ನಿರ್ಜೀವವಾಗುತ್ತಿದೆ ಉಡುಪಿಯ ಜೀವನದಿ ಇಂದ್ರಾಣಿ

ನದಿ ಸೇರುತ್ತಿದೆ ಒಳಚರಂಡಿ ತ್ಯಾಜ್ಯ ನೀರು

Team Udayavani, Nov 30, 2019, 4:23 AM IST

zx-8

ಉಡುಪಿ: ಉಡುಪಿ ನಗರದ ಜೀವನದಿ ಯಾದ ಇಂದ್ರಾಣಿ ದಿನೇ ದಿನೇ ಕಲುಷಿತಗೊಳ್ಳು ತ್ತಿದೆ. ನಗರ ಅಭಿವೃದ್ಧಿ ಹೊಂದಿದಂತೆ ಮೂಲ ಸೌಕರ್ಯಗಳು ಅಭಿವೃದ್ಧಿಯಾಗದಿದ್ದರೆ ಯಾವೆಲ್ಲ ಸಮಸ್ಯೆ ಎದುರಾಗಬಹುದು ಎಂಬುವುದಕ್ಕೆ ಈ ನದಿ ಸ್ಪಷ್ಟ ಉದಾಹರಣೆಯಾಗಿದೆ.

ಕಳೆದ ಒಂದು ತಿಂಗಳಿನಿಂದ ರಾತ್ರಿ ಹಗಲು ಒಳಚರಂಡಿ ನೀರು ಇಂದ್ರಾಣಿ ನದಿಯಲ್ಲಿ ಹರಿಯುತ್ತಿದೆ. ನಗರಸಭೆಯ ನಿರ್ಲಕ್ಷ್ಯದಿಂದಾಗಿ ಈ ನದಿಯ ಪಾಡು ಕೇಳದವರಿಲ್ಲದಂತಾಗಿದೆ. ಹೆಚ್ಚುತ್ತಿರುವ ನಾಗರಿಕತೆ ಹಾಗೂ ಕಟ್ಟಡಗಳು ಈ ನದಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆೆ. ನೀರಿಗೆ ಎಸೆಯುವ ಹಾಗೂ ಹರಿಯಬಿಡುವ ತ್ಯಾಜ್ಯದ ಪ್ರಮಾಣ ಕಡಿಮೆಯಿದ್ದದ್ದು ಅಭಿವೃದ್ಧಿಯ ನೆಪದಲ್ಲಿ ಅದೆಷ್ಟೋ ಪಾಲು ಹೆಚ್ಚಾಗಿದೆ. ಆಡಳಿತ ವ್ಯವಸ್ಥೆ ಹಾಗೂ ಜನರು ತಮಗೆ ಎಷ್ಟು ಸಾಧ್ಯವೋ ಅಷ್ಟು ಕೊಳೆಯನ್ನು ಎಸೆಯುವ ಮೂಲಕ, ಕೊಳಚೆ ನೀರನ್ನು ಹರಿಸುವ ಮೂಲಕ ಇಂದ್ರಾಣಿಯನ್ನು ಅಸಹನೀಯಗೊಳಿಸಿದ್ದಾರೆ. ಇದರಿಂದಾಗಿ ಒಳಚರಂಡಿಯ ನೀರು ಶುದ್ಧೀಕರಣ ಘಟಕಕ್ಕೆ ತೆರಳುವ ಮೊದಲೇ ತೋಡು ಪಾಲಾಗಿ ನೂರಾರು ಕುಟುಂಬಗಳು ನಿತ್ಯ ದುರ್ವಾಸನೆಯ ನಡುವೆ ಬದುಕಬೇಕಾಗಿದೆ.

ಶುದ್ಧೀಕರಣ ಇಲ್ಲ
ಮನೆಗಳು, ಫ್ಲ್ಯಾಟ್‌ಗಳು, ಅಂಗಡಿ, ಹೊಟೇಲ್‌ಗ‌ಳ ಕೊಳಚೆ ನೀರು, ಶೌಚದ ನೀರು ಅಲ್ಲಲ್ಲಿ ಮ್ಯಾನ್‌ಹೋಲ್‌ಗ‌ಳ ಮೂಲಕ ಒಳಚರಂಡಿ ಸೇರುತ್ತವೆ. ಅಲ್ಲಿಂದ ನಿಟ್ಟೂರಿನಲ್ಲಿರುವ ಶುದ್ಧೀಕರಣ ಘಟಕಕ್ಕೆ ಈ ಹರಿಯುತ್ತದೆ. ಅಲ್ಲಿ ಶುದ್ಧಗೊಂಡ ಬಳಿಕವಷ್ಟೆ ನೀರು ಹೊರಗೆ ಬಿಡಬೇಕು. ಆದರೆ ಇಲ್ಲಿ ಅದಕ್ಕೆ ವ್ಯತಿರಿಕ್ತವಾಗಿ ನಡೆಯುತ್ತಿದೆ. ಕರಾವಳಿ ಬೈಪಾಸ್‌ನಿಂದ ನಿಟ್ಟೂರು ಶುದ್ಧೀಕರಣ ಘಟಕಕ್ಕೆ ಅಳವಡಿಸಲಾದ ಪೈಪ್‌ನಲ್ಲಿ ಒಳಚರಂಡಿ ಕೊಳಚೆ ನಿಟ್ಟೂರಿಗೆ ತಲುಪುವ ಮೊದಲೇ ಅಲ್ಲಲ್ಲಿ ಮ್ಯಾನ್‌ಹೋಲ್‌ಗ‌ಳಿಂದ ಹರಿದು ತೋಡು ಸೇರುತ್ತಿದೆ. ತೋಡು ಈ ಕೊಳಚೆಯನ್ನು ಉಡುಪಿಯಿಂದ ಮಲ್ಪೆಯ ಸಮುದ್ರದ ಬದಿಯವರೆಗೂ ಹರಿಯುತ್ತಿದೆ.

