Udupi: ಬಾಂಗ್ಲಾದಿಂದ ಭಾರತಕ್ಕೆ ವಲಸೆಯ ಉದ್ದೇಶ?


Team Udayavani, Oct 14, 2024, 7:20 AM IST

\172.17.1.5ImageDirUdayavaniDaily13-10-24Daily_NewsBangla.tif

ಉಡುಪಿ: ಮಲ್ಪೆಯಲ್ಲಿ ಸುಮಾರು 5 ವರ್ಷಗಳಿಂದಲೂ ವಾಸ ಮಾಡಿಕೊಂಡಿದ್ದ ಬಾಂಗ್ಲಾದೇಶದ ವಲಸಿಗರನ್ನು ಬಂಧಿಸಲ್ಪಟ್ಟಿದ್ದು, ಮತ್ತಷ್ಟು ಮಂದಿ ಇರುವ ಸಾಧ್ಯತೆಗಳ ಬಗ್ಗೆಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಭಾರತಕ್ಕೆ ಬರುವ ಅವರ ಉದ್ದೇಶದ ಕಥೆಯೂ ಅಷ್ಟೇ ಭಯಾನಕವಾಗಿದೆ.

ಸಣ್ಣ ವಯೋಮಾನದಲ್ಲಿ ಊರು ಬಿಡುವ ಕೆಲವು ಮಂದಿಯ ತಂಡಕ್ಕೆ ಏಜೆಂಟರೇ ಆಸರೆ. ನಕಲಿ ಪಾರ್ಸ್‌ ಪೋರ್ಟ್‌, ಆಧಾರ್‌ ಕಾರ್ಡ್‌ ಹೀಗೆ ಎಲ್ಲ ದಾಖಲೆಗಳನ್ನು ನೀಡಿ ಅವರಿಂದ ನಿರ್ದಿಷ್ಟ ಮೊತ್ತ ಪಡೆದು ಭಾರತಕ್ಕೆ ಕರೆಸಲಾಗುತ್ತದೆ. ಸೂಕ್ತ ವಿದ್ಯಾ ಭ್ಯಾಸವೂ ಅವರಿಗೆ ಇರದು. ಹಿಂದಿ ಭಾಷೆಯೊಂದೇ ಅವರಿಗೆ ಆಸರೆ.

ಭಾರತಕ್ಕೆ ಆಗಮಿಸಿ ವಿಂಗಡನೆ
ಮುಖ್ಯವಾಗಿ ಗಡಿಭಾಗದಿಂದ, ಜಲಮಾರ್ಗದ ಮೂಲಕ ಸುಲಭದಲ್ಲಿ ಬಾಂಗ್ಲಾದೇಶದಿಂದ ಭಾರತಕ್ಕೆ ಆಗಮಿಸುವ ಇವರು, ಬಳಿಕ ವಿವಿಧ ರಾಜ್ಯಗಳಿಗೆ ತೆರಳಿ ಸಣ್ಣಪುಟ್ಟ ನೌಕರಿ ಹುಡುಕಿಕೊಳ್ಳುತ್ತಾರೆ. ಒಂದೆರಡು ವರ್ಷ ಕೆಲಸ ಮಾಡಿ ಸ್ಥಳೀಯರ ವಿಶ್ವಾಸ ಗಿಟ್ಟಿಸಿಕೊಳ್ಳುವ ಅವರು, ಹಂತಹಂತವಾಗಿ ಹೆಚ್ಚಿನ ವೇತನದೊಂದಿಗೆ ಇತರ ಉದ್ಯೋಗ ವನ್ನೂ ಕಲಿಯ ತೊಡಗುತ್ತಾರೆ. ಬಳಿಕ ಭಾರತೀಯ ಪ್ರಜೆಗಳಂತೆಯೇ ಬಿಂಬಿಸಿಕೊಳ್ಳುತ್ತಾರೆ. ಚುನಾವಣೆ ಸಂದರ್ಭದಲ್ಲಿ ನಕಲಿ ವೋಟರ್‌ ಐಡಿಗಳನ್ನು ತಮ್ಮ ಏಜೆಂಟರಿಂದ ಮಾಡಿಸಿಕೊಳ್ಳುವ ಪ್ರಯತ್ನವೂ ನಡೆಯುತ್ತದೆ ಎನ್ನಲಾಗಿದೆ.

