ಭತ್ತ ಬೆಂಬಲ ಬೆಲೆ ಘೋಷಣೆ ಅಕ್ಟೋಬರ್‌ನಲ್ಲೇ ಆಗಲಿ

ಕರಾವಳಿ ರೈತರ ಮೊರೆ ಮುಖ್ಯಮಂತ್ರಿಯವರಿಗೆ ಕೇಳಲಿ

Team Udayavani, Oct 13, 2021, 6:40 AM IST

ಭತ್ತ ಬೆಂಬಲ ಬೆಲೆ ಘೋಷಣೆ ಅಕ್ಟೋಬರ್‌ನಲ್ಲೇ ಆಗಲಿ

ಉಡುಪಿ: ಈ ಬಾರಿ ಭತ್ತದ ಬೇಸಾಯ ಗುರಿ ಮೀರಿ ನಡೆದಿದೆ. ಕಟಾವು ಸಮೀಪಿಸಿದ್ದು, ಕೆಲವೆಡೆ ಆರಂಭ ಆಗಿದೆ. ಆದರೆ ಸರಕಾರದಿಂದ ಬೆಂಬಲ ಬೆಲೆ ಘೋಷಣೆ ನವೆಂಬರ್‌-ಡಿಸೆಂಬರ್‌ ವೇಳೆ ಆಗುವುದೇ ಸಮಸ್ಯೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ
ಯಲ್ಲಿದ್ದು, ಶೀಘ್ರ ಕನಿಷ್ಠ ಬೆಂಬಲ ಬೆಲೆ ಘೋಷಿಸುವ ನಿರ್ಣಯ ತಳೆಯಬೇಕಿದೆ.

ಪ್ರತೀ ಬಾರಿ ಸರಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುವ ವೇಳೆಗೆ ಕರಾವಳಿಯಲ್ಲಿ ರೈತರು ಕಟಾವು ಮಾಡಿದ ಭತ್ತವನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಆಗಿರುತ್ತದೆ.

ಪ್ರತೀ ಬಾರಿ ರೈತ ಸಂಘಟನೆಗಳು ಕರಾವಳಿಗೆ ಪ್ರತ್ಯೇಕವಾಗಿ ಯಾದರೂ ಕನಿಷ್ಠ ಬೆಂಬಲ ಬೆಲೆಯನ್ನು ಅಕ್ಟೋಬರ್‌ನಲ್ಲಿಯೇ ಘೋಷಿಸಬೇಕು ಎಂದು ಮುಖ್ಯಮಂತ್ರಿ, ಕೃಷಿ ಸಚಿವರು, ಜಿಲ್ಲಾಧಿಕಾರಿಗಳಿಗೆ ಮನವಿ ನೀಡುವುದು ಮತ್ತು ಆ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟ ವಾಗುವುದಕ್ಕಷ್ಟೇ ಸೀಮಿತವಾಗುತ್ತಿವೆ. ಈ ಬಾರಿಯೂ ಹೀಗಾಗಬೇಕೆ?ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ. 13ರಂದು ಉಡುಪಿ ಜಿಲ್ಲೆಗೆ ಆಗಮಿಸುತ್ತಿರುವ ಹೊತ್ತಿನಲ್ಲಿ ರೈತರು ಈ ಪ್ರಶ್ನೆ ಎತ್ತಿದ್ದಾರೆ.

ಕೃಷಿ ಸಚಿವರ ಸಮ್ಮತಿ
ಕೇಂದ್ರ ಸರಕಾರ ಮೊದಲು ಬೆಂಬಲ ಬೆಲೆಯನ್ನು ಘೋಷಿಸುತ್ತದೆ. ಬಳಿಕ ರಾಜ್ಯ ಸರಕಾರ ಅದಕ್ಕೆ ಒಂದಿಷ್ಟು ಮೊತ್ತವನ್ನು ಸೇರಿಸಿ ಘೋಷಿಸುತ್ತದೆ. ಕೇಂದ್ರ ಸರಕಾರ ಜೂ. 10ರಂದು ಭತ್ತಕ್ಕೆ ಕ್ವಿಂಟಾಲ್‌ಗೆ 1,940 ರೂ. ಬೆಂಬಲ ಬೆಲೆ ಘೋಷಿಸಿದೆ. ಕೊರೊನಾ ಮೊದಲ ಅಲೆ ಮುಗಿದ ಬಳಿಕ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಕರಾವಳಿಯ ರೈತ ಸಂಘಟನೆಗಳು ಬೆಂಬಲ ಬೆಲೆಯನ್ನು ಶೀಘ್ರ ಘೋಷಿಸಬೇಕು ಎಂದು ಮನವಿ ಮಾಡಿದ್ದವು. ಸಚಿವರು ಸಮ್ಮತಿಸಿದ್ದರು. ಆದರೆ ಈಗ ಕಟಾವು ಕೆಲವೆಡೆ ಆರಂಭವಾಗಿದ್ದು, ಕ್ವಿಂಟಾಲ್‌ ಭತ್ತಕ್ಕೆ 1,400 ರೂ.ಗಳಂತೆ ಮಾರಾಟವಾಗುತ್ತಿದೆ. ಮಳೆಯೂ ಬಂದಿರುವ ಕಾರಣ ಖರೀದಿದಾರರು ತೇವಾಂಶ ತೇಮಾನು ಶೇ. 5ರಿಂದ ಶೇ. 10ರಷ್ಟು ಕಡಿತಗೊಳಿಸುತ್ತಾರೆ. ಮಂಗಳವಾರ ಇನ್ನಷ್ಟು ಮಳೆ ಸುರಿದಿದ್ದು, ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇರುವುದರಿಂದ ನಷ್ಟ ಮತ್ತಷ್ಟು ಹೆಚ್ಚಲಿದೆ.

