ಗುರುಗಳ ಮಾರ್ಗದರ್ಶನದಲ್ಲಿ ಶ್ರೀಕೃಷ್ಣ ಪೂಜೆ
ಭಾವೀ ಪರ್ಯಾಯ ಅದಮಾರು ಶ್ರೀಗಳಿಗೆ ಪೌರಸಮ್ಮಾನ
Team Udayavani, Jan 9, 2020, 5:40 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪೂಜಾದೀಕ್ಷಿತರಾಗಲಿರುವ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ಬುಧವಾರ ನಗರಸಭೆ ವತಿಯಿಂದ ಪೌರಾಡಳಿತ ಮತ್ತು ಕಂದಾಯ ಸಚಿವ ಆರ್. ಅಶೋಕ್ ಅವರು ಪೌರಸಮ್ಮಾನ ನೀಡಿ ಗೌರವಿಸಿದರು.
ಆಶ್ರಮ ನೀಡಿದ ಮತ್ತು ವಿದ್ಯೆ ನೀಡಿದ ಗುರುಗಳಿಬ್ಬರ ಮಾರ್ಗದರ್ಶನದಲ್ಲಿ ಶ್ರೀಕೃಷ್ಣ ಪೂಜೆಯನ್ನು ನಡೆಸುವುದಾಗಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನುಡಿದರು.
ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ ಶುಭಕೋರಿದರು. ಶ್ರೀ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ಇಂದಿನ ಯುವಕ- ಯುವತಿಯರಿಗೆ ಧರ್ಮವನ್ನು ಅರ್ಥವಾಗುವಂತೆ ಹೇಳಬೇಕಾಗಿದೆ. ಆಚಾರದಷ್ಟೇ ತಣ್ತೀಕ್ಕೂ ಆದ್ಯತೆ ನೀಡಬೇಕಾಗಿದೆ. ಶ್ರೀಕೃಷ್ಣ ಕರ್ಮ ಯೋಗಿಯಾದರೂ ಜ್ಞಾನಮಾರ್ಗಕ್ಕೆ ಆದ್ಯತೆ ನೀಡಿದಂತೆ ತಣ್ತೀಪ್ರಸಾರಕ್ಕೆ ಆದ್ಯತೆ ಸಿಗಬೇಕಾಗಿದೆ ಎಂದು ಅಭಿನಂದನ ಭಾಷಣ ಮಾಡಿದ ಶಿಕ್ಷಣ ತಜ್ಞ ಡಾ| ಗುರುರಾಜ ಕರ್ಜಗಿ ಅವರು ಹೇಳಿದರು.
ಶ್ರೀ ವಿಬುಧೇಶತೀರ್ಥರು ಶಿಕ್ಷಣದ ಗುಣಮಟ್ಟವನ್ನು ಕಾಪಾಡುವಲ್ಲಿ ವಿಶೇಷ ಆಸ್ಥೆ ವಹಿಸಿದವರು, ಶ್ರೀ ವಿಶ್ವಪ್ರಿಯತೀರ್ಥರು ಧರ್ಮದ ಸಾರಾಂಶವನ್ನು ಹೇಳುವಲ್ಲಿ ನಿಷ್ಣಾತರು. ಅಂಥವರ ಪರಂಪರೆಯಲ್ಲಿ ಬಂದ ಶ್ರೀ ಈಶಪ್ರಿಯತೀರ್ಥರಿಂದ ಉದಾತ್ತ ಸೇವೆಗಳು ಸಲ್ಲುವಂತಾಗಲಿ ಎಂದರು.
