ಹರೆಗೋಡು: ಉಪ್ಪು ನೀರಿಗೆ ಹತ್ತಾರು ಎಕ್ರೆ ಕೃಷಿ ಪ್ರದೇಶ ನಾಶ


Team Udayavani, Apr 1, 2019, 6:30 AM IST

haregodu

ಹೆಮ್ಮಾಡಿ: ಕಟ್‌ ಬೆಲೂ¤ರು ಗ್ರಾಮದ ಹರೆಗೋಡುವಿನಲ್ಲಿ ಭತ್ತ, ದ್ವಿದಳ ಧಾನ್ಯ ಹಾಗೂ ಕಬ್ಬು ಬೆಳೆ ಬೆಳೆಯುತ್ತಿದ್ದ ಹತ್ತಾರು ಎಕ್ರೆ ಕೃಷಿ ಪ್ರದೇಶವು ಉಪ್ಪು ನೀರಿನ ಸಮಸ್ಯೆಗೆ ತುತ್ತಾಗಿದೆ. ಇಲ್ಲಿನ ರೈತರು ಕಳೆದ 2 ವರ್ಷಗಳಿಂದ ಸುಗ್ಗಿ ಬೆಳೆ ಬೆಳೆಯಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹರೆಗೋಡಿನಲ್ಲಿ ಐನೂರು ಎಕ್ರೆಗೂ ಮಿಕ್ಕಿ ಪ್ರದೇಶದಲ್ಲಿ ಹಿಂದೆ ಎರಡು ಭತ್ತದ ಬೆಳೆ, ಅನಂತರ ದ್ವಿದಳ ಧಾನ್ಯ ಬೆಳೆಯುತ್ತಿದ್ದರು. ವಿಶಾಲ ಬಯಲು ಪ್ರದೇಶದಲ್ಲಿದ್ದ ಕಾಡಿನಕೆರೆ ನೀರು ಬಳಸಿಕೊಂಡು ಕಬ್ಬು ಬೆಳೆ ಕೂಡ ಬೆಳೆಯುತ್ತಿದ್ದರು. ಕೆರೆ ಕಾಯಕಲ್ಪ ಯೋಜನೆ ದುರಸ್ತಿ¤ಗೆ ಇಡೀ ಕೆರೆಯೇ ಹಳ್ಳಹತ್ತಿ ಹೋಗಿದ್ದು, ಕಬ್ಬು ಕೃಷಿ ಮಾಡುವುದನ್ನೇ ಬಿಟ್ಟಿದ್ದಾರೆ ಇಲ್ಲಿನ ರೈತರು.

ಕುಸಿದ ಕಿಂಡಿ ಅಣೆಕಟ್ಟು
ಉಪ್ಪು ನೀರು ತಡೆಗಾಗಿ ಕೃಷಿಕರೇ ಕಟ್ಟೆ ಕಟ್ಟಿ ಅದಕ್ಕೊಂದು ರಂಧ್ರ ಕೊರೆದು, ನೀರಿನ ಉಬ್ಬರ ಇಳಿತಕ್ಕೆ ಹೊಂದಿಕೊಳ್ಳುವಂತೆ ಬಾಗಿಲು ನಿರ್ಮಿಸಿಕೊಂಡು ಉಪ್ಪು ನೀರು ಒಳಗೆ ಬಾರದಂತೆ ತಡೆ ಮಾಡಿದ್ದರು. ಆದರೆ ರೈತರ ತಡೆಗೋಡೆ ಸಮೀಪದಲ್ಲೇ ಉಪ್ಪು ನೀರು ತಡೆಗೆ ನಿರ್ಮಿಸಿದ ಕಿಂಡಿ ಅಣೆಕಟ್ಟು ಮೂರೇ ತಿಂಗಳಲ್ಲಿ ಕುಸಿದು ಬಿದ್ದಿದೆ. ರೈತರು ನಿರ್ಮಿಸಿದ ಸ್ವಯಂ ಚಾಲಿತ ಬಾಗಿಲು ಸಿಗಡಿ ಕೆರೆಗೆ ನೀರು ಹಾಯಿಸಲು ತೆರೆದಿಡುವುದರಿಂದ ಉಪ್ಪು ನೀರು ಕೃಷಿ ಭೂಮಿಗೆ ಹರಿಯುತ್ತದೆ.