ಮೊದಲ ಹಂತದಲ್ಲಿ ಅವರಿಗೆ ವೇತನಕ್ಕಿಂತಲೂ ಇಲ್ಲಿ ಭದ್ರ ನೆಲೆಯೂರಲು ಅವಕಾಶ ಬೇಕಷ್ಟೇ. ಅನಂತರ ಅವರ ಗುರಿ ಪ್ರತಿಷ್ಠಿತ ರಾಷ್ಟ್ರಗಳು. ಈ ಮಧ್ಯೆ ಅಲ್ಲಿಗೆ ತೆರಳಲು ಬೇಕಾದ ಎಲ್ಲ ದಾಖಲೆಗಳನ್ನು ತಾವಿರುವ ವಿಳಾಸದಡಿ ಸೃಷ್ಟಿಸಿಕೊಳ್ಳುವ ಪ್ರಕ್ರಿಯೆಯೂ ಚಾಲ್ತಿಯಲ್ಲಿರುತ್ತದೆ.

ಸಕ್ರಿಯ ನಕಲಿ ತಯಾರಿ ಜಾಲ
ನಕಲಿ ಪಾಸ್‌ಪೋರ್ಟ್‌, ಅಂಕಪಟ್ಟಿ, ಆಧಾರ್‌ಕಾರ್ಡ್‌ ಹೀಗೆ ವಿವಿಧ ರೀತಿಯ ದಾಖಲೆಗಳನ್ನು ತಯಾರಿಸಿ ಕೊಡುವ ಜಾಲವೂ ಜಿಲ್ಲೆಯಲ್ಲಿ ಸಕ್ರಿಯವಾಗಿದೆ ಎಂಬ ಬಗ್ಗೆ ಸಂಶಯವನ್ನು ಈ ಪ್ರಕ ರಣ ಬಿತ್ತಿದೆ. ಮಂಗಳೂರಿನಲ್ಲಿ ಸಿಕ್ಕ ಓರ್ವ ಆರೋಪಿ ಈ ಬಗ್ಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದ್ದು, ಈ ಬಗ್ಗೆ ಪೊಲೀಸರ ವಿಚಾರಣೆಯಿಂದ ಮಾಹಿತಿ ಸಿಗಬೇಕಿದೆ.

ಜಿಲ್ಲೆಯಲ್ಲಿ ಇದುವರೆಗೆ ಇಂತಹ ಪ್ರಕರಣಗಳು ನಡೆದಿದೆಯೇ ಎಂಬ ಬಗ್ಗೆ ಪರಿಶೀಲಿಸಿ ಈ ಪ್ರಕರಣಕ್ಕೂ ಆ ಪ್ರಕರಣಗಳಿಗೂ ಸಾಮತ್ಯೆ ಇದೆಯೇ ಎಂಬ ನಿಟ್ಟಿನಲ್ಲೂ ತನಿಖೆ ಮುಂದು ವರಿಯುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ದುಬಾೖಗೆ ಹೋಗಲು ಯತ್ನ
ದುಬಾೖಯಲ್ಲಿ ಭಾರತೀಯರು ಎಂದರೆ ಸ್ವಲ್ಪ ಗೌರವ ಹೆಚ್ಚು. ಬಾಂಗ್ಲಾ ದೇಶದವರು ಎಂದರೆ ಅಷ್ಟಕಷ್ಟೇ. ಹೀಗೆ ಅಲ್ಲಿ ಹೆಚ್ಚಿನ ವೇತನಕ್ಕೆಂದು ತೆರಳು ತ್ತಾರೆ. ಒಂದು ವೇಳೆ ಅಲ್ಲಿ ಸಿಕ್ಕಿಹಾಕಿಕೊಂಡಲ್ಲಿ ಕಳಂಕ ಮಾತ್ರ ಭಾರತಕ್ಕೆ. ಕೆಲವು ಪ್ರಕರಣಗಳಲ್ಲಿ ಆರೋಪಿಗಳ ಮೂಲ ಸ್ಥಳೀಯ ಪ್ರಾಂತ್ಯದ್ದಾಗಿರುತ್ತದೆ. ಆದರೆ ಅಲ್ಲಿನ ಸ್ಥಳೀಯರಿಗೆ ಆತ ಯಾರೆಂಬುದೇ ತಿಳಿದಿರದು. ಜಿಲ್ಲೆಯಲ್ಲೂ ಈ ಹಿಂದೆ ಇಂತಹ ಕೆಲವು ಪ್ರಕರಣಗಳು ನಡೆದಿವೆ. ಇದಕ್ಕೆ ನಕಲಿ ದಾಖಲೆಗಳು ಕಾರಣ. ಬಂಧಿತರೂ ಇದೇ ಉದ್ದೇಶದಿಂದ ದುