36,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಸಲು ಗುರಿ ನಿಗದಿ


Team Udayavani, Jun 4, 2021, 5:20 AM IST

Untitled-1

ಸಾಂದರ್ಭಿಕ ಚಿತ್ರ

ಉಡುಪಿ: ಕೋವಿಡ್‌-19 ಭೀತಿಯ ನಡುವೆ ಕೃಷಿ ಚಟುವಟಿಕೆ ಗರಿಗೆದರಿದ್ದು ಕಳೆದ ಬಾರಿ ಕೃಷಿ ಇಲಾಖೆಯು ಶೇ. 99ರಷ್ಟು ಗುರಿ ಸಾಧನೆ ಮಾಡಿದ್ದು, ಈ ಬಾರಿ ಶೇ. 100ರಷ್ಟು ಗುರಿ ಮುಟ್ಟಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುತ್ತಿದೆ.

2018-19ರ ವರೆಗೆ ಜಿಲ್ಲೆಯಲ್ಲಿ ಭತ್ತದ ಕೃಷಿ ಬೆಳೆಯುವ ಪ್ರದೇಶ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಾ ಬಂತು. ಆದರೆ ಕೋವಿಡ್‌-19 ಸೋಂಕಿನ ಬಳಿಕ ಜನರು ಕೃಷಿ ಕ್ಷೇತ್ರದೆಡೆಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಹೊರ ದೇಶ, ರಾಜ್ಯ, ಜಿಲ್ಲೆಗಳಿಂದ ಉಡುಪಿಗೆ ಆಗಮಿಸಿದ ಬಹುತೇಕ ಜನರು ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಅದರ ಪರಿಣಾಮವಾಗಿ ಕಳೆದ ಬಾರಿ 35,700 ಹೆ. ಪ್ರದೇಶದಲ್ಲಿ ಭತ್ತದ ಕೃಷಿ ಮಾಡಲಾಗಿದೆ.

36,000 ಹೆಕ್ಟೇರ್‌ ಗುರಿ :

ಉಡುಪಿ ತಾಲೂಕಿನಲ್ಲಿ 15,500 ಹೆ., ಕಾರ್ಕಳ 6,500 ಹೆ., ಕುಂದಾಪುರದಲ್ಲಿ 14,000 ಹೆ. ಸೇರಿದಂತೆ ಜಿಲ್ಲೆಯಲ್ಲಿ 36,000 ಹೆ. ಪ್ರದೇಶದಲ್ಲಿ ಭತ್ತ  ಬೆಳೆಸುವ ಗುರಿಯನ್ನು ಹೊಂದಲಾಗಿದೆ. ಕಳೆದ ಬಾರಿ ನಿಗದಿಪಡಿಸಿದ 36,000 ಹೆ.ನಲ್ಲಿ 35,700 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಕೃಷಿ ಮಾಡುವ ಮೂಲಕ ಹಲವು ವರ್ಷದ ಬಳಿಕ ಗುರಿ ಸಾಧನೆ ಮಾಡಿದೆ. 2018-19ನೇ ಸಾಲಿನಲ್ಲಿ 44 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕೇವಲ 35,487 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಸಲಾಗಿತ್ತು.

605 ಮಿ.ಮೀ. ದಾಖಲೆ ಮಳೆ :

ಸಾಮಾನ್ಯವಾಗಿ ಮೇ ಅಂತ್ಯ- ಜೂನ್‌ ವಾರಕ್ಕೆ 189 ಮಿ.ಮೀ. ಮಳೆಯಾಗುತ್ತಿತ್ತು. ಆದರೆ ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ದಾಖಲೆ ಪ್ರಮಾಣ 605 ಮಿ.ಮೀ. ಮಳೆಯಾಗಿದೆ. ಇದು ಈ ಬಾರಿಯ ಕೃಷಿ ಚಟುವಟಿಕೆಗೆ ಪೂರಕವಾದ ವಾತಾವರಣ ನಿರ್ಮಿ ಸಿದೆ. 2019ರಲ್ಲಿ ಮಳೆಯ ಕೊರತೆಯಿಂದಾಗಿ ಕೃಷಿ ಚಟುವಟಿಕೆ ಜೂನ್‌ ತಿಂಗಳಿನಲ್ಲಿ ಪ್ರಾರಂಭವಾಗಿತ್ತು. ಇದು ಬೆಳೆಯ ಮೇಲೆ ಪರಿಣಾಮ ಬೀರಿತ್ತು ಎಂದು ಕೃಷಿ ಇಲಾಖೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೃಷಿ ಪ್ರದೇಶ ಹೆಚ್ಚಲಿದೆ ;

