ಹರೆಗೋಡು: ಉಪ್ಪು ನೀರಿಗೆ ಹತ್ತಾರು ಎಕ್ರೆ ಕೃಷಿ ಪ್ರದೇಶ ನಾಶ


Team Udayavani, Apr 1, 2019, 6:30 AM IST

haregodu

ಹೆಮ್ಮಾಡಿ: ಕಟ್‌ ಬೆಲೂ¤ರು ಗ್ರಾಮದ ಹರೆಗೋಡುವಿನಲ್ಲಿ ಭತ್ತ, ದ್ವಿದಳ ಧಾನ್ಯ ಹಾಗೂ ಕಬ್ಬು ಬೆಳೆ ಬೆಳೆಯುತ್ತಿದ್ದ ಹತ್ತಾರು ಎಕ್ರೆ ಕೃಷಿ ಪ್ರದೇಶವು ಉಪ್ಪು ನೀರಿನ ಸಮಸ್ಯೆಗೆ ತುತ್ತಾಗಿದೆ. ಇಲ್ಲಿನ ರೈತರು ಕಳೆದ 2 ವರ್ಷಗಳಿಂದ ಸುಗ್ಗಿ ಬೆಳೆ ಬೆಳೆಯಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹರೆಗೋಡಿನಲ್ಲಿ ಐನೂರು ಎಕ್ರೆಗೂ ಮಿಕ್ಕಿ ಪ್ರದೇಶದಲ್ಲಿ ಹಿಂದೆ ಎರಡು ಭತ್ತದ ಬೆಳೆ, ಅನಂತರ ದ್ವಿದಳ ಧಾನ್ಯ ಬೆಳೆಯುತ್ತಿದ್ದರು. ವಿಶಾಲ ಬಯಲು ಪ್ರದೇಶದಲ್ಲಿದ್ದ ಕಾಡಿನಕೆರೆ ನೀರು ಬಳಸಿಕೊಂಡು ಕಬ್ಬು ಬೆಳೆ ಕೂಡ ಬೆಳೆಯುತ್ತಿದ್ದರು. ಕೆರೆ ಕಾಯಕಲ್ಪ ಯೋಜನೆ ದುರಸ್ತಿ¤ಗೆ ಇಡೀ ಕೆರೆಯೇ ಹಳ್ಳಹತ್ತಿ ಹೋಗಿದ್ದು, ಕಬ್ಬು ಕೃಷಿ ಮಾಡುವುದನ್ನೇ ಬಿಟ್ಟಿದ್ದಾರೆ ಇಲ್ಲಿನ ರೈತರು.

ಕುಸಿದ ಕಿಂಡಿ ಅಣೆಕಟ್ಟು
ಉಪ್ಪು ನೀರು ತಡೆಗಾಗಿ ಕೃಷಿಕರೇ ಕಟ್ಟೆ ಕಟ್ಟಿ ಅದಕ್ಕೊಂದು ರಂಧ್ರ ಕೊರೆದು, ನೀರಿನ ಉಬ್ಬರ ಇಳಿತಕ್ಕೆ ಹೊಂದಿಕೊಳ್ಳುವಂತೆ ಬಾಗಿಲು ನಿರ್ಮಿಸಿಕೊಂಡು ಉಪ್ಪು ನೀರು ಒಳಗೆ ಬಾರದಂತೆ ತಡೆ ಮಾಡಿದ್ದರು. ಆದರೆ ರೈತರ ತಡೆಗೋಡೆ ಸಮೀಪದಲ್ಲೇ ಉಪ್ಪು ನೀರು ತಡೆಗೆ ನಿರ್ಮಿಸಿದ ಕಿಂಡಿ ಅಣೆಕಟ್ಟು ಮೂರೇ ತಿಂಗಳಲ್ಲಿ ಕುಸಿದು ಬಿದ್ದಿದೆ. ರೈತರು ನಿರ್ಮಿಸಿದ ಸ್ವಯಂ ಚಾಲಿತ ಬಾಗಿಲು ಸಿಗಡಿ ಕೆರೆಗೆ ನೀರು ಹಾಯಿಸಲು ತೆರೆದಿಡುವುದರಿಂದ ಉಪ್ಪು ನೀರು ಕೃಷಿ ಭೂಮಿಗೆ ಹರಿಯುತ್ತದೆ.