ನೂರಾರು ಕುಟುಂಬಗಳಿಗೆ ಸಂಕಷ್ಟ
ನಿಟ್ಟೂರು ಸುತ್ತಮುತ್ತ ಸುಮಾರು 300 ಮನೆಗಳಿದ್ದು, ಇವರಿಗೆ ನಿತ್ಯ ಕೊಳಚೆ ನೀರಿನ ದರ್ಶನವಾಗುತ್ತಿದೆ. ಅಲ್ಲದೆ ನಿಟ್ಟೂರಿನ 5 ಕಿ.ಮೀ. ದೂರದ ಕೊಡಂಕೂರು, ಮೂಡಬೆಟ್ಟು, ಕೊಡವೂರು, ಕಲ್ಮಾಡಿ ಮತ್ತಿತರ ಪ್ರದೇಶದ ತೋಡಿಗೆ ಹತ್ತಿರವಾಗಿ ಬದುಕುತ್ತಿರುವ ನೂರಾರು ಕುಟುಂಬಗಳೂ ಇದರಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ.

ಮಳೆಗಾಲ, ಬೇಸಗೆಯಲ್ಲಿ ನಿಜ ದರ್ಶನ
ಇರುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡರೆ ಉಡುಪಿ ನಗರಕ್ಕೆ ನೀರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಆದರೆ ಇಲ್ಲಿ ಆಗುತ್ತಿರುವುದೇ ಬೇರೆ. ಬೇಸಗೆಯಲ್ಲಿ ನೀರಿದ್ದರೂ ಕುಡಿಯುವಂತಿಲ್ಲ. ಮಳೆಗಾಲದಲ್ಲಿ ಮಳೆನೀರು ಹರಿಯುವ ತೋಡಿನಲ್ಲಿ ಚರಂಡಿ ನೀರು ಹರಿದು ಎಲ್ಲ ರೀತಿಯ ತ್ಯಾಜ್ಯಗಳು ಮನೆಬಾಗಿಲಿಗೆ ಬಂದು ಬೀಳುತ್ತಿವೆ. ಬಾವಿಗಳ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದ್ದು, ಈ ಕಾರಣಕ್ಕಾಗಿ ನಗರಸಭೆಯ ನೀರನ್ನೇ ಅವಲಂಭಿಸಬೇಕಾದ ಅನಿವಾರ್ಯತೆಯನ್ನು ನಾಗರಿಕರು ಎದುರಿಸುತ್ತಿದ್ದಾರೆ. ಕಾಲಕಾಲಕ್ಕೆ ಒಳಚರಂಡಿ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಇಂದ್ರಾಣಿ ನದಿ ಈ ದುಃಸ್ಥಿತಿಗೆ ತಲುಪಿದೆ. ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಬೇಕಾದರೆ ಮೂಲಸೌಕರ್ಯಗಳನ್ನು ಮಾಡುವುದು ಅತೀ ಅಗತ್ಯವಾಗಿದೆ.

ಪರಿಶೀಲಿಸಿ ಕ್ರಮ
ಇಂದ್ರಾಣಿ ನದಿಗೆ ತ್ಯಾಜ್ಯ ನೀರು ಸೇರುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದನ್ನು ತಡೆಯುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಒಳಚರಂಡಿ ವ್ಯವಸ್ಥೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡು ನದಿ ನೀರು ಮಾಲಿನ್ಯ ತಡೆಗೆ ಕ್ರಮ ಜರಗಿಸಲಾಗುವುದು.
-ಆನಂದ ಕಲ್ಲೋಳಿಕರ್‌, ಪೌರಾಯುಕ್ತರು, ಉಡುಪಿ ನಗರಸಭೆ

-ಪುನೀತ್‌ ಸಾಲ್ಯಾನ್‌

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.