Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ


Team Udayavani, May 18, 2024, 7:45 AM IST

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

ಕಾರ್ಕಳ: ಕೃಷಿಯ ಮೇಲಿನ ಸೆಳೆತದಿಂದ ವಿದೇಶದ ಉದ್ಯೋಗವನ್ನು ತ್ಯಜಿಸಿ ಹುಟ್ಟೂರಿಗೆ ಮರಳಿದ ವ್ಯಕ್ತಿಯೊಬ್ಬರು ಮಾದರಿ ಕೃಷಿಯ ಮೂಲಕ ಸಾಧನೆ ಮಾಡಿದ್ದಾರೆ.

ಕಾರ್ಕಳದ ಸಾಣೂರಿನ ಆಂಥೋನಿ ಎಲಿಯಾ ಡಿ’ಸಿಲ್ವ ಪ್ರಾಥಮಿಕ ಶಿಕ್ಷಣವನ್ನು ಸಾಣೂರಿನಲ್ಲಿ, ಮುಂಬಯಿ ಯಲ್ಲಿ ಸಂಜೆ ಕಾಲೇಜು ಶಿಕ್ಷಣ ಮುಗಿಸಿ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ನಿಮಿತ್ತ ನೆಲೆಸಿದ್ದರು. ಆದರೆ ಕೃಷಿ ಪ್ರೀತಿ ಹುಟ್ಟೂರಿಗೆ ಮರಳುವಂತೆ ಮಾಡಿತು. 22 ವರುಷಗಳ ಹಿಂದೆ ಸಾಣೂರಿನಲ್ಲಿ ಮೂರೂವರೆ ಎಕರೆ ಬರಡು ಭೂಮಿ ಖರೀದಿಸಿ ವಿದೇಶದಲ್ಲಿ ಗಳಿಸಿದ ಹಣವನ್ನು ವ್ಯಯಿಸಿ ವಿವಿಧ ಬಗೆಯ ಹಣ್ಣುಗಳನ್ನು ಬೆಳೆದು ಪ್ರಸ್ತುತ ಯಶಸ್ವಿ ಕೃಷಿಕ ಎನಿಸಿದ್ದಾರೆ.

ನಳನಳಿಸುವ ಸಸ್ಯಗಳು
ಮೂರೂವರೆ ಎಕರೆ ಭೂಮಿ ಯಲ್ಲಿ 70ಕ್ಕೂ ಅಧಿಕ ವಿವಿಧ ತಳಿಯ ಹಣ್ಣಿನ ಗಿಡ ಗಳನ್ನು ಬೆಳೆಸಿ ದ್ದಾರೆ. ಮಾವು, ಹಲಸು, ಅನಾನಸ್‌, ಡ್ರಾಗನ್‌ ಫ‌ೂಟ್ಸ್‌, ಮ್ಯಾಂಗೋಸ್ಟೀನ್‌, ರಂಬೂಟನ್‌, ಪೇರಳೆ, ಚಿಕ್ಕು ಸಹಿತ ದೇಶ ವಿದೇಶದ ಹಣ್ಣಿನ ಗಿಡಗಳನ್ನು ಬೆಳೆದಿದ್ದಾರೆ. ನೀರು, ಗೊಬ್ಬರ ಎಲ್ಲವನ್ನು ವ್ಯವಸ್ಥಿತವಾಗಿ ಕೃಷಿಯಲ್ಲಿ ಜೋಡಿಸಿಕೊಂಡಿದ್ದಾರೆ.

ಸ್ವತಃ ಮಾರಾಟ
ಸಾವಯವ ಗೊಬ್ಬರ ಬಳಸುವುದರಿಂದ ಹಣ್ಣುಗಳು ಸತ್ವಭರಿತವಾಗಿದ್ದು, ಇವರು ಬೆಳೆದ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಿದೆ. ಮಂಗಳೂರಿನಲ್ಲಿ ಮನೆ ಹೊಂದಿರುವ ಅವರು ಹತ್ತಿರದಲ್ಲಿ ಒಂದು ಅಂಗಡಿಯನ್ನು ಖರೀದಿಸಿ ಸ್ವತಃ ಮಾರಾಟ ಮಾಡುತ್ತಾರೆ. ಹಳ್ಳಿಗರಿಗೆ ಸಾವಯವ ಹಣ್ಣು ಸಾಮಾನ್ಯವಾಗಿ ದೊರಕುತ್ತದೆ. ಆದರೆ ನಗರವಾಸಿಗಳು ವಿಷಯುಕ್ತ ಆಹಾರವನ್ನೇ ಸೇವಿಸುವ ಅನಿವಾರ್ಯ ಎದುರಾಗಿದ್ದು, ಅವರು ಕೂಡ ಸಾವಯವ ಹಣ್ಣು ಸವಿಯಬೇಕು ಎನ್ನುವುದು ನನ್ನ ಉದ್ದೇಶ ಎನ್ನುತ್ತಾರೆ ಅವರು. ಹಣ್ಣಿನ ತೋಟ ವೀಕ್ಷಣೆಗೆ ಬರುವವರು ಗಿಡ ಕೇಳುತ್ತಾರೆ ಅನ್ನುವ ಕಾರಣಕ್ಕೆ ಈ ವರ್ಷ ನರ್ಸರಿ ಕೂಡ ಆರಂಭಿಸುವ ಚಿಂತನೆ ಹೊಂದಿದ್ದಾರೆ.

ಶ್ರೇಷ್ಠ ಕೃಷಿಕ ಪ್ರಶಸ್ತಿ
ಆಂಥೋನಿ ಎಲಿಯಾ ಡಿ’ಸಿಲ್ವ ಅವರ ತೋಟಕ್ಕೆ ಹಲವಾರು ಕೃಷಿ ಆಸಕ್ತರು ಭೇಟಿ ನೀಡಿ ವಿಚಾರ ವಿನಿಮಯ ಮಾಡಿಕೊಳ್ಳುತ್ತಾರೆ. ಹಲವು ಸಂಘ-ಸಂಸ್ಥೆಗಳು ಅವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ. ಕೃಷಿ ಇಲಾಖೆಯು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ.

ಕೃಷಿ ಎಂದರೆ ನನಗೆ ಎಲ್ಲಿಲ್ಲದ ಪ್ರೀತಿ. ಅದೇ ಆಸಕ್ತಿಯಿಂದ ಹಣ್ಣುಗಳನ್ನು ಬೆಳೆದಿದ್ದೇನೆ. ಈ ಸಲ ಮಳೆ ಇಲ್ಲದೆ ಹೂಬಿಡುವಲ್ಲಿ ತೊಂದರೆಯಾಗಿ ಸ್ವಲ್ಪ ಸಮಸ್ಯೆಯಾಗಿದೆ. ಆದರೇ ಧೃತಿಗೆಡುವಂಥದ್ದೇನಿಲ್ಲ. ಮುಂದಿನ ಬಾರಿಗೆ ಉತ್ತಮ ಇಳುವರಿ ನಿರೀಕ್ಷೆ ಇದೆ. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಇದ್ದಲ್ಲಿ ಶ್ರಮಪಟ್ಟು ದುಡಿದರೆ ಸೋಲು ಹತ್ತಿರ ಸುಳಿಯುವುದಿಲ್ಲ.
– ಆಂಥೋನಿ ಎಲಿಯಾ ಡಿ’ಸಿಲ್ವ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.