K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ


Team Udayavani, May 29, 2024, 12:01 AM IST

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಉಡುಪಿ: ಬಿ. ಎಸ್‌. ಯಡಿಯೂರಪ್ಪ ತಮ್ಮ ಮಗನನ್ನು ರಾಜ್ಯಾಧ್ಯಕ್ಷ ಮಾಡಲು 6 ತಿಂಗಳು ಕಾದು ದಿಲ್ಲಿ-ಕರ್ನಾಟಕ ಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಪರ 40ಕ್ಕೂ ಅಧಿಕ ದಿನಗಳ ಕಾಲ ನಿರಂತರವಾಗಿ ಮಾಜಿ ಶಾಸಕರಾದ ರಘುಪತಿ ಭಟ್‌ ದುಡಿದಿದ್ದಾರೆ.

ಪಕ್ಷ ನಿಷ್ಠೆಯಿಂದ ದುಡಿದಿರುವುದಕ್ಕೆ ಅವರಿಗೆ ಟಿಕೆಟ್‌ ನಿರಾಕರಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಡಾ| ಧನಂಜಯ ಸರ್ಜಿ ಸಾದರ ಲಿಂಗಾಯತ ಸಮುದಾಯಕ್ಕೆ ಸೇರಿ ದವರು ಎಂಬ ಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ತನ್ನ ಮಗನಿಗೆ ಅನುಕೂ ಲವಾಗಲಿದೆ ಎಂದು ಯಡಿ ಯೂರಪ್ಪ ಈ ನಿರ್ಧಾರ ಮಾಡಿದ್ದಾರೆ ಎಂದರು.

ಕರ್ನಾಟಕದಲ್ಲಿ ಯಡಿಯೂರಪ್ಪ ಇಲ್ಲದಿದ್ದರೆ ಏನೂ ಆಗದು. ಲಿಂಗಾಯತ ಸಮು ದಾಯದವರು ಬಿಜೆಪಿಗೆ ಮತ ನೀಡುವುದಿಲ್ಲ ಎಂಬ ಭ್ರಮೆ ಯಲ್ಲಿ ಕೇಂದ್ರದ ನಾಯಕರಿದ್ದಾರೆ. ವಾಸ್ತವ ಹಾಗಿಲ್ಲ. ವಿಜಯೇಂದ್ರ ಅಕಸ್ಮಾತ್‌ ಅಧ್ಯಕ್ಷರಾಗಿದ್ದಾರೆ. ಈಗ ಅಪ್ಪ ನನ್ನು ಮಗ ಹೊಗಳುವುದು, ಮಗನನ್ನು ಅಪ್ಪ ಹೊಗಳುವುದಾಗಿದೆ ಎಂದರು.

ರಘುಪತಿ ಭಟ್‌ ವಿಧಾನ ಪರಿಷತ್‌ ಚುನಾವಣೆ ಟಿಕೆಟ್‌ ಭರವಸೆ ನೀಡಿಲ್ಲ ಎಂಬುದನ್ನು ಯಡಿಯೂರಪ್ಪ ಹಾಗೂ ವಿಜಯೇಂದ್ರ ಶ್ರೀಕೃಷ್ಣ ಮಠಕ್ಕೆ ಬಂದು ಆಣೆ ಪ್ರಮಾಣ ಮಾಡಲಿ. ಭಟ್‌ ಪಕ್ಷೇತ ರರಾಗಿ ಸ್ಪರ್ಧಿಸಲು ಅವರಿಗೆ ಪಕ್ಷದಿಂದ ಆದ‌ ಅನ್ಯಾಯವೇ ಕಾರಣ ಎಂದರು.

ಪ್ರಮುಖರಾದ ಶಿವರಾಮ ಉಡುಪ, ಉಮೇಶ್‌ ಆರಾಧ್ಯ, ಉಪೇಂದ್ರ ನಾಯಕ್‌, ಮಹೇಶ್‌ ಪೂಜಾರಿ ಇದ್ದರು.

ಸಿಎಂ, ಗೃಹಮಂತ್ರಿ ಸತ್ತಿದ್ದಾರೆಯೇ?
ಮಂಗಳೂರಿನ ಮುಖ್ಯರಸ್ತೆಯ ಮೇಲೆ ನಮಾಜ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿ, ಇದು ಟಿಪ್ಪು ರಾಜ್ಯ ಎನ್ನುತ್ತಾರೆ. ಉಡುಪಿಯಲ್ಲಿ ಗ್ಯಾಂಗ್‌ವಾರ್‌ ಆಗುತ್ತದೆ. ಚನ್ನಗಿರಿ ಯಲ್ಲಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕುತ್ತಾರೆ. ಹುಬ್ಬಳ್ಳಿಯಲ್ಲಿ ಕೊಲೆಯಾ ಗುತ್ತದೆ. ಹಾಗಾದರೆ ರಾಜ್ಯ ಸರಕಾರ, ಪೊಲೀಸ್‌ ಇಲಾಖೆ, ಮುಖ್ಯಮಂತ್ರಿ, ಗೃಹಸಚಿವರು ಬದುಕಿದ್ದಾರೋ ಅಥವಾ ಸತ್ತಿದ್ದಾರೋ ಎನ್ನುವ ಪ್ರಶ್ನೆ ಕಾಡುವು ದಿಲ್ಲವೇ? ರಸ್ತೆ ಮೇಲೆ ನಮಾಜ್‌ ಮಾಡಿ ದವರ ಮೇಲೆ ದೇಶದ್ರೋಹಿ ಮತ್ತು ಗೂಂಡಾ ಕಾಯ್ದೆಯಡಿ ಬಂಧಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.

