“ಜವಾಬ್ದಾರ ಗ್ರಾಹಕರಿಂದ ಸಮಸ್ಯೆ ರಹಿತ ಸಮಾಜ’
Team Udayavani, Mar 16, 2017, 4:07 PM IST
ಉಡುಪಿ: ವಸ್ತುಗಳನ್ನು ಖರೀದಿಸುವಾಗ ಜವಾಬ್ದಾರಿಯುತವಾಗಿದ್ದ ಗ್ರಾಹಕರಿಂದ ಸಮಸ್ಯೆ ರಹಿತ ಸಮಾಜವನ್ನು ಸೃಷ್ಟಿಸಲು ಸಾಧ್ಯವೆಂದು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶರಾದ ಲತಾ ಹೇಳಿದರು.
ಅವರು ವಿಶ್ವ ಗ್ರಾಹಕರ ದಿನಾಚರಣೆಯ ಅಂಗವಾಗಿ ಮಾ. 15ರಂದು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ “ಡಿಜಿಟಲ್ ಯುಗದಲ್ಲಿ ಗ್ರಾಹಕರ ಹಕ್ಕುಗಳು’ ಕುರಿತಾಗಿ ಜರಗಿದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಸ್ತುಗಳ ಖರೀದಿಯ ಮುನ್ನ ಗುಣಮಟ್ಟ, ಬೆಲೆ, ಮಾರಾಟದ ಅನಂತರ ಸೇವೆಗಳ ಬಗ್ಗೆಯೂ ಗ್ರಾಹಕ ಅತ್ಯಂತ ಜಾಗರೂಕನಾಗಿ ಅರಿತಿರಬೇಕು ಎಂದು ಸಲಹೆ ನೀಡಿದ ಅವರು ಡಿಜಿಟಲ್ ಯುಗದಲ್ಲಿ ಮಧ್ಯರಾತ್ರಿಯೂ ವಸ್ತುಗಳನ್ನು ಖರೀದಿಸುವ ದಿನಗಳು ಬಂದಿದ್ದು ಗ್ರಾಹಕನು ಮತ್ತಷ್ಟು ಎಚ್ಚರವಾಗಿರಬೇಕಾಗಿದೆ ಎಂದು ಅವರು ಹೇಳಿದರು.
ಅಧುನಿಕ ಯುಗದಲ್ಲಿ ಉತ್ಪಾದಕ ಮತ್ತು ಗ್ರಾಹಕರ ನಡುವಿನ ಅಂತರ ಹೆಚ್ಚಾಗುತ್ತಿದೆ. ವಸ್ತುಗಳ ಸುರಕ್ಷತೆಯ ಬಗ್ಗೆಯೂ ಗೊಂದಲಗಳು ಮೂಡುತ್ತಿವೆ. ಈ ನಿಟ್ಟಿನಲ್ಲಿ ಗ್ರಾಹಕರೂ ಪ್ರಥಮ ಖರೀದಿ ಅನಂತರ ಚಿಂತನೆ ನಡೆಸುವ ಬದಲು, ಮೊದಲು ಚಿಂತನೆ ಅನಂತರ ಖರೀದಿ ಮಾಡಬೇಕೆಂದು ಜಿಲ್ಲಾ ಗ್ರಾಹಕರ ವೇದಿಕೆಯ ಅಧ್ಯಕ್ಷರೂ, ನ್ಯಾಯಾಧೀಶರೂ ಆದ ಶೋಭಾ ಸಿ.ವಿ. ಹೇಳಿದರು.
ಕಾನೂನು ಮಾಪನಾ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಎಂ.ಎನ್. ಹಿಪ್ಪರಗಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ರಾಹಕರ ವೇದಿಕೆಯ ರವಿಶಂಕರ್, ಉಡುಪಿ ಜಿಲ್ಲಾ ಮಾಹಿತಿ ಕೇಂದ್ರ ಹಾಗೂ ಬಳಕೆದಾರರ ವೇದಿಕೆಯ ಸಂಚಾಲಕರಾದ ದಾಮೋದರ ಐತಾಳ್, ಎ.ಪಿ. ಕೊಡಂಚ, ಸತ್ಯನಾರಾಯಣ ಉಡುಪ, ಪ್ರವೀಣ್ ನಾಯಕ್, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಎಸ್. ಯೋಗೇಶ್ವರ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ
Udupi: ಎಸ್ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ
Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.