ಆನ್‌ಲೈನ್‌ ಆ್ಯಪ್‌ ಮೂಲಕ ತುರ್ತು ಪರಿಸ್ಥಿತಿ ಎದುರಿಸಲು ನಗರಸಭೆ ಸಿದ್ಧ


Team Udayavani, Jun 23, 2019, 5:29 AM IST

nagara-sabhe

ಉಡುಪಿ: ಪ್ರಸ್ತುತ ಸಾಲಿನ ಮಳೆಗಾಲದ ತುರ್ತು ಪರಿಸ್ಥಿತಿಯನ್ನು ಎದುರಿಸಲು ನಗರಸಭೆ ಸನ್ನದ್ಧಗೊಂಡಿದೆ. ಇದೇ ಮೊದಲ ಬಾರಿಗೆ ಆನ್‌ಲೈನ್‌ ಆ್ಯಪ್‌ ಮೂಲಕ ಬರುವ ದೂರುಗಳನ್ನು ಶೀಘ್ರವಾಗಿ ಪರಿಹರಿಸಲು ಕಾರ್ಯಪಡೆ ಸಿದ್ಧವಾಗಿದೆ.

ಉಡುಪಿ ಹೆಲ್ಪ್ ಆ್ಯಪ್‌

ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ತುರ್ತು ಸ್ಪಂದನೆ ಗಾಗಿ ಉಡುಪಿ ಹೆಲ್ಪ್ ಆ್ಯಪ್‌ ರಚಿಸಲಾಗಿದೆ. 35 ವಾರ್ಡ್‌ಗಳ ಸಾರ್ವಜನಿಕರು ಆ್ಯಪ್‌ನ ಮೂಲಕ ಮಲೇರಿಯಾ, ಮರ ಬಿದ್ದು ರಸ್ತೆ ಹಾನಿ, ವಿದ್ಯುತ್‌ ಕಂಬ ಬಿದ್ದು ಮನೆ ಹಾಗೂ ರಸ್ತೆ ಹಾನಿ, ನೆರೆ ಪೀಡಿತ ಪ್ರದೇಶ, ಸಿಡಿಲು ಬಡಿದು ಮನೆ ಹಾಗೂ ಪ್ರಾಣ ಹಾನಿ, ಚರಂಡಿ ನೀರು ಹರಿಯುವುದು, ಭೂ ಕುಸಿತ, ಕಟ್ಟಡ ಕುಸಿತ ಸೇರಿದಂತೆ ಇತರೆ ದೂರಗಳನ್ನು ಈ ಆ್ಯಪ್‌ನಲ್ಲಿ ದಾಖಲಿಸಬಹುದು.

ವಾರ್ಡ್‌ವಾರು ಟಾಸ್ಕ್ಫೋರ್ಸ್‌

ಮಳೆ ತಂದೊಡ್ಡಬಹುದಾದ ಎಲ್ಲ ಸಮಸ್ಯೆ ಎದುರಿಸಲು ಪ್ರತಿ ವಾರ್ಡ್‌ನಲ್ಲಿಯೂ ತುರ್ತು ಕಾರ್ಯಪಡೆ ರಚಿಸಲಾಗಿದೆ. ನಗರಸಭೆಯನ್ನು 3 ವಿಭಾಗಗಳನ್ನಾಗಿ ವಿಂಗಡಿಸಿ ಕಮೀಷನರ್‌, ಎಂಜಿನಿಯರ್‌ಗಳಿಗೆ ಜವಾಬ್ದಾರಿ ನೀಡಲಾಗಿದೆ.

ರಾ.ಹೆ. 169ಎ ಕಾಮಗಾರಿ ಸಮಸ್ಯೆ

ರಾ.ಹೆ. 169ಎ ಮಲ್ಪೆ -ಕಡಿಯಾಳಿಯಲ್ಲಿ ಕಾಮಗಾರಿ ಅಪೂರ್ಣಗೊಂಡಿದೆ. ಕೆಲವೊಂದು ಪ್ರದೇಶದಲ್ಲಿ ಒಳಚರಂಡಿ ನಿರ್ಮಾಣವಾಗದ ಹಿನ್ನೆಲೆಯಲ್ಲಿ ರಾ.ಹೆ. ಸಮೀಪದ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗುವ ಸಾಧ್ಯತೆಯಿದೆ.