ಜಾತೀಯತೆ, ಸರ್ವಾಧಿಕಾರದತ್ತ ಬಿಜೆಪಿ: ಈಶ್ವರಪ್ಪ
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಹಿಂದುತ್ವದಿಂದ ಜಾತೀಯತೆಗೆ, ಪಕ್ಷನಿಷ್ಠೆಯಿಂದ ಕುಟುಂಬ ರಾಜಕಾರ ಣಕ್ಕೆ ಹಾಗೂ ಸಾಮೂಹಿಕದಿಂದ ಸರ್ವಾಧಿಕಾರಕ್ಕೆ ಬದಲಾಗಿದೆ. ಒಂದೆಡೆ ರಾಮ-ಲಕ್ಷ್ಮಣರಂತೆ ಕೇಂದ್ರ ದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ವಿಶ್ವ ನಾಯಕರಾಗಿ ದುಡಿಯುತ್ತಿದ್ದರೆ, ರಾಜ್ಯ ಬಿಜೆಪಿಯನ್ನು ಕೆಲವರು ತಮ್ಮ ಆಸ್ತಿಯಂತೆ ಬಳಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಟೀಕಾಪ್ರಹಾರ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಸ್ತುತ ಯಡಿಯೂರಪ್ಪ ಮತ್ತವರ ಕುಟುಂಬದ ಹತ್ತಿರ ಇರುವವರಿಗೆ ಮಾತ್ರವೇ ಬಿಜೆಪಿಯಲ್ಲಿ ಮಣೆ ಎಂಬ ಸ್ಥಿತಿ ಉಂಟಾಗಿದೆ ಎಂದರು.

ಉಚ್ಚಾಟನೆ ತಾತ್ಕಾಲಿಕ
ನನ್ನ ಒಬ್ಬರು ತಾಯಿ ಭಾರತ ಮಾತೆ, ಇನ್ನೊಂದು ತಾಯಿ ಬಿಜೆಪಿ, ಹಾಗಾಗಿ ನನ್ನನ್ನು ಪಕ್ಷದಿಂದ ಬೇರ್ಪಡಿಸಲು ಯಾರಿಗೂ ಸಾಧ್ಯವಿಲ್ಲ, ನನ್ನನ್ನು ಉಚ್ಚಾಟಿಸಿದ್ದಾರೆ. ಆದರೆ ಶೆಟ್ಟರ್‌ ಅವ ರನ್ನೂ ಉಚ್ಚಾಟಿಸಿದ್ದರು. ಅವರು ಕಾಂಗ್ರೆಸ್‌ ಸೇರಿ, ಅಲ್ಲಿ ವಿಧಾನ ಪರಿಷತ್‌ ಸದಸ್ಯರಾದವರು ಮರಳಿ ಬಂದು ಬಿಜೆಪಿಯಿಂದ ಸಂಸತ್ತಿಗೆ ಸ್ಪರ್ಧಿಸಿದ್ದಾರೆ. ಹಾಗಾಗಿ ನನ್ನದೂ ತಾತ್ಕಾಲಿಕ ವ್ಯವಸ್ಥೆ. ನಾನು ಯಾವತ್ತಿದ್ದರೂ ಬಿಜೆಪಿ ಎಂದರು. ರಾಜ್ಯ ಬಿಜೆಪಿಯಲ್ಲಿ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ, ಬಿಜೆಪಿಯನ್ನು ಶುದ್ಧೀಕರಣ ಮಾಡಬೇಕು, ಅದಕ್ಕಾಗಿ ನಾನು ಸಂಸತ್‌ ರಘುಪತಿ ಭಟ್‌ ಟಿಕೆಟ್‌ನಿರೀ ಕ್ಷೆಯಲ್ಲಿದ್ದರು. ಬೇರೆಯವರಿಗೆ ಕೊಡುವಾಗ ಅವರಿಗೆ ಹೇಳಿರಲೇ ಇಲ್ಲ ಎಂದು ಆಪಾದಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.