![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 23, 2022, 4:13 PM IST
ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ ಹಾಗೂ ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ಗುರುವಾರ ಪತ್ತೆಯಾಗಿದೆ.
ಸುಮಾರು 100 ವರ್ಷಗಳಿಗೂ ಹಿಂದಿನ ಕಾಲದ ರಾಜರ, ಆನೆ ಕಟ್ಟುವ ಕಲ್ಲಿನ ಕಂಬ ಹಾಗೂ ಆನೆಗೆ ನೀರು ಕುಡಿಯಲು ನಿರ್ಮಿಸಿದ ಕಲ್ಲಿನ ಕೊಪ್ಪರಿಗೆ ಪತ್ತೆಯಾಗಿದೆ.
ಕೊಪ್ಪರಿಗೆ ಹಿಂದೆ ಮಣ್ಣಿನ ಅಡಿಯಲ್ಲಿ ಹೂತು ಹೋಗಿದ್ದು, ಆನೆ ಕಟ್ಟುವ ಕಂಬ ಮೊದಲಿನಿಂದಲೂ ಇಲ್ಲಿ ರಸ್ತೆ ಬದಿ, ಕಾಣುತ್ತಿತ್ತು. ಆದರೆ ಆನೆಗೆ ನೀರಿಡುವ ಕೊಪ್ಪರಿಗೆ ಕಾಣಿಸುತ್ತಿರಲಿಲ್ಲ. ಇಲ್ಲಿ ಆ ಕೊಪ್ಪರಿಗೆ ಇತ್ತು ಎಂಬ ಮಾತನ್ನು ಕೇಳಿದ ಇಲ್ಲಿನ ವಿದ್ಯಾರ್ಥಿಗಳಾದ ಸುಹಾಸ್ ಮಲ್ಯ, ಸಮರ್ಥ, ರಿತೀಶ್ ಹಾಗೂ ಅನ್ವಿತ್ ಮಲ್ಯ ಅವರು ಆಸಕ್ತಿಯಿಂದ ಅದನ್ನು ಹುಡುಕಿ, ಹೊರಗೆ ತೆಗೆದಿದ್ದಾರೆ.
ಇದನ್ನೂ ಓದಿ:ತ್ರಿವಳಿ ಕೊಲೆ ಪ್ರಕರಣ: ಪ್ರವೀಣ್ ಭಟ್ ನಿರ್ದೋಷಿಯೆಂದು ಧಾರವಾಡ ಹೈಕೋರ್ಟ್ ತೀರ್ಪು
ಮಾಹಿತಿಯ ಪ್ರಕಾರ ಈ ಭಾಗದಲ್ಲಿ ಕೆಳದಿ ಶಿವಪ್ಪ ನಾಯಕನ ಕಾಲದ ಹೊನ್ನಯ್ಯ ಅರಸ ಮನೆತನದವರು ಆಳ್ವಿಕೆ ನಡೆಸಿದ್ದು, ಇದು ಅವರ ಕಾಲದಲ್ಲಿಯೇ ನಿರ್ಮಿಸಿರಬಹುದು ಎಂದು ತಿಳಿದು ಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.