ಪ್ರಕೃತಿ, ದೇಶವನ್ನು ಪ್ರೀತಿಸುತ್ತ ಬದುಕು ಸಾಗಿಸಬೇಕು: ಕಶೆಕೋಡಿ

ಶಿವಪಾಡಿ ದೇಗುಲ ಅತಿರುದ್ರ ಮಹಾಯಾಗ ಧಾರ್ಮಿಕ ಸಭೆ

Team Udayavani, Feb 25, 2023, 1:21 AM IST

ಪ್ರಕೃತಿ, ದೇಶವನ್ನು ಪ್ರೀತಿಸುತ್ತ ಬದುಕು ಸಾಗಿಸಬೇಕು: ಕಶೆಕೋಡಿ

ಮಣಿಪಾಲ: ಪ್ರಕೃತಿ ಮಾತೆ, ಭಾರತವನ್ನು ಪ್ರೀತಿಸುತ್ತ, ಪೂಜಿಸುತ್ತ ಬದುಕು ಸಾಗಿಸಿದಾಗ ಜೀವನ ಸಾರ್ಥಕವಾಗಲಿದೆ. ಪ್ರಕೃತಿಯೇ ದೇವರು, ನಮಗೆ ಪ್ರಕೃತಿ ಎಲ್ಲವನ್ನೂ ಕೊಟ್ಟಿದೆ. ಆದರೆ ನಾವು ಪ್ರಕೃತಿಗೆ ವಿರುದ್ಧವಾಗಿ ಸಾಗುತ್ತಿದ್ದೇವೆ. ಈ ಮನಸ್ಥಿತಿ ಬದಲಾವಣೆ ಮಾಡಿಕೊಂಡರೆ ಮಾತ್ರ ಬದುಕು ಸುಂದರವಾಗಲಿದೆ ಎಂದು ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಸೂರ್ಯನಾರಾಯಣ ಭಟ್‌ ಕಶೆಕೋಡಿ ತಿಳಿಸಿದರು.

ಶಿವಪಾಡಿ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಶುಕ್ರವಾರ ನಡೆದ ಅತಿರುದ್ರ ಮಹಾಯಾಗದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.

ಮಾನವೀಯತೆಯಿಂದ ಬದುಕು ವುದೇ ಮಾನವತ್ವ. ಪ್ರಕೃತಿಯನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ. ಪ್ರಸ್ತುತ ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯನ್ನು ನಾಶ ಮಾಡಿ ನಮ್ಮ ಅಧಃಪತನಕ್ಕೆ ನಾವೇ ಕಾರಣರಾಗುತ್ತಿದ್ದೇವೆ. ಹಿಂದಿ ನಿಂದಲೂ ಪ್ರಕೃತಿ, ಸಮಾಜಕ್ಕಾಗಿ ಬದುಕಿದವರನ್ನು ಸ್ಮರಿಸುತ್ತ ಬಂದಿ ದ್ದೇವೆ. ಮಾನವೀಯತೆಯನ್ನು ಮರೆತ ಪರಿಣಾಮ ಮಾಲಿನ್ಯತೆಯನ್ನು ತುಂಬಿಕೊಳ್ಳುತ್ತಿದ್ದೇವೆ ಎಂದರು.

ಅರ್ಬಿಕೋಡಿ ಶ್ರೀ ವೈಷ್ಣವಿದುರ್ಗಾ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಜಯರಾಜ್‌ ಹೆಗ್ಡೆ ಉದ್ಘಾಟಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಚಾಲಕ ನಾರಾಯಣ ಶೆಣೈ ಮಾತನಾಡಿ, ಲೋಕ ಉಳಿಯಬೇಕಾದರೆ ಹಿಂದೂ ಸನಾತನ ಧರ್ಮ ಉಳಿಯಬೇಕು. ಲೋಕ ಕಲ್ಯಾ ಣಾರ್ಥವಾಗಿ ನಡೆಯುತ್ತಿರುವ ಯಾಗದ ಉದ್ದೇಶ ಈಡೇರಲಿ ಎಂದರು.
ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲದ ಆಡಳಿತ ಮೊಕ್ತೇಸರ ಶ್ರೀನಿವಾಸ ಉಪಾಧ್ಯ ಮಾತನಾಡಿ, ಮನಸ್ಸಿಗೆ ನೆಮ್ಮದಿ ಕೊಡುವ ತಾಣವೇ ದೇವಸ್ಥಾನ. ನಿತ್ಯ ದೇಗುಲ ಸಂದರ್ಶನದಿಂದ ಮಾನಸಿಕ ಪ್ರಫ‌ುಲ್ಲತೆ ಲಭಿಸಲಿದೆ ಎಂದರು.

