![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 1, 2019, 6:00 AM IST
ಕಾರ್ಕಳ: ಕಠಿನ ಪರಿಶ್ರಮ, ಸಮಯ ಪ್ರಜ್ಞೆ, ಶ್ರದ್ಧೆಯಿದ್ದಲ್ಲಿ ನಿಶ್ಚಿತ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿಗಳು ಎಳವೆಯಲ್ಲಿಯೇ ಸದ್ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಜೇಸಿಸ್ ಶಾಲಾ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಹೇಳಿದರು.
ಅವರು ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ನಿಟ್ಟೆ ಕಾಲೇಜಿನ ಪ್ರಾಧ್ಯಾಪಕ ವೆಂಕಟರಾಜ್ ಭಟ್, ಶಾಲಾ ಸಂಚಾಲಕ ಡಾ| ಮುರಳೀಧರ್ ಭಟ್, ಕಾರ್ಕಳ ಜೆ.ಸಿ.ಐ ಅಧ್ಯಕ್ಷೆ ದಿವ್ಯಸ್ಮಿತ್ ಭಟ್, ಶಾಲಾ ನಾಯಕ ಸ್ವಸ್ತಿಕ್ ಆರ್. ಪ್ರಭು ಉಪಸ್ಥಿತರಿದ್ದರು.
ಶಾಲಾ ಆಡಳಿತಾಧಿಕಾರಿ ಪೂನಂ ಕಾಮತ್ ಸ್ವಾಗತಿಸಿ, ಸಹ ಶಿಕ್ಷಕಿ ಮಾಧವಿ ನಿರೂಪಿಸಿದರು. ಸಂಧ್ಯಾ ವಂದಿಸಿದರು.
You seem to have an Ad Blocker on.
To continue reading, please turn it off or whitelist Udayavani.