ಕೊರೊನಾದಿಂದ ಮತ್ತೆ ಜನರು ಜಿಲ್ಲೆಗೆ ಮರಳಿ ದ್ದಾರೆ. ಇಷ್ಟು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿಯಲ್ಲಿ ಮಾಡಲು ಮುಂದಾಗಿದ್ದಾರೆ. ಜತೆಗೆ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಅಭಿಯಾನ ನಡೆಸುತ್ತಿರುವುದರಿಂದ ಈ ಬಾರಿ ಕೃಷಿ ಭೂಮಿ ಪ್ರದೇಶ ಹೆಚ್ಚಾಗಲಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ  ಎಚ್‌. ಕೆಂಪೇಗೌಡ ತಿಳಿಸಿದರು.

ಉತ್ಪಾದಕತೆ ಕಡಿಮೆ- ವೆಚ್ಚ ಹೆಚ್ಚು:

ಜಿಲ್ಲೆಯಲ್ಲಿ ಎಕರೆಗೆ 16ರಿಂದ 17 ಕ್ವಿಂಟಾಲ್‌  ಭತ್ತವಷ್ಟೇ ಉತ್ಪಾದನೆಯಾಗುತ್ತಿದೆ. ಹೆಚ್ಚುತ್ತಿರುವ ಉತ್ಪಾದನ ವೆಚ್ಚ, ಬೆಲೆ ಕುಸಿತ, ವಿವಿಧ ಕಡೆಯಲ್ಲಿ ಉಪ್ಪು ನೀರಿನ ಹಾವಳಿಯಿಂದ ಜನರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಜತೆಗೆ ತೋಟಗಾರಿಕೆ ಬೆಳೆಗಳಲ್ಲಿ ಹೆಚ್ಚು ಲಾಭದಾಯಕವಾಗಿರುವ ಅಡಿಕೆ, ಕಾಳು ಮೆಣಸಿನಂತಹ ತೋಟಗಾರಿಕಾ ಬೆಳೆಗಳು ಭತ್ತದ ಗದ್ದೆಗಳನ್ನು ಆಕ್ರಮಿಸಿಕೊಂಡಿವೆ. ಇನ್ನು ನಗರಕ್ಕೆ ಸಮೀಪದ ಪ್ರದೇಶಗಳ ಗದ್ದೆಗಳು ಸೈಟ್‌ಗಳಾಗಿ ಪರಿವರ್ತನೆಗೊಂಡು ಲೇಔಟ್‌, ವಾಣಿಜ್ಯ, ವಸತಿ ಸಂಕೀರ್ಣಗಳಾಗಿ ಮಾರ್ಪಾಡಾಗಿದೆ.

ನಿರ್ವಹಣೆ ಕೊರತೆ :

ಜಿಲ್ಲಾದ್ಯಂತ ಕೃಷಿ ಕಾರ್ಮಿಕರ ಕೊರತೆ ಹಿನ್ನೆಲೆಯಲ್ಲಿ ರೈತರು ಯಂತ್ರೋಪಕರಣ ಕೃಷಿಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಪ್ರಸ್ತುತ ಗದ್ದೆ ಉಳುಮೆ ಮಾಡಲು ಹಾಗೂ ನೇಜಿಗೂ ಯಂತ್ರ ಬಳಕೆಯಾಗುತ್ತಿದೆ. ಪ್ರಸ್ತುತ ಕೋವಿಡ್‌ ಹಾಗೂ ಗ್ರಾಮಗಳು ಸಂಪೂರ್ಣ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೃಷಿ ಯಂತ್ರಗಳ ನಿರ್ವಹಣೆಗೆ ತಂತ್ರಜ್ಞರು ಸಿಗದೆ ಯಂತ್ರೋಪಕರಣಗಳ ನಿರ್ವಹಣೆಯಾಗುತ್ತಿಲ್ಲ. ಇದರಿಂದ ಬಾಡಿಗೆ ನೀಡುವ ಸಂಸ್ಥೆ ಹಾಗೂ ಯಂತ್ರಗಳನ್ನು ಹೊಂದಿರುವ ರೈತರು ದುರಸ್ತಿಗಾಗಿ ಪರದಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಕೃಷಿ  ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ.

