ಅಂಬೇಡ್ಕರ್‌ ಭವನ ನಿರ್ಮಾಣ ಪ್ರಕ್ರಿಯೆಗೆ ವೇಗ ನೀಡುವಂತೆ ಸೂಚನೆ


Team Udayavani, Jul 31, 2017, 7:25 AM IST

3007KAR1.jpg

ಕಾರ್ಕಳ: ಪ. ಜಾತಿ. ಪ. ಪಂಗಡದ ಕುಂದು ಕೊರತೆ ಸಭೆ ಶನಿವಾರ ತಹಶೀಲ್ದಾರ್‌ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಅಂಬೇಡ್ಕರ್‌ ಭವನದ ನಿರ್ಮಾಣದಲ್ಲಿ ಆಗುತ್ತಿರುವ ವಿಳಂಬ, ಗ್ರಾಮಾಂತರ ಪ್ರದೇಶದ ವಿದ್ಯುತ್‌ ಸಮಸ್ಯೆ, ಗ್ರಾಮಾಂತರ ಪ್ರದೇಶದಲ್ಲಿ ಹಕ್ಕುಪತ್ರ ವಿತರಣೆಗೆ ಆಗುತ್ತಿರುವ ವಿಳಂಬ, ಎಪಿಎಂಸಿ ಅವ್ಯವಹಾರ, ಮೊದಲಾದವುಗಳ ಬಗ್ಗೆ ಪ್ರಸ್ತಾವವಾಯಿತು.

ಪ್ರತ್ಯೇಕ ಕುಂದು ಕೊರತೆ ಸಭೆ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಶೀಲ್ದಾರ್‌ ಟಿ. ಜಿ. ಗುರುಪ್ರಸಾದ್‌, ದಲಿತ ಏಳಿಗೆಗಾಗಿ ಇಂತಹ ಸಭೆಗಳನ್ನು ತಾಲೂಕಿನ ವಿವಿಧೆಡೆಗಳಲ್ಲಿ ಆಯೋಜಿಸುವ ಅಗತ್ಯ ಇದೆ. ಪುರಸಭಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಸಭೆಯನ್ನು ಕರೆಯುವ ಬಗ್ಗೆ ನಿರ್ಧರಿಸಲಾಗಿದೆ. ಸದ್ಯದಲ್ಲಿಯೇ ಸಭೆ ನಡೆಸಲಾಗುವುದು ಎಂದರು.

ದರ್ಪದ ಮಾತು
ಇದೇ ಸಂದರ್ಭದಲ್ಲಿ ಮಾತನಾಡಿದ ಪ. ಜಾತಿಯ ಮುಖಂಡರು ಮಾತನಾಡಿ, ಪುರಸಭೆಯ ಕೆಲ ಸಿಬಂದಿ ಕೆಲಸಕ್ಕೆ ಮನ ಬಂದಂತೆ ಬರುತ್ತಿದ್ದಾರೆ. ಕಚೇರಿಗೆ ಹೋದರೆ ದರ್ಪದ ಮಾತಾಡುತ್ತಾರೆ ಇಂಥವರನ್ನು ಕೆಲಸದಿಂದ ತೆಗೆದು ಹಾಕಬೇಕು ಎಂದರು.

ಅಂಬೇಡ್ಕರ್‌ ಭವನ ನಿರ್ಮಾಣ
ಅಂಬೇಡ್ಕರ್‌ ಭವನ ನಿರ್ಮಾಣದ ಕುರಿತು ಜಿಲ್ಲಾ  ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹಾಗೂ ಶಾಸಕ ಸುನಿಲ್‌ ಕುಮಾರ್‌ ಅವರಲ್ಲಿ ವಿಷಯ ಪ್ರಸ್ತಾವಿಸಲಾಗಿದ್ದು, ಗುದ್ದಲಿಪೂಜೆಗೆ ದಿನಾಂಕ ಕೇಳಲಾಗಿದೆ ಎಂದು ತಹಶೀಲ್ದಾರ್‌ ಗುರುಪ್ರಸಾದ್‌ ತಿಳಿಸಿದರು.

ತಾ.ಸ. ಆಸ್ಪತ್ರೆ ಹೊಸ ಕಟ್ಟಡ ಕಳಪೆ 
ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣವಾದ ಹೊಸ ಕಟ್ಟಡ ಕಳಪೆಯಾಗಿದೆ. ಮಳೆ ನೀರು ಸೋರಿಕೆಯಾಗಿ ರೋಗಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ ಜನಪ್ರತಿನಿಧಿ ಗಳಿಗೆ, ವಿವಿಧ ಇಲಾಖಾ ಧಿಕಾರಿಗಳಿಗೆ ದೂರು ಸಲ್ಲಿಸಿ ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ  ಎಂದು ಅಣ್ಣಪ್ಪ ನಕ್ರೆ ಆಕ್ರೋಶ ವ್ಯಕ್ತಪಡಿಸಿದರು.

ರಿಕ್ಷಾ ನಿಲ್ದಾಣಕ್ಕೆ ಸರ್ವೇ
ಪುರಸಭಾ ವ್ಯಾಪ್ತಿಯಲ್ಲಿ ಪ್ರತ್ಯೇಕ ರಿಕ್ಷಾ ನಿಲ್ದಾಣ ಬೇಕು ಎನ್ನುವ ಬೇಡಿಕೆ ಬಂದಿದೆ. ಈ ಕುರಿತು ಜಾಗದ ಸರ್ವೇ ನಡೆಸಲಾಗುವುದು ಆ ಬಳಿಕ ರಿಕ್ಷಾ ನಿಲ್ದಾಣ ನಿರ್ಮಾಣದ ಬಗ್ಗೆ ಪುರಸಭೆಗೆ ಮಾಹಿತಿ ನೀಡಲಾಗುವುದು ಎಂದು ತಹಶೀಲ್ದಾರ್‌ ಭರವಸೆ ನೀಡಿದರು.

ಅಂಬೇಡ್ಕರ್‌ಗೆ ಅಗೌರವ: ಆರೋಪ
ಅಂಬೇಡ್ಕರ್‌ ಅವರ ಹೆಸರಿನಲ್ಲಿ ಹಲವು ಭವನಗಳನ್ನು ನಿರ್ಮಿಸಿದ್ದರೂ ಅದರ ನಿರ್ವಹಣೆ ಆಗಿಲ್ಲ. ಇದು ಅಂಬೇಡ್ಕರ್‌ ಅವರಿಗೆ ತೋರಿದ ಅಗೌರವ, ಎಂದು ಮೈಸೂರು ವಿಭಾಗ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ ವಾದದ ಸಂಘಟನಾ ಸಂಚಾಲಕ ಹೂವಪ್ಪ ಮಾಸ್ತರ್‌ ಆರೋಪಿಸಿದರು. ಕೂಡಲೇ ಈ ಕುರಿತು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಅವ್ಯವಹಾರ: ಪ್ರಸ್ತಾವ
ಎಪಿಎಂಸಿಯಲ್ಲಿ  ಅವ್ಯವಹಾರ ನಡೆದಿದ್ದು ಇದರ ಬಗ್ಗೆ ಈ ಹಿಂದಿನ ಸಭೆಗಳಲ್ಲೂ ಪ್ರಸ್ತಾವಿಸಲಾಗಿದೆ. 2015ರ ಬಳಿಕದ ದಾಖಲೆಗಳನ್ನು ಮಾತ್ರ ಪರಿಶೀಲನೆ ನಡೆಸಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂಬ ವರದಿಯನ್ನು ಸಭೆಗೆ ನೀಡಲಾಗಿದೆ.  ಇದು ಸರಿ ಅಲ್ಲ.  2012, 2013, 2014ರ ಬಗ್ಗೆ ತನಿಖೆ ನಡೆದಾಗ ಮಾತ್ರ ಎಲ್ಲಾ ಅವ್ಯವಹಾರ ಬೆಳಕಿಗೆ ಬರಲು ಸಾಧ್ಯ ಎಂದು ಶ್ರೀನಿವಾಸ ಕಾರ್ಲ  ಆಗ್ರಹಿಸಿದರು.

