Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ


Team Udayavani, May 18, 2024, 7:45 AM IST

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

ಕಾರ್ಕಳ: ಕೃಷಿಯ ಮೇಲಿನ ಸೆಳೆತದಿಂದ ವಿದೇಶದ ಉದ್ಯೋಗವನ್ನು ತ್ಯಜಿಸಿ ಹುಟ್ಟೂರಿಗೆ ಮರಳಿದ ವ್ಯಕ್ತಿಯೊಬ್ಬರು ಮಾದರಿ ಕೃಷಿಯ ಮೂಲಕ ಸಾಧನೆ ಮಾಡಿದ್ದಾರೆ.

ಕಾರ್ಕಳದ ಸಾಣೂರಿನ ಆಂಥೋನಿ ಎಲಿಯಾ ಡಿ’ಸಿಲ್ವ ಪ್ರಾಥಮಿಕ ಶಿಕ್ಷಣವನ್ನು ಸಾಣೂರಿನಲ್ಲಿ, ಮುಂಬಯಿ ಯಲ್ಲಿ ಸಂಜೆ ಕಾಲೇಜು ಶಿಕ್ಷಣ ಮುಗಿಸಿ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ನಿಮಿತ್ತ ನೆಲೆಸಿದ್ದರು. ಆದರೆ ಕೃಷಿ ಪ್ರೀತಿ ಹುಟ್ಟೂರಿಗೆ ಮರಳುವಂತೆ ಮಾಡಿತು. 22 ವರುಷಗಳ ಹಿಂದೆ ಸಾಣೂರಿನಲ್ಲಿ ಮೂರೂವರೆ ಎಕರೆ ಬರಡು ಭೂಮಿ ಖರೀದಿಸಿ ವಿದೇಶದಲ್ಲಿ ಗಳಿಸಿದ ಹಣವನ್ನು ವ್ಯಯಿಸಿ ವಿವಿಧ ಬಗೆಯ ಹಣ್ಣುಗಳನ್ನು ಬೆಳೆದು ಪ್ರಸ್ತುತ ಯಶಸ್ವಿ ಕೃಷಿಕ ಎನಿಸಿದ್ದಾರೆ.

ನಳನಳಿಸುವ ಸಸ್ಯಗಳು
ಮೂರೂವರೆ ಎಕರೆ ಭೂಮಿ ಯಲ್ಲಿ 70ಕ್ಕೂ ಅಧಿಕ ವಿವಿಧ ತಳಿಯ ಹಣ್ಣಿನ ಗಿಡ ಗಳನ್ನು ಬೆಳೆಸಿ ದ್ದಾರೆ. ಮಾವು, ಹಲಸು, ಅನಾನಸ್‌, ಡ್ರಾಗನ್‌ ಫ‌ೂಟ್ಸ್‌, ಮ್ಯಾಂಗೋಸ್ಟೀನ್‌, ರಂಬೂಟನ್‌, ಪೇರಳೆ, ಚಿಕ್ಕು ಸಹಿತ ದೇಶ ವಿದೇಶದ ಹಣ್ಣಿನ ಗಿಡಗಳನ್ನು ಬೆಳೆದಿದ್ದಾರೆ. ನೀರು, ಗೊಬ್ಬರ ಎಲ್ಲವನ್ನು ವ್ಯವಸ್ಥಿತವಾಗಿ ಕೃಷಿಯಲ್ಲಿ ಜೋಡಿಸಿಕೊಂಡಿದ್ದಾರೆ.

ಸ್ವತಃ ಮಾರಾಟ
ಸಾವಯವ ಗೊಬ್ಬರ ಬಳಸುವುದರಿಂದ ಹಣ್ಣುಗಳು ಸತ್ವಭರಿತವಾಗಿದ್ದು, ಇವರು ಬೆಳೆದ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಿದೆ. ಮಂಗಳೂರಿನಲ್ಲಿ ಮನೆ ಹೊಂದಿರುವ ಅವರು ಹತ್ತಿರದಲ್ಲಿ ಒಂದು ಅಂಗಡಿಯನ್ನು ಖರೀದಿಸಿ ಸ್ವತಃ ಮಾರಾಟ ಮಾಡುತ್ತಾರೆ. ಹಳ್ಳಿಗರಿಗೆ ಸಾವಯವ ಹಣ್ಣು ಸಾಮಾನ್ಯವಾಗಿ ದೊರಕುತ್ತದೆ. ಆದರೆ ನಗರವಾಸಿಗಳು ವಿಷಯುಕ್ತ ಆಹಾರವನ್ನೇ ಸೇವಿಸುವ ಅನಿವಾರ್ಯ ಎದುರಾಗಿದ್ದು, ಅವರು ಕೂಡ ಸಾವಯವ ಹಣ್ಣು ಸವಿಯಬೇಕು ಎನ್ನುವುದು ನನ್ನ ಉದ್ದೇಶ ಎನ್ನುತ್ತಾರೆ ಅವರು. ಹಣ್ಣಿನ ತೋಟ ವೀಕ್ಷಣೆಗೆ ಬರುವವರು ಗಿಡ ಕೇಳುತ್ತಾರೆ ಅನ್ನುವ ಕಾರಣಕ್ಕೆ ಈ ವರ್ಷ ನರ್ಸರಿ ಕೂಡ ಆರಂಭಿಸುವ ಚಿಂತನೆ ಹೊಂದಿದ್ದಾರೆ.

ಶ್ರೇಷ್ಠ ಕೃಷಿಕ ಪ್ರಶಸ್ತಿ
ಆಂಥೋನಿ ಎಲಿಯಾ ಡಿ’ಸಿಲ್ವ ಅವರ ತೋಟಕ್ಕೆ ಹಲವಾರು ಕೃಷಿ ಆಸಕ್ತರು ಭೇಟಿ ನೀಡಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಹಲವು ಸಂಘ-ಸಂಸ್ಥೆಗಳು ಅವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ. ಕೃಷಿ ಇಲಾಖೆಯು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ.

ಕೃಷಿ ಎಂದರೆ ನನಗೆ ಎಲ್ಲಿಲ್ಲದ ಪ್ರೀತಿ. ಅದೇ ಆಸಕ್ತಿಯಿಂದ ಹಣ್ಣುಗಳನ್ನು ಬೆಳೆದಿದ್ದೇನೆ. ಈ ಸಲ ಮಳೆ ಇಲ್ಲದೆ ಹೂಬಿಡುವಲ್ಲಿ ತೊಂದರೆಯಾಗಿ ಸ್ವಲ್ಪ ಸಮಸ್ಯೆಯಾಗಿದೆ. ಆದರೇ ಧೃತಿಗೆಡುವಂಥದ್ದೇನಿಲ್ಲ. ಮುಂದಿನ ಬಾರಿಗೆ ಉತ್ತಮ ಇಳುವರಿ ನಿರೀಕ್ಷೆ ಇದೆ. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಇದ್ದಲ್ಲಿ ಶ್ರಮಪಟ್ಟು ದುಡಿದರೆ ಸೋಲು ಹತ್ತಿರ ಸುಳಿಯುವುದಿಲ್ಲ.
– ಆಂಥೋನಿ ಎಲಿಯಾ ಡಿ’ಸಿಲ್ವ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.