ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ


Team Udayavani, Nov 5, 2024, 12:57 AM IST

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮಣಿಪಾಲ: ಜಿಲ್ಲೆಯ ವಿವಿಧ ಮೀನುಗಾರಿಕೆ ಬಂದರುಗಳ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸ ಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿ ಯಲ್ಲಿ ಸೋಮವಾರ ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಜಿಲ್ಲೆಯ ವಿವಿಧ ಬಂದರುಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕೋಡಿ ಕನ್ಯಾನ ಬಂದರಿನ ಡ್ರಜ್ಜಿಂಗ್‌ ಸಹಿತ 13.50 ಕೋ.ರೂ.ಗಳ ವಿವಿಧ ಕಾಮಗಾರಿಯ ಪ್ರಸ್ತಾವನೆಯು ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ಕೋಡಿಬೆಂಗ್ರೆ ಮೀನು ಹರಾಜು ಕೇಂದ್ರದ ಮೇಲ್ಛಾವಣಿ 58 ಲಕ್ಷ ರೂ.ಗಳಲ್ಲಿ ಆಗಬೇಕಿದ್ದು, ಇನ್ನೂ ಅನುದಾನ ಮಂಜೂರಾಗಿಲ್ಲ. ಈ ಎರಡು ಕಾಮಗಾರಿಗಳನ್ನು ಆದಷ್ಟು ಶೀಘ್ರ ಕೈಗೆತ್ತಿಕೊಳ್ಳಲು ಸೂಚಿಸಿದರು.

ಸ್ಥಳ ಪರಿಶೀಲನೆಗೆ ಸೂಚನೆ
ಮರವಂತೆ ಬ್ರೇಕ್‌ ವಾಟರ್‌ ಕಾಮಗಾರಿ ಪೂರ್ಣಗೊಳಿಸಲು ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.

180 ಕೋ.ರೂ. ವೆಚ್ಚದ ಹೆಜಮಾಡಿ ಬಂದರು ಕಾಮಗಾರಿ ಸಂಬಂಧ ಹೆಚ್ಚುವರಿ ಭೂ ಅನುದಾನಕ್ಕಾಗಿ 22 ಕೋ.ರೂ. ವೆಚ್ಚ ಏರಿಕೆಯಾಗಿದ್ದು, ಈ ಕಡತ ಸದ್ಯ ಹಣಕಾಸು ಇಲಾಖೆಯಲ್ಲಿದೆ. ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಕೂಡಲೇ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಮೋದನೆ ಪಡೆಯಬೇಕು ಎಂದು ಸೂಚಿಸಿದರು.

ಮಲ್ಪೆ-ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ; ಕಾಮಗಾರಿ ಆರಂಭಿಸಲು ಸೂಚನೆ
ಮಣಿಪಾಲ: ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿಗಳ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಶಾಸಕರಾದ ಯಶ್‌ಪಾಲ್‌ ಸುವರ್ಣ, ಸುರೇಶ್‌ ಶೆಟ್ಟಿ ಗುರ್ಮೆ ಉಪಸ್ಥಿತಿಯೊಂದಿಗೆ ಅಧಿಕಾರಿಗಳ ಸಭೆ ನಡೆಯಿತು. ಪರ್ಕಳ ಹೆದ್ದಾರಿ ಕಾಮಗಾರಿ ನ್ಯಾಯಾಲಯ ತಡೆಯಾಜ್ಞೆ ಸಂಬಂಧಿಸಿ ನ್ಯಾಯಾಲಯದ ಆದೇಶವು ಸರಕಾರದ ಪರವಾಗಿ ಬಂದಿದ್ದು, ಭೂ ಮಾಲಕರಿಗೆ ಕೂಡಲೇ ಪರಿಹಾರದ ಹಣ ನೀಡಿ ಕಾಮಗಾರಿ ಪ್ರಾರಂಭಿಸಲು ಸಂಸದರು ಸೂಚಿಸಿದರು.

ಮಲ್ಪೆ-ಆದಿ ಉಡುಪಿ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆಯ ವಿಳಂಬದಿಂದ ಕುಂಠಿತವಾಗಿದ್ದು, ಈಗಾಗಲೇ ಭೂ ಮಾಲಕರಿಗೆ ಪರಿಹಾರದ ಮೊತ್ತದ ಬಗ್ಗೆ ನೋಟಿಸ್‌ ನೀಡಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆಯ 214 ಕಡತಗಳ ಪೈಕಿ 19 ಸರಕಾರಿ ಜಮೀನು ಹೊರತುಪಡಿಸಿ 195 ಖಾಸಗಿ ಜಮೀನು ಮಾಲಕರ ಪೈಕಿ 51 ನೋಟೀಸ್‌ ಸ್ವೀಕರಿಸಿದ್ದು, 48 ಮಂದಿ ಪರಿಹಾರ ಮೊತ್ತ ಪಡೆಯಲು ತಮ್ಮ ದಾಖಲಾತಿಗಳನ್ನು ಒದಗಿಸಿದ್ದಾರೆ. ಬಾಕಿ ಇರುವ 144 ಜಮೀನು ಮಾಲಕರನ್ನು ಸಂಪರ್ಕಿಸಿ ನೋಟಿಸ್‌ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ನ.6 ರಿಂದಲೇ ಮಲ್ಪೆ-ಆದಿಉಡುಪಿ ಕಾಮಗಾರಿ ಆರಂಭಿಸಲು ಯಶ್‌ಪಾಲ್‌ ಸೂಚಿಸಿದರು.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.