ಮುಂಗಾರು ಮಳೆಯ ಅವಧಿಯಲ್ಲಿ ನೆರೆ, ಮನೆಗಳಿಗೆ ಹಾನಿ ಮೊದಲಾದ ಪ್ರಾಕೃತಿಕ ವಿಕೋಪಗಳು ಸಂಭವಿಸಿದಂತಹ ಸನ್ನಿವೇಶದಲ್ಲಿ ಜನರು ಕಂಟ್ರೋಲ್ ರೂಮ್‌ ಅನ್ನು ಸಂಪರ್ಕಿಸಬೇಕು. ವಿಪತ್ತು ನಿರ್ವಹಣಾ ತಂಡವನ್ನೂ ರಚಿಸಲಾಗಿದೆ. ಉಡುಪಿ ನಗರದವರು ನಗರಸಭೆ ದೂರು ವಿಭಾಗಕ್ಕೆ (0820-2520306) ಸಂಪರ್ಕಿಸಬಹುದು ಅಥವಾ ಆ್ಯಪ್‌ನಲ್ಲಿ ದೂರು ನೀಡ ಬಹುದು.

ನೆರೆ ಪೀಡಿತ ಪ್ರದೇಶ

2018-19ನೇ ಸಾಲಿನಲ್ಲಿ ಉಡುಪಿ ನಗರದ ಬೈಲಕೆರೆ, ಬನ್ನಂಜೆ, ಮಠದ ಬೆಟ್ಟು, ಅಂಬಲಪಾಡಿ, ಕಲ್ಸಂಕ ಸೇರಿದಂತೆ ವಿವಿಧ ಕಡೆ ನೆರೆ ಸಮಸ್ಯೆ ಉಂಟಾಗಿತ್ತು.

ಮೆಸ್ಕಾಂಗೆ ಭಾರೀ ಪ್ರಮಾಣದಲ್ಲಿ ಹಾನಿ

ಕಳೆದ ಮಳೆಗಾಲದಲ್ಲಿ ಮಣಿಪಾಲದ ಈಶ್ವರನಗರ, ಮಂಚಿ, ಅಂಬಾಗಿಲು ಪೆರಂಪಳ್ಳಿ, ದೊಡ್ಡಣಗುಡ್ಡೆ ಮೊದಲಾದೆಡೆಗಳಲ್ಲಿ ರಸ್ತೆ ಬದಿ ಇದ್ದ ಬೃಹತ್‌ ಮರಗಳು ವಿದ್ಯುತ್‌ ತಂತಿ, ಕಂಬಗಳ ಮೇಲೆಯೇ ಮರ ಉರುಳಿದ್ದು ಭಾರೀ ಪ್ರಮಾಣದಲ್ಲಿ ಮೆಸ್ಕಾಂಗೆ ಹಾನಿಯಾಗಿತ್ತು.

ಉತ್ತಮ ಪ್ರತಿಕ್ರಿಯೆ

ಉಡುಪಿ ಹೆಲ್ಪ್ ಆ್ಯಪ್‌ ಬಿಡುಗಡೆಯಾದ ಒಂದೇ ವಾರದಲ್ಲಿ ನಗರ ವ್ಯಾಪ್ತಿಯಲ್ಲಿ ಸುಮಾರು 73 ದೂರುಗಳು ಬಂದಿವೆ. ಅಧಿಕಾರಿಗಳು ಎಲ್ಲ ದೂರುಗಳಿಗೆ ಸ್ಪಂದಿಸಿದ್ದು, 40 ನಿಮಿಷದಲ್ಲಿ ಸಮಸ್ಯೆ ಬಗೆಹರಿಸಿದ್ದಾರೆ. ಇದುವರೆಗೆ ಸುಮಾರು 469 ಮಂದಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.