ತಲ್ಲೂರು: ಸ್ಥಳಾಂತರ, ಪ್ರಧಾನ ಸ್ವಂತ ಕಚೇರಿ ಉದ್ಘಾಟನೆ


Team Udayavani, Aug 28, 2017, 7:20 AM IST

2708kdm1.jpg

ಕುಂದಾಪುರ: ಅತೀ ಕಡಿಮೆ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಿರುವ ಶ್ರೀ ಕಾಳಿಕಾಂಬಾ ವಿವಿಧೋದ್ದೇಶ ಸಹಕಾರಿ ಸಂಘ ಸ್ವಂತ ಕಚೇರಿಯನ್ನು ಹೊಂದಿರುವುದು ಶ್ಲಾಘನೀಯ.

ಮುಂದಿನ ದಿನಗಳಲ್ಲಿ ಇನ್ನೂ ಹಲವಾರು ಶಾಖೆಗಳನ್ನು ತೆರೆಯುವಂತಾಗಲಿ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಅವರು ರವಿವಾರ ತಲ್ಲೂರಿನ ಎಂ.ಡಿ.ರೆಸಿಡೆನ್ಸಿಯಲ್ಲಿ ಶ್ರೀ ಕಾಳಿಕಾಂಬಾ ವಿವಿಧೋದ್ದೇಶ ಪ್ರಾಥಮಿಕ ಸಹಕಾರ ಸಂಘ (ನಿ.), ತಲ್ಲೂರು ಇದರ ಸ್ಥಳಾಂತರಗೊಂಡ ನೂತನ ಪ್ರಧಾನ ಸ್ವಂತ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆ ಶೈಕ್ಷಣಿಕ ನಿಧಿಯನ್ನು ಕಾದಿರಿ ಸುವ ಮೂಲಕ ಸಮಾಜದ ಶೈಕ್ಷಣಿಕ ಚಟುವಟಕೆಗಳಿಗೆ ಹೆಚ್ಚಿನ ಪ್ರೋತ್ಸಾಹದಾಯಕ ಕೆಲಸಗಳನ್ನು ಮಾಡಲಿ; ಗ್ರಾಹಕರಿಗೆ ಉತ್ತಮ ಸ್ಪಂದನೆ ನೀಡುತ್ತಾ ದೊಡ್ಡ ಸಂಸ್ಥೆಯಾಗಿ ಮೂಡಿಬರಲಿ ಎಂದು ಹಾರೈಸಿದರು.

ಇನ್ನೂ ಎರಡು ಶಾಖೆ
ಅಧ್ಯಕ್ಷತೆ ವಹಿಸಿದ್ದ ಶ್ರೀ ಕಾಳಿಕಾಂಬಾ ವಿವಿಧೋದ್ದೇಶ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರು ಮಾತನಾಡಿ, ಸಂಸ್ಥೆ ವರ್ಷದಿಂದ ವರ್ಷಕ್ಕೆ ಅಭಿವೃದ್ಧಿ ಹೊಂದುತ್ತಿದ್ದು ಇದೀಗ ಸ್ವಂತ ಕಚೇರಿಗೆ ಪಾದಾರ್ಪಣೆ ಮಾಡಿದೆ. ಮುಂದಿನ ಎರಡು ವರ್ಷಗಳಲ್ಲಿ ಇನ್ನೂ ಎರಡು ಶಾಖೆಗಳನ್ನು ತೆರೆಯುವ ಬಗ್ಗೆ ಆಡಳಿತ ಮಂಡಳಿ ಚಿಂತನೆ ನಡೆಸಿದ್ದು, ಈ ಬಗ್ಗೆ ಕಾರ್ಯೋನ್ಮುಖವಾಗಲಿದೆ ಎಂದರು.

ಅಡ್ಡಿಯಾದ ಆರ್ಥಿಕ ನೀತಿ
ಗಂಗೊಳ್ಳಿ ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯ ಅಧ್ಯಕ್ಷ ರಾಜು ದೇವಾಡಿಗ ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಪೈಪೋಟಿಯನ್ನು ಎದುರಿಸುತ್ತಿರುವ ಈ ಕಾಲದಲ್ಲಿ ಕೇಂದ್ರ ಸರಕಾರದ ಆರ್ಥಿಕ ನೀತಿ ಸಹಕಾರಿ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಬಹಳಷ್ಟು ತೊಡಕಾಗಿದೆ. ಆದರೂ ಸಹಕಾರಿ ಸಂಸ್ಥೆಗಳು ದೇಶದಲ್ಲೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ತಲ್ಲೂರನ್ನು ಕೇಂದ್ರವಾಗಿಟ್ಟುಕೊಂಡು ಆರಂಭವಾದ ಈ ಸಹಕಾರ ಸಂಘ ಮುಂದೆ ಇನ್ನಷ್ಟು ಶಾಖೆಗಳನ್ನು ತೆರೆಯುವಂತಾಗಲಿ ಎಂದರು.

ಮುಖ್ಯ ಅತಿಥಿಗಳಾಗಿ ಕಟಪಾಡಿ ಶ್ರೀಮದ್‌ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ಟಿ. ಸುಧಾಕರ ಆಚಾರ್ಯ ತ್ರಾಸಿ, ಉಪ್ರಳ್ಳಿಯ ಶ್ರೀ ಕರಸ್ಥಳ ಜಗದ್ಗುರು ನಾಗಲಿಂಗ ಸ್ವಾಮಿ ಹಾಗೂ ಶ್ರೀ ವಿಶ್ವಕರ್ಮ ಸಾನ್ನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಮಂಜುನಾಥ ಆಚಾರ್ಯ ಬಡಾಕೆರೆ, ತಲ್ಲೂರು ಗ್ರಾ.ಪಂ. ಅಧ್ಯಕ್ಷ ಆನಂದ ಬಿಲ್ಲವ, ಕುಂದಾಪುರ ಪುರಸಭೆಯ ಮಾಜಿ ಉಪಾಧ್ಯಕ್ಷ ರಾಜೀವ ಕೋಟ್ಯಾನ್‌ ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌. ದಿವಾಕರ ಆಚಾರ್ಯ ಮೂಡ್ಲಕಟ್ಟೆ, ಶಾಖಾ ವ್ಯವಸ್ಥಾಪಕ ಯಶೋಧರ ಆಚಾರ್ಯ, ನಿರ್ದೇಶಕರಾದ ಸಿ. ನಾರಾಯಣ ಆಚಾರ್ಯ ಕುಂದಾಪುರ, ಗಂಗಾಧರ ಆಚಾರ್ಯ ಆಲೂರು, ರಮಾನಂದ ಆಚಾರ್ಯ ವಂಡ್ಸೆ, ಪ್ರೇಮಾ ಎಸ್‌. ಬಸೂÅರು, ಶಾರದಾ ಸಿ. ಬಂಟ್ವಾಡಿ ಉಪಸ್ಥಿತರಿದ್ದರು.

ನಿರ್ದೇಶ‌ಕ ರಮೇಶ ಅಚಾರ್ಯ ಸಬ್ಲಾಡಿ ಸ್ವಾಗತಿಸಿದರು. ನಿರ್ದೇಶಕ ಕೆ. ನಾರಾಯಣ ಆಚಾರ್ಯ ಕೋಣಿ ಪ್ರಸ್ತಾವನೆಗೈದರು. ನಾಗೇಂದ್ರ ಆಚಾರ್ಯ ತಲ್ಲೂರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಬಿ. ಜನಾರ್ದನ ಆಚಾರ್ಯ ಬೈಂದೂರು ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.