ಉಡುಪಿ ಜಿಲ್ಲೆಯ ಹಿರಿಮೆ; ರಾಜ್ಯದಲ್ಲೇ ಅತ್ಯಧಿಕ ಮಹಿಳಾ ಮತದಾರರು


Team Udayavani, Jan 9, 2023, 7:10 AM IST

ಉಡುಪಿ ಜಿಲ್ಲೆಯ ಹಿರಿಮೆ; ರಾಜ್ಯದಲ್ಲೇ ಅತ್ಯಧಿಕ ಮಹಿಳಾ ಮತದಾರರು

ಉಡುಪಿ:ಇತ್ತೀಚೆಗೆ ನಡೆದ 2023ರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆಯ ಬಳಿಕ ಪ್ರಕಟಿಸಲಾದ ಅಂತಿಮ ಪಟ್ಟಿ ಪ್ರಕಾರ ಜಿಲ್ಲಾವಾರು ಮತದಾರರ ಸಂಖ್ಯೆಯಲ್ಲಿ ರಾಜ್ಯ ದಲ್ಲೇ ಅತೀ ಹೆಚ್ಚು ಮಹಿಳಾ ಮತದಾರರು ಉಡುಪಿ ಜಿಲ್ಲೆಯಲ್ಲಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಅತೀ ಕಡಿಮೆ ಮಹಿಳಾ ಮತದಾರರಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣ ಆಯುಕ್ತರು ಟ್ವೀಟ್‌ ಮಾಡಿದ್ದಾರೆ.

ಉಡುಪಿ ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲೂ ಅಲ್ಲಲ್ಲಿನ ಮತದಾರರ ಒಟ್ಟು ಸಂಖ್ಯೆಯಲ್ಲಿ ಪುರುಷ ಮತದಾರರೇ ಹೆಚ್ಚಿದ್ದಾರೆ.

ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಅನಂತರ ರಾಜ್ಯದಲ್ಲಿ 5,05,48,553 ಮತದಾರ ರಿದ್ದು, 2,54,49,725 ಪುರುಷ ಹಾಗೂ 2,50,94,326 ಮಹಿಳಾ ಮತದಾರರಿದ್ದಾರೆ. ಒಟ್ಟು ಪುರುಷ ಮತದಾರರು ಹೆಚ್ಚಿದ್ದಾರೆ. ಆದರೆ ಉಡುಪಿ ಜಿಲ್ಲೆಯ 10,16,245 ಮತದಾರ ರಲ್ಲಿ 4,90,060 ಪುರುಷರು ಮತ್ತು 5,26,173 ಮಹಿಳೆಯರು ಮತ್ತು 12 ಲಿಂಗತ್ವ ಅಲ್ಪಸಂಖ್ಯಾಕ ರಿದ್ದಾರೆ. ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆಯ ಸಂದರ್ಭ 13,816 ಯುವ ಮತ ದಾರರು ನೋಂದಣಿಯಾಗಿದ್ದು, ಇದರಲ್ಲೂ ಯುವತಿಯರ ಸಂಖ್ಯೆ ಅಧಿಕ.

ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಯುವ ಮತದಾರರ ಸೇರ್ಪಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಎಲ್ಲ ಕಾಲೇಜುಗಳಲ್ಲಿ ವಿಶೇಷ ಆಭಿಯಾನ ನಡೆಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ, ತಿದ್ದು ಪಡಿಗೆ ಅರ್ಜಿಗಳನ್ನು ಸಲ್ಲಿಸಿದ್ದು, ಯಾವುದೇ ಆಕ್ಷೇಪಗಳಿಗೆ ಅವಕಾಶ ವಿಲ್ಲದಂತೆ ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರು ಇದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ.
– ಕೂರ್ಮಾರಾವ್‌ ಎಂ.
ಉಡುಪಿ ಜಿಲ್ಲಾಧಿಕಾರಿ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.