ಸವಲತ್ತುಗಳು
ತಹಶೀಲ್ದಾರ್‌ ಮಾತನಾಡಿ, 94ಸಿ ಅಡಿಯಲ್ಲಿ ಬಂದಿರುವ ಅರ್ಜಿ ಒಟ್ಟು 1,165. ವಿಲೇವಾರಿಯಾಗಿರುವ ಅರ್ಜಿಗಳು 188 .ಇದರಲ್ಲಿ ಕಡತ ತಯಾರಿಗೆ 320 ಬಾಕಿ ಉಳಿದಿವೆ. 94ಸಿಸಿಯಲ್ಲಿ 462 ಅರ್ಜಿಗಳು ಬಂದಿರುತ್ತವೆೆ. ಅವುಗಳಲ್ಲಿ 128 ವಿಲೇವಾರಿಯಾಗಿವೆ. 264 ಕಡತ ಆಗಿದೆ. 30 ಬಾಕಿ ಉಳಿದಿದೆ. ನಮೂನೆ 50ರಲ್ಲಿ 1,253 ಅರ್ಜಿಗಳು ಬಂದಿವೆ. 638 ಮಂಜೂರಾತಿಯಾಗಿವೆ. 324 ಅರ್ಜಿಗಳು ಬಾಕಿ ಉಳಿದಿವೆ. ಕುಮ್ಕಿ ಜಮೀನು 53ರಲ್ಲಿ 1277 ಅರ್ಜಿಗಳು ಬಂದಿವೆ. 560 ಅರ್ಜಿಗಳು ಮಂಜೂರಾತಿ ಆಗಿವೆ ಎಂದರು.

ದೈವಸ್ಥಾನಗಳಿಗೆ ಅನುದಾನ
ಚಾರ ಶ್ರೀ ನಾಗಬ್ರಹ್ಮ ಹೈಗುಳಿ ದೈವಸ್ಥಾನ ರೂ. 2 ಲಕ್ಷ, ಹೆಬ್ರಿ ಶ್ರೀ ಮಾರಿ ಅಮ್ಮನವರ ದೇವಸ್ಥಾನ ರೂ. 2.00 ಲಕ್ಷ, ಮುಡಾರು ಶ್ರೀ ಮುಗೇರ ಮತ್ತು ಪಂಜುರ್ಲಿ ಹಲೇರ ದೈವಸ್ಥಾನ ರೂ. 2.00 ಲಕ್ಷ ಬಿಡುಗಡೆಗೊಂಡಿರುತ್ತದೆ ಎಂದು ತಹಶೀಲ್ದಾರ್‌ ಮಾಹಿತಿ ನೀಡಿದರು.

ಸಮರ್ಪಕ ವಿದ್ಯುತ್‌ ನೀಡಿ
ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸೋಲಾರ್‌ ದೀಪಗಳನ್ನು ಎಸ್‌ಸಿ, ಎಸ್‌ಟಿ ಮನೆಗಳಿಗೆ ನೀಡಬೇಕು ವಿದ್ಯುತ್‌ ಸರಿಯಾಗಿ ಇಲ್ಲದೇ ಎಲ್ಲ ಕೆಲಸಗಳಿಗೂ ತೊಂದರೆಯಾಗಿದೆ,ವಿದ್ಯಾರ್ಥಿಗಳ ಓದಿಗೆ ಹಿನ್ನಡೆಯಾಗಿದೆ ಎಂದು ಶ್ರೀಧರ್‌ ಗೌಡ ಒತ್ತಾಯಿಸಿದರು.ಸಭೆಯಲ್ಲಿ ತಹಶೀಲ್ದಾರ್‌ ಗುರುಪ್ರಸಾದ್‌, ವಿವಿಧ ಇಲಾಖಾ ಸಿಬಂದಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

udupiUdupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.