ನಡೆದಿದೆ ಜಿಲ್ಲಾಮಟ್ಟದ ಸಭೆ
ಜಿಲ್ಲಾಡಳಿತವು ಬೆಂಬಲ ಬೆಲೆಯನ್ನು ಕೊಡಿಸುವಲ್ಲಿ ಹಿಂದಿಗಿಂತ ಒಂದಿಷ್ಟು ಹೆಚ್ಚು ಉತ್ಸಾಹವನ್ನು ತೋರಿಸಿದೆ. ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿರುವ ಬೆಂಬಲ ಬೆಲೆ ಯೋಜನೆ ಸಮಿತಿ ಒಂದು ಸಭೆ ನಡೆಸಿದೆ. ಇನ್ನು ಒಂದೆರಡು ದಿನಗಳಲ್ಲಿ ಸಮಿತಿಯ ನಿರ್ಣಯವನ್ನು ಸರಕಾರಕ್ಕೆ ಸಲ್ಲಿಸುವ ಪ್ರಸ್ತಾವವಿದೆ. ಮುಖ್ಯಮಂತ್ರಿಗಳು ಉಡುಪಿಗೆ ಆಗಮಿಸುವ ವೇಳೆ ಭತ್ತ ಖರೀದಿ ಕೇಂದ್ರಗಳ ಸ್ಥಾಪನೆ, ಬೆಂಬಲ ಬೆಲೆ ಘೋಷಣೆ ಬಗ್ಗೆ ಶೀಘ್ರ ನಿರ್ಣಯ ತಳೆಯಬೇಕಾಗಿದೆ.ಇಲ್ಲವಾದರೆ ಈ ಹಿಂದಿನಂತೆ ಜಿಡ್ಡುಗಟ್ಟಿದ ಸರಕಾರಿ ಕನಿಷ್ಠ ಬೆಂಬಲ ಬೆಲೆ ಆದೇಶ ತನ್ನ ಮಾಮೂಲಿ ನಡಿಗೆಯಲ್ಲಿ ನವೆಂಬರ್‌- ಡಿಸೆಂಬರ್‌ನಲ್ಲಿ ಹೊರಬೀಳಬಹುದು. ಆ ಹೊತ್ತಿಗೆ ಹೈರಾಣಾದ ರೈತ ಆರ್ಥಿಕ ಹೊರೆ ತಾಳಲಾರದೆ ಕನಿಷ್ಠ ಬೆಲೆಗೆ ಬೆಳೆಯನ್ನು ಮಾರಿಯಾಗಿರುತ್ತದೆ.

ಇದನ್ನೂ ಓದಿ:ಮಿಥಾಲಿ ರಾಜ್‌ ಶತಕದ ದಾಖಲೆ ಮುರಿದ ಆ್ಯಮಿ ಹಂಟರ್‌

ಈ ಬಾರಿ ಬೇಗನೆ ಬೆಂಬಲ
ಬೆಲೆ ಘೋಷಿಸಬೇಕು ಎಂದು ಕೃಷಿ ಸಚಿವರಿಗೆ ಮನವಿ ಮಾಡಿದ್ದೆವು. ಇತ್ತೀಚೆಗೆ “ನೀವು ಬೆಂಬಲ ಬೆಲೆಯನ್ನು ಘೋಷಿಸಲಾಗುವುದು ಎಂದಾದರೂ ಪ್ರಕಟನೆ ನೀಡಿ. ಇದರಿಂದ ಕಡಿಮೆ ದರಕ್ಕೆ ಮಾರಾಟ ಮಾಡುವ ರೈತರು ಸ್ವಲ್ಪ ದಿನ ಕಾಯಬಹುದು’ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒ ಅವರಲ್ಲೂ ಮನವಿ ಮಾಡಿದ್ದೆವು. .
– ನವೀನ್‌ಚಂದ್ರ ಜೈನ್‌,
-ಜಪ್ತಿ ಸತ್ಯನಾರಾಯಣ ಉಡುಪ
ಅಧ್ಯಕ್ಷರು ಮತ್ತು ಪ್ರ. ಕಾರ್ಯದರ್ಶಿಗಳು, ಭಾರತೀಯ ಕಿಸಾನ್‌ ಸಂಘ, ಉಡುಪಿ ಜಿಲ್ಲೆ

ಭತ್ತಕ್ಕೆ ಬೆಂಬಲ ಬೆಲೆ ನೀಡುವ ಕುರಿತು ಈಗಾಗಲೇ ಒಂದು ಸುತ್ತಿನ ಸಭೆ ನಡೆದಿದೆ. ಇನ್ನು ಒಂದೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಬೆಲೆಯನ್ನು ಸರಕಾರ ಘೋಷಿಸಬೇಕಾಗಿದೆ.
– ಡಾ| ಕೆಂಪೇಗೌಡ, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಮತ್ತು ಬೆಂಬಲ ಬೆಲೆ ಯೋಜನೆ ಸಮಿತಿಯ ಸದಸ್ಯರು, ಉಡುಪಿ.

- ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.