ಪರಿಸರ ಕಾಳಜಿಗೆ ಶ್ಲಾಘನೆ
ಸ್ವಾಮೀಜಿ ಅವರ ಪರಿಸರ ಕಾಳಜಿ ಶ್ಲಾಘನೀಯ. ಜಗತ್ತಿನೆಲ್ಲೆಡೆ ಪರಿಸರ ಮಾಲಿನ್ಯ ಉಂಟಾಗಿರುವ ಈ ಸಂದರ್ಭದಲ್ಲಿ ಪರಿಸರವನ್ನು ಉಳಿಸುವ ಕಾಳಜಿ ತೋರಬೇಕಾಗಿದೆ. ಸರಕಾರ ಸಂಪೂರ್ಣ ಸಹಕಾರವನ್ನು ಪರ್ಯಾಯಕ್ಕೆ ನೀಡಲಿದೆ ಎಂದು ಸಚಿವ ಅಶೋಕ್ ಹೇಳಿದರು.
ಹಿಂದಿನ ಎಸ್ಪಿ ಅಣ್ಣಾಮಲೈ ಶುಭಾಶಂಸನೆಗೈದರು. ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಜಿ. ಜಗದೀಶ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯಕುಮಾರ ಸೊರಕೆ, ಮಾಜಿ ಶಾಸಕ ಯು.ಆರ್.ಸಭಾಪತಿ, ಪೌರಾಯುಕ್ತ ಆನಂದ ಕಲ್ಲೋಳಿಕರ್, ಅದಮಾರು ಮಠದ ದಿವಾನ್ ಲಕ್ಷ್ಮೀನಾರಾಯಣ ಮುಚ್ಚಿಂತಾಯ ಉಪಸ್ಥಿತರಿದ್ದರು.
ವೆಬ್ಸೈಟ್ ಅನಾವರಣ
ದಿಯಾ ಸಿಸ್ಟಮ್ಸ್ನವರು ಅಭಿವೃದ್ಧಿಪಡಿಸಿದ ಅದಮಾರು ಮಠದ ವೆಬ್ಸೈಟ್ನ್ನು ಪಲಿಮಾರು ಶ್ರೀಗಳು ಬಿಡುಗಡೆಗೊಳಿಸಿದರು. ವೆಬ್ಸೈಟ್ ಕುರಿತು ರಾಜಿತ್ ವಿವರಿಸಿದರು. ಶ್ರೀಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಸ್ವಾಗತಿಸಿ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್ ಪ್ರಸ್ತಾವನೆಗೈದರು. ಪೂರ್ಣಪ್ರಜ್ಞ ಕಾಲೇಜಿನ ಪ್ರಾಧ್ಯಾಪಕ ಡಾ| ಟಿ.ಎಸ್. ರಮೇಶ್ ಕಾರ್ಯಕ್ರಮ ನಿರ್ವಹಿಸಿದರು.
ಬದ್ಧತೆಯಿಂದ ನಿರ್ವಹಣೆ
ನಾನು ಯಾವುದೇ ಕೆಲಸಗಳನ್ನು ಮುಂಚಿತವಾಗಿ ಮಾಡುತ್ತೇನೆ ಎಂದು ಹೇಳುವುದಿಲ್ಲ. ಆದರೆ ಆ ಕೆಲಸಗಳನ್ನು ಮಾಡಲು ಬದ್ಧನಾಗಿ ಅದನ್ನು ಮುಗಿಸಲು ಪ್ರಯತ್ನಿಸುತ್ತೇನೆ. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಈಗಲೇ ಘೋಷಿಸುವುದಿಲ್ಲ. ಆದರೆ ಅದರ ಬಗ್ಗೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದರು.
ಪಲಿಮಾರು ಸ್ವಾಮೀಜಿ ಅವರು ನಮ್ಮ ಪರ್ಯಾಯದ ಅವಧಿಯಲ್ಲಿ ಎರಡು ವರ್ಷ ನಮ್ಮೊಡನೆ ಇದ್ದು, ಶಾಸ್ತ್ರ ಪಾಠಗಳನ್ನು ಹೇಳುವುದಾಗಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಾನು ಅವರಿಗೆ ಚಿರಋಣಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.