ಸಿಗಡಿ ಕೃಷಿಗಾಗಿ ಉಪ್ಪು ನೀರು ಒಳಗೆ ಬರಲು ಎಲ್ಲ ಅನುಕೂಲ ಮಾಡಿಕೊಂಡಿದ್ದರಿಂದ ಸುಮಾರು 50 ಎಕ್ರೆ ಪ್ರದೇಶದಲ್ಲಿ ಬೆಳೆಯುತ್ತಿರುವ ಭತ್ತದ ಕೃಷಿ ಭೂಮಿಯಲ್ಲಿ ಮುಂಗಾಲಿನವರೆಗೆ ಉಪ್ಪು ನೀರು ನಿಂತಿದೆ. ಈ ಬಾರಿ ಮುಂಗಾರಿನಲ್ಲೂ ಭತ್ತದ ಬೆಳೆ ಕಷ್ಟಕರ ಎನ್ನುವುದಾಗಿ ತಮ್ಮ ಅಳಲು ತೋಡಿಕೊಳ್ಳುತ್ತಾರೆ ಇಲ್ಲಿನ ರೈತರು.

2 ವರ್ಷಗಳಿಂದ ಬೇಸಾಯವಿಲ್ಲ
ಉಪ್ಪು ನೀರಿನ ಸಮಸ್ಯೆಯಿಂದ ಬೇಸಾಯ ಮಾಡುವುದೇ ಕಷ್ಟಕರವಾಗಿದೆ. ನಮ್ಮ ಈ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಾಗಲಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಗ್ರಾ.ಪಂ. ಆಗಲಿ ಯಾರೂ ಕೂಡ ಕೇಳುವುದಿಲ್ಲ. ಸಿಗಡಿ ಕೃಷಿಗೆ ಇಲ್ಲಿ ಅನುಮತಿ ನೀಡಿರುವುದರಿಂದಾಗಿ ನಮ್ಮ ತುತ್ತಿನ ಅನ್ನಕ್ಕೆ ತೊಂದರೆಯಾಗುತ್ತಿದೆ. ಕಳೆದ 2 ವರ್ಷಗಳಿಂದ ಸುಗ್ಗಿ ಬೆಳೆಗೆ ತೊಂದರೆಯಾಗುತ್ತಿದೆ.
– ವಿಶ್ವನಾಥ ಗಾಣಿಗ ಹರೆಗೋಡು, ಕೃಷಿಕರು

ಭೇಟಿ ನೀಡಿ ಪರಿಶೀಲನೆ
ಕೃಷಿಗೆ ಉಪ್ಪು ನೀರಿನ ಸಮಸ್ಯೆಯಿಂದ ಭತ್ತದ ಕೃಷಿಗೆ ತೊಂದರೆಯಾಗಿರುವುದರ ಬಗ್ಗೆ ಇಲಾಖೆಯಿಂದ ಯಾವುದೇ ಪರಿಹಾರ ನೀಡುವುದು ಕಷ್ಟ. ಆದರೆ ಈ ಬಗ್ಗೆ ರೈತರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಿ. ಮುಂದಿನ ದಿನಗಳಲ್ಲಿ ಅಲ್ಲಿಗೆ ಭೇಟಿ ನೀಡಿ, ವಸ್ತುಸ್ಥಿತಿ ಬಗ್ಗೆ ತಿಳಿದುಕೊಂಡು, ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು.
– ರೂಪಾ, ಸಹಾಯಕ ನಿರ್ದೇಶಕಿ, ಕೃಷಿ ಇಲಾಖೆ ಕುಂದಾಪುರ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.