11 ದಿನಗಳ‌ ಬಳಿಕ ಮೇಲಕ್ಕೆತ್ತಿದ ಅಲಯನ್ಸ್ ಟಗ್: ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ


Team Udayavani, May 25, 2021, 10:25 AM IST

Untitled-2

ಪಡುಬಿದ್ರಿ:  ಪಡುಬಿದ್ರಿಯ ಕಾಡಿಪಟ್ಣ ಬಳಿ ಕಡಲ ತೀರದಲ್ಲಿ ಮಗುಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಅಲಯನ್ಸ್ ಟಗ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೊನೆಗೂ ಸಫಲವಾಗಿದ್ದು,ಟಗ್ಗಿನ ಒಳಭಾಗದಲ್ಲಿ ನಾಪತ್ತೆಯಾದ ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ ಕಾರ್ಯಾಚರಣೆ ನಡೆಯುತ್ತಿದೆ.

ಮೇ 15 ರಂದು ಸಮುದ್ರದಲ್ಲಿ ಮುಳುಗಿ ಪಡುಬಿದ್ರಿ ಯಲ್ಲಿ ಪತ್ತೆಯಾದ ಈ ಟಗ್ ತೆರವು ಕಾರ್ಯಾಚರಣೆ ಕಳೆದ 5 ದಿನಗಳಿಂದ ನಡೆಯುತ್ತಿದ್ದು,ಯಂತ್ರಗಳ ಕೊರತೆ ಹಾಗು ತಾಂತ್ರಿಕ ದೋಷಗಳಿಂದ ಕಾರ್ಯಾಚರಣೆ ವಿಫಲವಾಗಿತ್ತು.ಈ ಹಿನ್ನೆಲೆ ಕಳೆದ ಭಾನುವಾರ ಪಡುಬಿದ್ರಿ ಕಾಡಿಪಟ್ಣದ ವಿಷ್ಣು ಭಜನಾ ಮಂಡಳಿಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನೆ,ಮಾಜಿ ಜಿ.ಪಂ ಶಶಿಕಾಂತ್ ಪಡುಬಿದ್ರಿ, ಎಂ ಆರ್ ಪಿಎಲ್ ಆಡಳಿತ ನಿರ್ದೇಶಕ ವೆಂಕಟೇಶ,ಬಿಲಾಲ್ ನೇತ್ರತ್ವದ ಬದ್ರಿಯಾ ಹಾಗು ಯೋಜಕ ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಸ್ಥಳೀಯರಿದ್ದ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಜಂಟಿ ಕಾರ್ಯಾಚರಣೆಗೆ ಸೂಚನೆ ನೀಡಿದ್ದರು.

ಸೋಮವಾರ ಬೆಳಿಗ್ಗಿನಿಂದಲೇ ಹೆಚ್ಚುವರಿ ಯಂತ್ರಗಳ ಸಹಾಯದಿಂದ ತೆರವು ಕಾರ್ಯಾಚರಣೆ ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿದ್ದು,ಮಂಗಳವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಪ್ರಾರಂಭಿಸಿ ಮಗುಚಿ ಬಿದ್ದ ಟಗ್ ಸರಿ ನಿಲ್ಲಿಸುವಲ್ಲಿ ಯಶಸ್ಸು ಕಂಡಿದೆ.

ಮೂವರು ಸಿಬ್ಬಂದಿಗಳ ದೇಹಗಳ ಶೋಧನೆ:

ಟಗ್ ಮಗುಚಿ ಬಿದ್ದ ಸಂದರ್ಭ ಅದರಲ್ಲಿದ್ದ 8 ಜನರಲ್ಲಿ  ಮೂವರು ಸಾಹಸಿಕ ಈಜಿನ ಮೂಲಕ ಕಟಪಾಡಿಯ ಮಟ್ಟು ಸಮೀಪ ದಡ ಸೇರಿದ್ದು, ಇಬ್ಬರ ಶವ ಪಡುಬಿದ್ರಿ ಎರ್ಮಾಳು ಕಡಲ ತೀರದಲ್ಲಿ ಪತ್ತೆಯಾಗಿತ್ತು.ಮಂಗಳವಾರ ಟಗ್ ಮೇಲಕ್ಕೆತ್ತುವ ಸಂದರ್ಭ ಟಗ್ಗಿನ ಒಳಭಾಗದಲ್ಲಿ ಉಳಿದ ಮೂವರು ಸಿಬ್ಬಂದಿಗಳ ದೇಹಗಳು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಈ ಬಗ್ಗೆ ಶೋಧನೆ ನಡೆಯುತ್ತಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.