ಕುಂದಾಪುರ : ವೈಭವೋಪೇತ ಪುರಮೆರವಣಿಗೆ

 ಇಂದು ಶ್ರೀ ಮಹಾಕಾಳಿ ದೇವಿಗೆ ಸ್ವರ್ಣ ಮುಖವಾಡ ಸಮರ್ಪಣೆ

Team Udayavani, Jan 26, 2020, 8:54 PM IST

2601KDPP24

ಕುಂದಾಪುರ: ಆರಾಧ್ಯದೇವಿ, ಮಾತೃ ಸ್ವರೂಪಿಣಿ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದ 30 ನೇ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಸ್ವರ್ಣ ಮುಖವಾಡ ಸಮರ್ಪಣೆ ಜ.27 ರಂದು ನಡೆಯಲಿದ್ದು, ರವಿವಾರ ಸಂಜೆ ಖಾರ್ವಿ ಸಮುದಾ ಯದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದ ಪುರ ಮೆರವಣಿಗೆಯು ವಾದ್ಯ ಘೋಷಗಳೊಂದಿಗೆ ನಡೆಯಿತು.

ಶೃಂಗೇರಿಯ ಉಭಯ ಶ್ರೀಗಳಿಂದ ಅಶೀರ್ವಾದ ಪಡೆದು ಕುಂದಾಪುರಕ್ಕೆ ಆಗಮಿಸಿದ ಶ್ರೀ ಮಹಾಕಾಳಿ ದೇವಿಗೆ ಸಮರ್ಪಿಸಲಿರುವ ಸ್ವರ್ಣ ಮುಖವಾಡ, ಶ್ರೀ ನಾಗ ದೇವರ ರಜತ ಕವಚವನ್ನು ಇಲ್ಲಿನ ಶಾಸ್ತ್ರಿ ಸರ್ಕಲ್‌ ಬಳಿ ಸ್ವಾಗತಿಸಲಾಯಿತು. ಅಲ್ಲಿಂದ ಆರಂಭಗೊಂಡ ಸ್ವರ್ಣ ಮುಖವಾಡ ಹಾಗೂ ಹೊರ ಕಾಣಿಕೆಯ ಪುರ ಮೆರವಣಿಗೆಯು ಪಾರಿಜಾತ ಸರ್ಕಲ್‌ ಮೂಲಕವಾಗಿ ಹೊಸ ಬಸ್‌ ನಿಲ್ದಾಣವಾಗಿ ಶ್ರೀ ಮಹಾಕಾಳಿ ದೇವಸ್ಥಾನದವರೆಗೆ ಅದ್ಧೂರಿಯಾಗಿ ನೆರವೇರಿತು.

3 ಸಾವಿರಕ್ಕೂ ಮಿಕ್ಕಿ ಮಂದಿ ಚೆಂಡೆ ವಾದನ, ಯುವತಿಯರ ಕುಣಿತ ಭಜನೆ, ಸಂಪ್ರದಾಯ ಬದ್ಧವಾಗಿ ಒಂದೇ ಬಣ್ಣದ ಸೀರೆಯುಟ್ಟ ಮಹಿಳಾಮಣಿಗಳು, ಹೊರೆಕಾಣಿಕೆ ಹೊತ್ತಂತಹ ಹತ್ತಾರು ವಾಹನಗಳೊಂದಿಗೆ ಮೆರವಣಿಗೆ ಸಾಗಿ ಬಂತು. ದೇವಸ್ಥಾನದಲ್ಲಿ ಸಂಜೆ ಬ್ರಹ್ಮಕಲಶ ಸ್ಥಾಪನೆ, ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.

ಈ ಪುರ ಮೆರವಣಿಗೆಯಲ್ಲಿ ಕೊಂಕಣ ಖಾರ್ವಿ ಸಮುದಾದಯದ 3 ಸಾವಿರಕ್ಕೂ ಮಿಕ್ಕಿ ಮಂದಿ ಪಾಲ್ಗೊಂಡಿದ್ದರು. ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದ 30 ನೇ ವರ್ಷದ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಜ.23 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಶ್ರೀ ಅಮ್ಮನವರ ಪುಷ್ಪಾಲಂಕೃತ ಪಲ್ಲಕ್ಕಿ ಉತ್ಸವದ ಪುರ ಮೆರವಣಿಗೆಯು ಜ.24 ರಂದು ಮದ್ದುಗುಡ್ಡೆಯಲ್ಲಿ ಹಾಗೂ ಜ.25 ರಂದು ಬಹಾದ್ದೂರ್‌ ಷಾ ವಾರ್ಡಿನಲ್ಲಿ ನೆರವೇರಿತು.

ಇಂದು ಸಮರ್ಪಣೆ
ಶ್ರೀ ಮಹಾಕಾಳಿ ದೇವಿಗೆ ಸ್ವರ್ಣ ಮುಖವಾಡ ಸಮರ್ಪಣೆಯು ಜ.27 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಅದಕ್ಕೂ ಮೊದಲು ಶ್ರೀ ನಾಗದೇವರಿಗೆ ರಜತ ಮುಖ ಕವಚ ಧಾರಣೆ ನೆರವೇರಲಿದೆ. ಸಂಜೆ ರಂಗಪೂಜೆ, ಮಹಾ ಮಂಗಳಾರತಿ, ಪ್ರತಿಷ್ಠಾ ಪಲ್ಲಕ್ಕಿ ಉತ್ಸವ, ಪುರ ಮೆರವಣಿಗೆ, ವಿಶೇಷ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ಶ್ರೀ ಮಹಾಕಾಳಿ ದೇವಸ್ಥಾನ ಕುಂದಾಪುರದ ಅಧ್ಯಕ್ಷ ಪ್ರಕಾಶ್‌ ಖಾರ್ವಿ, ಆಡಳಿತ ಮೊಕ್ತೇಸರರಾದ ಪಾಂಡುರಂಗ ಸಾರಂಗ, ಆನಂದ ನಾಯ್ಕ, ಶಂಕರ ನಾಯ್ಕ, ಅಖೀಲ ಭಾರತ ಕೊಂಕಣ ಖಾರ್ವಿ ಮಹಾ ಸಭಾದ ಮಾಜಿ ಅಧ್ಯಕ್ಷ ಕೆ.ವಿ. ಖಾರ್ವಿ, ವಿದ್ಯಾರಂಗ ಮಿತ್ರ ಮಂಡಳಿಯ ಅಧ್ಯಕ್ಷ ದಿನಕರ ಪಠೇಲ್‌, ಪುರಸಭಾ ಸದಸ್ಯರಾದ ಸಂದೀಪ್‌ ಖಾರ್ವಿ, ರಾಘವೇಂದ್ರ ಖಾರ್ವಿ, ಚಂದ್ರಶೇಖರ ಖಾರ್ವಿ, ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.