ಸಿಗಡಿ ಕೃಷಿಗಾಗಿ ಉಪ್ಪು ನೀರು ಒಳಗೆ ಬರಲು ಎಲ್ಲ ಅನುಕೂಲ ಮಾಡಿಕೊಂಡಿದ್ದರಿಂದ ಸುಮಾರು 50 ಎಕ್ರೆ ಪ್ರದೇಶದಲ್ಲಿ ಬೆಳೆಯುತ್ತಿರುವ ಭತ್ತದ ಕೃಷಿ ಭೂಮಿಯಲ್ಲಿ ಮುಂಗಾಲಿನವರೆಗೆ ಉಪ್ಪು ನೀರು ನಿಂತಿದೆ. ಈ ಬಾರಿ ಮುಂಗಾರಿನಲ್ಲೂ ಭತ್ತದ ಬೆಳೆ ಕಷ್ಟಕರ ಎನ್ನುವುದಾಗಿ ತಮ್ಮ ಅಳಲು ತೋಡಿಕೊಳ್ಳುತ್ತಾರೆ ಇಲ್ಲಿನ ರೈತರು.

2 ವರ್ಷಗಳಿಂದ ಬೇಸಾಯವಿಲ್ಲ
ಉಪ್ಪು ನೀರಿನ ಸಮಸ್ಯೆಯಿಂದ ಬೇಸಾಯ ಮಾಡುವುದೇ ಕಷ್ಟಕರವಾಗಿದೆ. ನಮ್ಮ ಈ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಾಗಲಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಗ್ರಾ.ಪಂ. ಆಗಲಿ ಯಾರೂ ಕೂಡ ಕೇಳುವುದಿಲ್ಲ. ಸಿಗಡಿ ಕೃಷಿಗೆ ಇಲ್ಲಿ ಅನುಮತಿ ನೀಡಿರುವುದರಿಂದಾಗಿ ನಮ್ಮ ತುತ್ತಿನ ಅನ್ನಕ್ಕೆ ತೊಂದರೆಯಾಗುತ್ತಿದೆ. ಕಳೆದ 2 ವರ್ಷಗಳಿಂದ ಸುಗ್ಗಿ ಬೆಳೆಗೆ ತೊಂದರೆಯಾಗುತ್ತಿದೆ.
– ವಿಶ್ವನಾಥ ಗಾಣಿಗ ಹರೆಗೋಡು, ಕೃಷಿಕರು

ಭೇಟಿ ನೀಡಿ ಪರಿಶೀಲನೆ
ಕೃಷಿಗೆ ಉಪ್ಪು ನೀರಿನ ಸಮಸ್ಯೆಯಿಂದ ಭತ್ತದ ಕೃಷಿಗೆ ತೊಂದರೆಯಾಗಿರುವುದರ ಬಗ್ಗೆ ಇಲಾಖೆಯಿಂದ ಯಾವುದೇ ಪರಿಹಾರ ನೀಡುವುದು ಕಷ್ಟ. ಆದರೆ ಈ ಬಗ್ಗೆ ರೈತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಿ. ಮುಂದಿನ ದಿನಗಳಲ್ಲಿ ಅಲ್ಲಿಗೆ ಭೇಟಿ ನೀಡಿ, ವಸ್ತುಸ್ಥಿತಿ ಬಗ್ಗೆ ತಿಳಿದುಕೊಂಡು, ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು.
– ರೂಪಾ, ಸಹಾಯಕ ನಿರ್ದೇಶಕಿ, ಕೃಷಿ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.