ಕಥೆಗಳಿಗೆ ಬದುಕನ್ನು ಬದಲಿಸುವ ಶಕ್ತಿ ಇದೆ: ಡಾ| ಸಂಧ್ಯಾ ಪೈ

ತುಷಾರ ಕಥಾಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ; "ಕೇಳು ಸಖಿ' ಶಿಬಿರ ಸಮಾರೋಪ

Team Udayavani, Nov 24, 2019, 6:14 AM IST

mm-33

ತುಷಾರ ಕಥಾಸ್ಪರ್ಧೆಯ ಬಹುಮಾನ ವಿಜೇತರು ಮತ್ತು "ಕೇಳು ಸಖೀ' ಶಿಬಿರದ ಶಿಬಿರಾರ್ಥಿಗಳು.

ಕೋಟ: ಉತ್ತಮ ಕಥೆಗಳಿಗೆ ಓದುಗರನ್ನು ಸದಾ ಕಾಡುವ ಮತ್ತು ಬದುಕಿನ ದೃಷ್ಟಿಕೋನವನ್ನು ಬದಲಾಯಿಸುವ ಸಾಮರ್ಥ್ಯ ಇದೆ ಎಂದು ತರಂಗ ಮತ್ತು ತುಷಾರ ನಿಯತಕಾಲಿಕಗಳ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಹೇಳಿದರು.

ಅವರು, ನ. 23ರಂದು ಕೋಟದ ಕಾರಂತ ಕಲಾಭವನದಲ್ಲಿ, ತುಷಾರ ಮಾಸಪತ್ರಿಕೆಯು ಕ್ಯಾಲಿಫೋರ್ನಿಯಾದ ಸಾಹಿತ್ಯಾಂಜಲಿ ಸಂಸ್ಥೆಯ ಸಹಭಾಗಿತ್ವದಲ್ಲಿ ಸಂಯೋಜಿಸಿದ ಕಥಾಸ್ಪರ್ಧೆಯ ಬಹುಮಾನ ವಿತರಣೆ ಮತ್ತು “ಕೇಳು ಸಖಿ’ ಲೇಖಕಿಯರ ಶಿಬಿರದ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳೆಗೆ ಕುಟುಂಬದ ಹೊರತಾದ ಪ್ರಪ್ರಂಚವೊಂದಿದೆ. ಹೀಗಾಗಿ ಅವಳ ಭಾವನೆಗಳಿಗೆ ನಾವು ಬೆಲೆಕೊಡಬೇಕು ಮತ್ತು ಆಕೆ ಸಾಹಿತ್ಯಿಕ-ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಬೆಳೆಯುವಂತೆ ಪ್ರೇರೇಪಿಸಬೇಕು ಎಂದರು.

ತಾಯಿ ನೆಲವೇ ಶ್ರೇಷ್ಠ
ನಾವು ಅಮೆರಿಕ, ಆಫ್ರಿಕಾಗಳಂಥ ಊರುಗಳಲ್ಲಿ ಉದ್ಯೋಗ-ಉದ್ಯಮಗಳಲ್ಲಿ ತೊಡಗಿಕೊಳ್ಳಬಹುದು. ಆದರೆ ನಮಗೆ ನಿಜವಾದ ಗೌರವ-ನೆಮ್ಮದಿ ಸಿಗುವುದು ನಮ್ಮ ತಾಯಿ ನೆಲದಲ್ಲಿ ಎಂದು ಸ್ಪರ್ಧೆಯ ಬಹುಮಾನ ವಿತರಿಸಿದ ಅಮೆರಿಕನ್ನಡ ಲೇಖಕ, ಸಾಹಿತ್ಯಾಂಜಲಿಯ ಸ್ಥಾಪಕಾಧ್ಯಕ್ಷ ಡಾ| ನಾಗ ಐತಾಳ ಅಭಿಪ್ರಾಯಪಟ್ಟರು.

ಕಥೆ ಓದುಗನಿಗೆ ಹತ್ತಿರವಾಗಬೇಕು
ಕಥೆ ಎಂದರೆ ಒಂದು ಬಗೆಯ ಅನುಭವ. ಅದು ಮೊದಲು ಲೇಖಕನ ಅನುಭವವಾಗಿ ಬಳಿಕ ಓದುಗನ ಅನುಭವವಾಗುತ್ತದೆ ಎಂಬುದಕ್ಕೆ ಮಾಸ್ತಿ ವೆಂಕಟೇಶ ಅಯ್ಯಂಗಾರರ ಕತೆಗಳು ಸಾಕ್ಷಿ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ತಿಳಿಸಿದರು. ಲೇಖಕಿಯರಾದ ವೈದೇಹಿ, ಭುವನೇಶ್ವರಿ ಹೆಗಡೆ, ಮಣಿಪಾಲ ಮೀಡಿಯ ನೆಟ್‌ವರ್ಕ್‌ ಲಿ. ಸಿಇಒ ವಿನೋದ್‌ ಕುಮಾರ್‌, ಅಭಿನವ ಪ್ರಕಾಶನದ ರವಿಕುಮಾರ್‌ ಉಪಸ್ಥಿತರಿದ್ದರು.