ಬಿತ್ತನೆ ಬೀಜ  ವಿತರಣೆ  : ಸರಕಾರದಿಂದ ಜಿಲ್ಲೆಗೆ 2020-21ರಲ್ಲಿ 2,597.65 ಕ್ವಿಂ. ಬಿತ್ತನೆ ಬೀಜ ಬಂದಿದ್ದು, ಅದರಲ್ಲಿ 2,591.65 ಕ್ವಿಂ. ಬಿತ್ತನೆ ಬೀಜ ರೈತರಿಗೆ ನೀಡಲಾಗಿದೆ. ಈ ಬಾರಿ 2021-22ನೇ ಸಾಲಿನಲ್ಲಿ 2,194.2 ಕ್ವಿಂ.ನಲ್ಲಿ 1,780 ಕ್ವಿಂ. ಬೀಜ ಈಗಾಗಲೇ ವಿತರಿಸಲಾಗಿದೆ. ಬಾಕಿ ಇರುವ 414 ಕ್ವಿಂ. ಬಿತ್ತನೆ ಬೀಜ ವಿತರಣೆಗೆ ಬಾಕಿಯಿದೆ. ಜಿಲ್ಲೆಯಲ್ಲಿ ಶೇ.20ರಷ್ಟು ರೈತರು ಮಾತ್ರ ಬಿತ್ತನೆ ಬೀಜ ಖರೀದಿ ಮಾಡುತ್ತಾರೆ. ಉಳಿದವರು ಸಾಂಪ್ರ ದಾಯಿಕವಾಗಿ ಬೀಜ ಸಂಗ್ರಹಿಸಿ, ಬಿತ್ತನೆ ಮಾಡು ತ್ತಾರೆ.

ಸಮಸ್ಯೆಗಳಿದ್ದರೆ ಕರೆ ಮಾಡಿ : ಜಿಲ್ಲೆಯ ಎಲ್ಲ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳು ಪ್ರತಿನಿತ್ಯ (ರಜೆ ದಿನ ಹೊರತುಪಡಿಸಿ) ಬೆಳಗ್ಗೆ 6ರಿಂದ 10 ಗಂಟೆಯವರೆಗೆ ತೆರೆದಿರುತ್ತವೆ. ರೈತ ಸಂಪರ್ಕ ಕೇಂದ್ರಗಳ  ಕೃಷಿ ಅಧಿಕಾರಿಗಳ ದೂರವಾಣಿ ಸಂಖ್ಯೆ  ಕೋಟ: 8277929753, ಬ್ರಹ್ಮಾವರ: 8277932506, ಉಡುಪಿ: 8277929751, ಕಾಪು: 8277929752, ಕುಂದಾಪುರ: 8277929754, ವಂಡ್ಸೆ: 8277929755, ಬೈಂದೂರು: 8277932520, ಕಾರ್ಕಳ: 8277932523, ಅಜೆಕಾರು: 8277932527 ಅಥವಾ ಕೃಷಿ ಇಲಾಖೆಯ ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮೊ.ನಂ: 8277932515, ಕುಂದಾಪುರ: 8277929754, ಕಾರ್ಕಳ: 8277932505 ಅವರನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಜನರು ಕೃಷಿ ಕಡೆಗೆ ಒಲವು ತೋರಿಸುತ್ತಿದ್ದಾರೆ. ಈ ಬಾರಿಯೂ ನಿಗದಿಪಡಿಸಿದ ಗುರಿ ಸಾಧನೆಯಾಗಲಿದೆ. ಕೃಷಿ ಚಟುವಟಿಕೆಗೆ ಯಾವುದೇ ಸಮಸ್ಯೆ ಇಲ್ಲ. ಯಂತ್ರೋಪಕರಣಗಳ ದುರಸ್ತಿಗೆ  ತೆರಳುವುದಕ್ಕೂ ಅಡ್ಡಿ ಇಲ್ಲ.   – ಎಚ್‌. ಕೆಂಪೇಗೌಡ,  ಜಂಟಿ ನಿರ್ದೇಶಕರು, ಕೃಷಿ ಇಲಾಖೆ ಉಡುಪಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.