ಯಾಗ ಸಮಿತಿ ಅಧ್ಯಕ್ಷರೂ ಆದ ಶಾಸಕ ಕೆ. ರಘುಪತಿ ಭಟ್‌, ದ.ಕ. ಜಿಲ್ಲಾ ಪದ್ಮಶಾಲಿ ಮಹಾಸಭಾದ ಅಧ್ಯಕ್ಷ ರಾಮದಾಸ ಶೆಟ್ಟಿಗಾರ್‌, ರಾಜಪುರ ಸಾರಸ್ವತ ಮಹಾಸಭಾದ ಅಧ್ಯಕ್ಷ ಶ್ರೀಶ ನಾಯಕ್‌, ಉದ್ಯಮಿ ದೇವಿಚರಣ್‌ ಕಾವಾ, ಹವ್ಯಕ ಬ್ರಾಹ್ಮಣ ಸಂಘದ ಅಧ್ಯಕ್ಷ ಉದಯ ಶಂಕರ್‌, ಧ.ಗ್ರಾ.ಯೋಜನೆಯ ನಿರ್ದೇಶಕ ಶಿವರಾಯ, ಮನೋಜ್‌ ಪ್ರಭು, ಮೊಕ್ತೇಸರರಾದ ದಿನೇಶ್‌ ಪ್ರಭು, ಶುಭಕರ ಸಾಮಂತ್‌, ದೇಗುಲದ ಶಾಶ್ವತ ಟ್ರಸ್ಟಿ ದಿನೇಶ್‌ ಶ್ರೀಧರ ಸಾಮಂತ್‌, ಟ್ರಸ್ಟಿ ಸಂಜಯ ಪ್ರಭು, ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಕುಕ್ಕೆಹಳ್ಳಿ ಉಪಸ್ಥಿತರಿದ್ದರು. ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ಮಹೇಶ್‌ ಠಾಕೂರ್‌ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ವಂದಿಸಿ, ಸಂಘಟನ ಕಾರ್ಯದರ್ಶಿ ಬಾಲಕೃಷ್ಣ ಮದ್ದೋಡಿ ನಿರೂಪಿಸಿದರು.

ಹಿಂದೂ ಸಂಸ್ಕೃತಿಗೆ ಒತ್ತು ನೀಡಿ
ಹಿಂದೂ ಸಂಸ್ಕೃತಿಯನ್ನು ಉಳಿಸಬೇಕಾದರೆ ಮನೆಯಲ್ಲೇ ಮಕ್ಕಳಿಗೆ ಸಂಸ್ಕಾರ ಹಾಗೂ ಸತ್ಯ ಹೇಳುವುದನ್ನು ಕಲಿಸಬೇಕು. ಮಹಿಳೆಯರು ದೇಶಿ ಸಂಸ್ಕೃತಿಯನ್ನು ಮರೆತರೆ ಮಕ್ಕಳ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗಾಗಿ ಮನೆಯ ಹಿರಿಯರು ಮಕ್ಕಳಿಗೆ ಆದರ್ಶವಾಗಿರಬೇಕು ಎಂದು ಸೂರ್ಯನಾರಾಯಣ ಭಟ್‌ ಕಶೆಕೋಡಿ ಸಲಹೆ ನೀಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.