ಐದು ವರ್ಷಗಳಿಂದಲೂ ಮುನ್ನಡೆ!


Team Udayavani, May 25, 2019, 6:00 AM IST

BJP-545

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಐದು ವರ್ಷಗಳಲ್ಲಿ ಮತದಾರರ ನಾಡಿಮಿಡಿತ ಒಂದೇ ತೆರನಾಗಿ ಮುಂದುವರಿಯುತ್ತಿದೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ, ಕುಂದಾಪುರ ಹೊರತುಪಡಿಸಿ ಬೈಂದೂರು, ಕಾಪು, ಉಡುಪಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರು ವಿಜಯಿಯಾಗಿ ದ್ದರು. ಆಗಿನ ಸರಕಾರದ ಆರಂಭ ಕಾಲದಲ್ಲಿ ವಿನಯ ಕುಮಾರ ಸೊರಕೆ ಸಚಿವರಾದರೆ, ಉತ್ತರಾರ್ಧದಲ್ಲಿ ಪ್ರಮೋದ್‌ ಮಧ್ವರಾಜ್‌ ಸಚಿವರಾದರು.

2014ರ ಲೋಕಸಭಾ ಚುನಾವಣೆ ಯಲ್ಲಿ ಮೋದಿ ಗಾಳಿ ಬೀಸಲು ಆರಂಭವಾಯಿತು. ಆಗ ದಾಖಲೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ ಶೋಭಾ ಈಗ ಮತ್ತೆ ದಾಖಲೆ ಸೃಷ್ಟಿಸಿ ವಿಜಯಿಯಾಗಿದ್ದಾರೆ. ಈ ಮಧ್ಯೆ 2018ರಲ್ಲಿ ವಿಧಾನಸಭಾ ಚುನಾವಣೆ ನಡೆದಾಗ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ದಾಖಲೆ ನಿರ್ಮಿಸಿತು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿ ಉಳಿದೆಡೆ ಬಿಜೆಪಿ ಪಾರಮ್ಯ ಸಾಧಿಸಿತು.

ಇದಕ್ಕೂ ಹಿಂದೆ ಉಡುಪಿ ನಗರಸಭೆ ಕಾಂಗ್ರೆಸ್‌ ಕೈಯಲ್ಲಿತ್ತು. ನಗರಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಗತವೈಭವವನ್ನು ಮರು ಸ್ಥಾಪಿಸಿತು. ಬಿಜೆಪಿ ಸಾಧಿಸಿದ ಹಿಡಿತ ಈಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿಯೂ ಮುಂದುವರಿದಿದೆ.

ಮೋದಿಯವರ ಕಠಿನ ನಿರ್ಧಾರ ಗಳು, ಕಪ್ಪು ಚುಕ್ಕೆ ಇಲ್ಲದ ವ್ಯಕ್ತಿತ್ವ, ಆಡಳಿತದಲ್ಲಿ ಬಿಗು ಧೋರಣೆ ಜನರ ಮೇಲೆ ಪ್ರಭಾವ ಬೀರುವಲ್ಲಿ ಪ್ರಧಾನ ಪಾತ್ರ ವಹಿಸಿದರೆ, ಸಂಘಟ ನಾತ್ಮಕವಾಗಿ ಬಿಜೆಪಿಯು ಸಕ್ರಿಯ ವಾಗಿದೆ. ಇದಕ್ಕೆ ಉದಾಹರಣೆ ಶೋಭಾ ಬಗ್ಗೆ ಮೊದಲು ಇದ್ದ ವಿರೋಧಗಳನ್ನು ಅಡಗಿಸಿದ್ದು. ಕಾರ್ಯಕರ್ತರು, ನಾಯಕರಿಗೆ ಅಸಮಾಧಾನವಿದ್ದರೂ ಪಕ್ಷ ಹಿತ ಮುಖ್ಯ ಎಂದು ನಾಯಕರು, ಕಾರ್ಯಕರ್ತರು ತೋರಿಸಿ ಕೊಟ್ಟಿರುವುದು ಬಿಜೆಪಿ ಭೀಮ ಬಲ ತುಂಬಿದೆ. ಮತಗಟ್ಟೆ ವಾರು ಕಾರ್ಯಕರ್ತರ ಪಡೆ, ಅವರಿಗೊಬ್ಬ ನಾಯಕ, ಸಾಮಾಜಿಕ ಜಾಲತಾಣಗಳ ಸಮರ್ಥ ಬಳಕೆ ಬಿಜೆಪಿ ದಾಪುಗಾಲಿಗೆ ಇಂಬು ನೀಡುತ್ತಿದೆ.

ಪರಿಣಾಮ ಬೀರದ ಬಲ
ಜಿಲ್ಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರೂ ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರಕಾರ ಸ್ಥಾಪನೆಯಾಯಿತು. ಜಿಲ್ಲೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾದ ಪ್ರತಾಪಚಂದ್ರ ಶೆಟ್ಟಿಯವರು ಸಭಾಪತಿಯಾದರೆ, ಕರಾವಳಿ ಮೂಲದ ಡಾ| ಜಯಮಾಲಾ ಉಸ್ತುವಾರಿ ಸಚಿವರಾದರು. ಆದರೆ ಸರಕಾರದ ಈ ಬಲ ಮತ್ತೆ ನಡೆದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಮೇಲೆ ಪರಿಣಾಮ ಬೀರಲಿಲ್ಲ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.