ಹಿಂದೂ ಸಂಖ್ಯೆ ಕುಸಿದ ಕಾರಣ ಜನಗಣತಿ ಬಹಿರಂಗವಾಗಿಲ್ಲ


Team Udayavani, Feb 15, 2020, 5:20 AM IST

14022020ASTRO07

ಉಡುಪಿ: ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿತ ಕಂಡು ಬಂದಿದೆ. ಹೀಗಾಗಿ 2011ರ ಜನಗಣತಿಯನ್ನೂ ಬಹಿರಂಗಪಡಿಸಿಲ್ಲ ಎಂದು ಚಿಂತಕ, ಪ್ರಾಧ್ಯಾಪಕ ಪ್ರೊ| ನಂದನ ಪ್ರಭು ಹೇಳಿದ್ದಾರೆ.

ಉಡುಪಿ ಆರೆಸ್ಸೆಸ್‌ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ “ಹಿಂದುತ್ವದ ಆವಶ್ಯಕತೆ- ಪೌರತ್ವದ ಅನಿವಾರ್ಯತೆ’ ವಿಷಯ ಕುರಿತು ಉಪನ್ಯಾಸ ನೀಡಿದ ಅವರು, ಹಿಂದೂಗಳ ಜನಸಂಖ್ಯೆ ಶೇ. 85 ಎನ್ನುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಜನಸಂಖ್ಯೆ ಶೇ. 79ಕ್ಕೆ ಇಳಿದಿದೆ.ಇತರ ಮತೀಯರ ಸಂಖ್ಯೆ ಹೆಚ್ಚಿದೆ ಎನ್ನುವುದನ್ನು ಮುಚ್ಚಿಡಲು, ಹಿಂದೂ ಸಂಸ್ಕೃತಿ ಉಳಿಸುವುದು ಅಗತ್ಯ ಎಂಬ ಭಾವನೆ ಬರಬಹುದು ಎಂಬ ಕಾರಣಕ್ಕೆ 2011ರ ಜನಗಣತಿಯನ್ನು ಇಂದಿಗೂ ನಿಖರವಾಗಿ ಬಹಿರಂಗಪಡಿಸಿಲ್ಲ ಎಂದರು.

ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿ ಸುವವರು ಮುಂದಿನ ಅಂಶಗಳನ್ನು ಗಮನಿಸಬೇಕು. ಇಲ್ಲಿನ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ಹೊರಗಿನಿಂದ ಬರುವವರು ಅರ್ಜಿ ಸಲ್ಲಿಸಿದರೆ ಕಾನೂನು ಪ್ರಕಾರ ಪೌರತ್ವ ನೀಡಲಾಗುತ್ತದೆ. ನೇಪಾಲದಿಂದ ಬಂದ ಹಿಂದೂಗಳು, ಶ್ರೀಲಂಕಾದ ತಮಿಳರು, ಟಿಬೆಟಿಯನ್‌ ಬೌದ್ಧರ ವಿಚಾರಗಳಲ್ಲಿ ಧಾರ್ಮಿಕ ಸಂಘರ್ಷ ಆಗಿರದೆ ಪಾಕಿಸ್ಥಾನ, ಬಾಂಗ್ಲಾದಲ್ಲಿ ಧಾರ್ಮಿಕ ಸಂಘರ್ಷದಿಂದ ಬಂದ ಅಲ್ಪಸಂಖ್ಯಾಕರಿಗೆ ಮಾತ್ರ ಪೌರತ್ವ ಕೊಡುವ ವಿಚಾರವಾಗಿದೆ ಎಂದರು.

ಹಿಂದುತ್ವ ರಾಷ್ಟ್ರದ ಅಸ್ಮಿತೆ
ಹಿಂದುತ್ವ ಎನ್ನುವುದು ಪ್ರತಿಕ್ರಿಯಾತ್ಮಕವಾದುದಲ್ಲ. ಇದು ರಾಷ್ಟ್ರದ ಅಸ್ಮಿತೆ (ಐಡೆಂಟಿಟಿ). ಪ್ರಪಂಚದ ಎಲ್ಲ ರಾಷ್ಟ್ರಗಳಲ್ಲಿಯೂ ಇದು ಇದೆ. ಭಾರತದ ರಾಷ್ಟ್ರೀಯತೆಯನ್ನು ಹಿಂದೂ ಐಡೆಂಟಿಟಿಯಿಂದ ಸುಮಾರು 2,000 ವರ್ಷಗಳಿಂದ ಗುರುತಿಸಲಾಗಿದೆ. ಅದಕ್ಕೂ ಹಿಂದೆ ಸನಾತನ ಎಂಬ ಹೆಸರಿತ್ತು ಎಂದು ಪ್ರಭು ವಿಶ್ಲೇಷಿಸಿದರು.

ಹಿಂದುತ್ವದಲ್ಲಿ ಸಾಂಸ್ಕೃತಿಕ, ಧಾರ್ಮಿಕ ಅಂಶಗಳೂ ಇವೆ. ಜತೆಗೆ ಜೀವನದೃಷ್ಟಿ- ವಿಶ್ವದೃಷ್ಟಿಯೂ ಇದೆ. ವೇದ ಪ್ರಾಮಾಣ್ಯವನ್ನು ಒಪ್ಪದ, ದೇವರನ್ನೂ ಒಪ್ಪದ ನಾಸ್ತಿಕರಿಗೂ ಹಿಂದುತ್ವದಲ್ಲಿ ಸ್ಥಾನವಿದೆ. ಇಸ್ಲಾಂ, ಕ್ರೈಸ್ತ ಮತಗಳಲ್ಲಿ ಪ್ರಭುತ್ವದ ಮೂಲಕ ಧಾರ್ಮಿಕ ಹಿಡಿತ ಸಾಧಿಸುವ ಕ್ರಮವಿದೆ ಎಂದರು.

ಆರೆಸ್ಸೆಸ್‌ ಜಿಲ್ಲಾ ಸಂಘಚಾಲಕ್‌ ಡಾ| ನಾರಾಯಣ ಶೆಣೈ, ನಗರ ಸಂಘಚಾಲಕ್‌ ರಾಮಚಂದ್ರ ಸನಿಲ್‌ ಉಪಸ್ಥಿತರಿದ್ದರು. ನಗರ ಬೌದ್ಧಿಕ್‌ ಪ್ರಮುಖ್‌ ಗಣೇಶ್‌ ಅಂಬಲಪಾಡಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.