ಶಿಥಿಲವಾಯಿತು 15 ವರ್ಷ ಹಳೆಯ ಯುಜಿಡಿ ಪೈಪ್‌ಲೈನ್‌

ನಗರವೆಲ್ಲ ಗಬ್ಬೆದ್ದು ನಾರುತ್ತಿದೆ: ಬೇಕಿದೆ ಶಾಶ್ವತ ಪರಿಹಾರ

Team Udayavani, Aug 3, 2019, 5:01 AM IST

IMG-20190802-WA0003

ಉಡುಪಿ: ಅಡ್ಕದಕಟ್ಟೆ ಮಾರ್ಗ ಹಾಗೂ ಮೂಡು ತೋಟ ಮಧ್ಯದಿಂದ ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ (ಎಸ್‌ಟಿಪಿ) ಹಾದು ಹೋಗುವ ಒಳಚರಂಡಿ ಪೈಪ್‌ಲೈನ್‌ ಸ್ಥಳೀಯರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಈ ಮಾರ್ಗದ ಒಳಚರಂಡಿ ಪೈಪ್‌ ಒಡೆದು ಹೊರಗೆ ಹರಿಯುತ್ತಿರುವ ಕೊಳಚೆ ನೀರು ಸ್ಥಳೀಯರ ನಿ¨ªೆಗೆಡಿಸಿದೆ.

ದುರಸ್ತಿ ಭಾಗ್ಯ ದೊರಕಿಲ್ಲ
ನಗರದ ವಿವಿಧ ಭಾಗಗಳ‌ ಕೊಳಚೆ ನೀರು ಒಳಚರಂಡಿ (ಯುಜಿಡಿ) ನಿಟ್ಟೂರು ಅರ್ಕದ ಕಟ್ಟೆ ಹಾಗೂ ಮೂಡು ತೋಟದ ಮೂಲಕ ನಿಟ್ಟೂರು ಶುದ್ಧೀಕರಣ ಘಟಕಕ್ಕೆ ಹರಿದು ಹೋಗುತ್ತದೆ. ಇದೀಗ ವಿಷ್ಣು ಮೂರ್ತಿ ದೇವಸ್ಥಾನ ಹಾಗೂ ಮೂಡುತೋಟದಿಂದ ಎಸ್‌ಟಿಪಿಗೆ ಹೋಗುವ ಪೈಪ್‌ ಲೈನ್‌ ಒಡೆದು ಹೋಗಿ 10 ದಿನ ಕಳೆದರೂ ನಗರಸಭೆ ಅಧಿಕಾರಿಗಳಿಂದ ದುರಸ್ತಿ ಭಾಗ್ಯ ದೊರಕಿಲ್ಲ.

ಸಾಂಕ್ರಾಮಿಕ ರೋಗದ ಭೀತಿ
ನಿಟ್ಟೂರು ಎಸ್‌ಟಿಪಿಗೆ ಪೈಪ್‌ಲೈನ್‌ ಮೂಲಕ ಹಾದು ಹೋಗಬೇಕಾದ ಕೊಳಚೆ ನೀರು ಹಾಗೂ ಮಲಮೂತ್ರ ಒಡೆದ ಪಿಟ್‌ನಿಂದ ಹೊರಕ್ಕೆ ಹರಿಯುತ್ತಿದೆ. ಇದರಿಂದಾಗಿ ಪರಿಸರದ ನೈರ್ಮಲ್ಯ ಹಾಳಾಗಿದ್ದು, ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಭೀತಿ ಮನೆ ಮಾಡಿದೆ. ಈಗಾಗಲೇ ಹಲವರು ಕಾಯಿಲೆಗೆ ತುತ್ತಾಗಿ ಆಸ್ಪತ್ರೆ ಸೇರಿದ್ದಾರೆ. ಅಲ್ಲದೇ, ಪೈಪ್‌ ಲೈನ್‌ ಸಮೀಪದ ನಿವಾಸಿಗಳು ಮನೆ ಖಾಲಿ ಮಾಡಿ ಬೇರೆ ಪ್ರದೇಶಕ್ಕೆ ಹೋಗುವ ಯೋಚನೆಯಲ್ಲಿದ್ದಾರೆ. ಖಾಲಿಯಾಗಿರುವ ಮನೆಗಳಿಗೆ ಬರಲು ಬಾಡಿಗೆದಾರರು ಹಿಂದೇಟು ಹಾಕುತ್ತಿದ್ದು, ಇದರಿಂದ ಮನೆ ಮಾಲಿಕರು ಚಿಂತೆಗೀಡಾಗಿದ್ದಾರೆ.

