳನ್ನು ಗರ್ಭಗುಡಿ ಹೊರ ಪ್ರಾಕಾರದಲ್ಲಿ ನಡೆಸಲಾಗುತ್ತದೆ. ಇದೇ ವೇಳೆ ಬೆಂಗಳೂರಿನ ರಾಮಕೃಷ್ಣ ಭಜನಾ ಸಭಾ, ಶ್ರೀರಂಗಂನ ಶ್ರೀನಾಮಸಂಕೀರ್ತನ ವೃಂದ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟದವರು ನಡೆಸಿಕೊಡಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಅನ್ನಸಂತರ್ಪಣೆಯನ್ನು ಹೊರನಾಡು ದೇವಸ್ಥಾನದ ಧರ್ಮದರ್ಶಿ ಭೀಮೇಶ್ವರ ಜೋಷಿಯವರು ಉದ್ಘಾಟಿಸುವರು. ಸಂಜೆ ನಡೆಯುವ ಸಭೆಯಲ್ಲಿ ಶ್ರೀಪೇಜಾವರ ಶ್ರೀಗಳ ಅಧ್ಯಕ್ಷತೆಯಲ್ಲಿ ಶ್ರೀಉತ್ತರಾದಿ ಮಠದ ಶ್ರೀಸತ್ಯಾತ್ಮತೀರ್ಥ ಶ್ರೀಪಾದರು ಸಮರ್ಪಣ ಸಂದೇಶ ನೀಡುವರು. ತಿರುವಾಂಕೂರು ಮಹಾರಾಜ ಪದ್ಮನಾಭದಾಸರು ಭಾಗವಹಿಸುವರು. ಕಳೆದ ಹತ್ತು ದಿನಗಳಿಂದ ಸ್ಥಳೀಯ ಮತ್ತು ಪರ ಊರಿನ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಜೂ. 10ರಂದು ಸಮರ್ಪಣೋತ್ಸವ ಸಮಾರೋಪ ಸಮಾರಂಭ ಜರಗಲಿದೆ.
ಜೂ. 10ರ ಅಪರಾಹ್ನ 2ರಿಂದ 5ರ ವರೆಗೆ ಸಂಸ್ಕೃತ ವಿದ್ಯಾರ್ಥಿಗಳಿಂದ “ಸಂಸ್ಕೃತ ಗೋಪುರಮ್’ ಕಾರ್ಯಕ್ರಮ ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ ಸಂಪನ್ನಗೊಳ್ಳಲಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.