ತುಷಾರದಿಂದ ಯುವಬರಹಗಾರರ ಸೃಷ್ಟಿ
“ಉದಯವಾಣಿ’ ಬಳಗವು ಲಕ್ಷಾಂತರ ಓದುಗರು, ಬರಹಗಾರರರನ್ನು ಸಿದ್ಧಗೊಳಿಸಿದೆ. ಈಗ ಕಥಾಸ್ಪರ್ಧೆ ಮತ್ತು ಶಿಬಿರದಿಂದಾಗಿ ಈ ಪರಂಪರೆ ಮುಂದುವರಿದಿದೆ ಎಂದು ಲೇಖಕಿ ವೈದೇಹಿ ಶ್ಲಾಘನೆ ವ್ಯಕ್ತಪಡಿಸಿದರು. “ತುಷಾರ’‌ ಮಾಸಪತ್ರಿಕೆಯು ನನ್ನನ್ನು ಲೇಖಕಿಯಾಗಿ ರೂಪಿಸಿದೆ ಎಂದು ಭುವನೇಶ್ವರಿ ಹೆಗಡೆ ತಾವು ಲೇಖನ ಬರೆಯಲಾರಂಭಿಸಿದ ದಿನಗಳನ್ನು ನೆನಪಿಸಿಕೊಂಡರು.

ಕೇಳು ಸಖಿ ಶಿಬಿರ ಸಮಾರೋಪ
ತುಷಾರ ಮತ್ತು ಉದಯವಾಣಿ ಬಳಗದ ಮಹಿಳಾ ಬರಹಗಾರರಿಗಾಗಿ ಬೀಜಾಡಿಯ “ಕಡಲಮನೆ’ಯಲ್ಲಿ ಆಯೋಜನೆಗೊಂಡ ಶಿಬಿರದ ಸಮಾರೋಪ ಕೂಡ ಇದೇ ವೇದಿಕೆಯಲ್ಲಿ ಜರಗಿತು. ರಾಜ್ಯದ ವಿವಿಧ ಕಡೆಗಳಿಂದ 25 ಮಂದಿ ಮಹಿಳೆಯರು ಶಿಬಿರದಲ್ಲಿ ಭಾಗವಹಿಸಿದ್ದರು. ಡಾ| ಸಂಧ್ಯಾ ಎಸ್‌. ಪೈ ಮಾರ್ಗದರ್ಶನದಲ್ಲಿ ಜರಗಿದ ಶಿಬಿರವನ್ನು ವೈದೇಹಿ ಮತ್ತು ಭುವನೇಶ್ವರಿ ಹೆಗಡೆ ನಿರ್ದೇಶಿಸಿದರು. ಶಿಬಿರಾರ್ಥಿಗಳು ಶಿಬಿರದ ಅನುಭವವನ್ನು ಹಂಚಿಕೊಳ್ಳುತ್ತ ಮನಬಿಚ್ಚಿ ಮಾತನಾಡುವ ಅವಕಾಶವನ್ನು ಮಾಡಿಕೊಡುವ ಇಂಥ ಶಿಬಿರಗಳು ಆಗಾಗ ಆಯೋಜನೆಗೊಳ್ಳಲಿ ಎಂದು ಹಾರೈಸಿದರು.

ಬಹುಮಾನ ವಿತರಣೆ
ಕಥಾಸ್ಪರ್ಧೆಗೆ 500 ಕಥೆಗಳು ಬಂದಿದ್ದು, ಇದರಲ್ಲಿ 11 ಮಂದಿಗೆ ಪ್ರಥಮ, ದ್ವಿತೀಯ, ತೃತೀಯ ಮತ್ತು ಮೆಚ್ಚುಗೆ ಪಡೆದ ಕಥಾ ಬಹುಮಾನಗಳನ್ನು ವಿತರಿಸಲಾಯಿತು. ಉಷಾ ನರಸಿಂಹನ್‌ ಮೈಸೂರು (ಪ್ರಥಮ), ಛಾಯಾ ಭಟ್‌ ಬೆಂಗಳೂರು, ಬಸವಣ್ಣೆಪ್ಪ ಕಂಬಾರ ಧಾರವಾಡ (ದ್ವಿತೀಯ), ತೇಜಸ್ವಿನಿ ಹೆಗ್ಡೆ ಬೆಂಗಳೂರು, ಶರದ್‌ ಸೌಕೂರು ಮುಂಬಯಿ, ಸ್ವಾಮಿ ಪೊನ್ನಾಚಿ ಕೊಳ್ಳೇಗಾಲ (ತೃತೀಯ) ಕಲ್ಪನಾ ಹಗಡೆ ಶಿರಸಿ, ಅರ್ಪಣಾ ಎಚ್‌.ಎಸ್‌. ಹೈದ್ರಾಬಾದ್‌, ಡಾ| ಬಿ. ಜನಾರ್ಧನ ಭಟ್‌ ಬೆಳ್ಮಣ್‌, ಮನೋಹರ್‌ ನಾಯಕ್‌ ಮುಂಬಯಿ, ರೇಣುಕಾ ರಮಾನಂದ ಅಂಕೋಲಾ (ಮೆಚ್ಚುಗೆ ಪಡೆದ ಕತೆ) ಬಹುಮಾನ ವಿಜೇತರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.