ಭಕ್ತರಿಗೆ ಕಿರಿಕಿರಿ
ಅರ್ಕದ ಕಟ್ಟೆಯಲ್ಲಿ ಪೈಪ್‌ ಹೊಡೆದು ಹೋಗಿರುವ ಜಾಗದಿಂದ ಕೂಗಳತೆ ದೂರದಲ್ಲಿ ವಿಷ್ಣುಮೂರ್ತಿ ದೇವಸ್ಥಾನ ಇದೆ. ದೇವಸ್ಥಾನಕ್ಕೆ ಬರುವ ಭಕ್ತರು ಕೊಳಚೆ ನೀರಿನ ದುರ್ನಾತದಿಂದ ಪ್ರತಿನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಭಕ್ತರು ಹಾಗೂ ಸ್ಥಳೀಯರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಲಕ್ಷಾಮ
ಒಳಚರಂಡಿಯಿಂದ ಸೊರಿಕೆಯಿಂದ ವಿಷ್ಣು ಮೂರ್ತಿನಗರ ಹಾಗೂ ಮುಡುತೋಟ ಸಮೀಪದ 20ಕ್ಕಿಂತ ಹೆಚ್ಚಿನ ಬಾವಿ ನೀರು ಹಾಳಾಗಿದೆ. ಹೀಗಾಗಿ ಈ ಪ್ರದೇಶದ ಜನರು ಬಾವಿ ಕೊರೆಸಲು ಹಿಂದೇಟು ಹಾಕುತ್ತಿದ್ದಾರೆ.

ಪೈಪ್‌ ಲೈನ್‌ ಶಿಥಿಲಗೊಂಡಿದೆ
ನಗರದಿಂದ ನಿಟ್ಟೂರು ಕೊಳಚೆ ನೀರು ಶುದ್ಧೀಕರಣ ಘಟಕ್ಕೆ ಹೋಗುವ ಪೈಪ್‌ ಅಲ್ಲಲ್ಲಿ ಒಡೆದು ಹೋಗುತ್ತಿದೆ. 2005ರಲ್ಲಿ ಒಳಚರಂಡಿ ಪೈಪ್‌ಲೈನ್‌ಗಳನ್ನು ಆಳವಡಿಸಲಾಗಿತ್ತು. ಈ ಪೈಪ್‌ ಆಳವಡಿಸಿ ಸುಮಾರು 15 ವರ್ಷಗಳು ಕಳೆದಿದ್ದು, ಇದೀಗಾ ಪೈಪ್‌ಗ್ಳು ಶಿಥಿಲಾವಸ್ಥೆಗೆ ತಲುಪಿದೆ.

ಬೇಕಿದೆ ಶಾಶ್ವತ ಪರಿಹಾರ!
ನಗರದಿಂದ ನೀರು ಶುದ್ಧೀಕರಣ ಘಟಕಕ್ಕೆ ಹೋಗುವ ಎಲ್ಲ ಒಳಚರಂಡಿ ಪೈಪ್‌ ಲೈನ್‌ಗಳನ್ನು ಬದಲಾಯಿಸಿದರೆ ಮಾತ್ರ ಸಮಸ್ಯೆ ಮುಕ್ತಿ ಸಿಗಲು ಸಾಧ್ಯ. ಕಳೆದ ಹಲವು ತಿಂಗಳಿನಿಂದ ನಗರ ಸಭೆ ಅಧಿಕಾರಿಗಳು ನಗರದ ವಿವಿಧ ಕಡೆ ಯುಜಿಡಿ ಪೈಪ್‌ ಲೈನ್‌ ದುರಸ್ತಿ ಮಾಡಿದರೂ ತಿಂಗಳಾಗುವುದರ ಒಳಗಾಗಿ ಮತ್ತೆ ಹಾಳಾಗುತ್ತಿದೆ.

2ತಿಂಗಳುಗಳಲ್ಲಿ
6 ಬಾರಿ ದುರಸ್ತಿ
ವಿಷ್ಣುಮೂರ್ತಿ ದೇವಸ್ಥಾನ ಸಮೀಪದ ಯುಜಿಡಿ ಪೈಪ್‌ಲೈನ್‌ ಒಡೆದು ಹೋಗಿದೆ. 2 ತಿಂಗಳುಗಳಲ್ಲಿ 6 ಬಾರಿ ದುರಸ್ತಿ ಮಾಡಲಾಗಿದೆ. ನಗರಸಭೆ ಸಮಸ್ಯೆ ಮರುಕಳಿಸದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ.
-ಸಂತೋಷ್‌ ನಿಟ್ಟೂರು, ವಾರ್ಡ್‌ ಸದಸ್ಯ, ನಗರಸಭೆ ಉಡುಪಿ.

ಬದಲಿಸುವ ನಿರ್ಧಾರವಾಗಿಲ್ಲ
ನಗರದಲ್ಲಿ ಒಡೆದು ಹೋದ ಯುಜಿಡಿ ಪೈಪ್‌ಲೈನ್‌ ದುರಸ್ತಿ ನಗರಸಭೆಯಿಂದ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಪೈಪ್‌ ಲೈನ್‌ ಬದಲಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
-ಆನಂದ ಕೊಲ್ಲೋಳಿಕರ್‌, ಪೌರಾಯುಕ್ತರು, ನಗರಸಭೆ ಉಡುಪಿ

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.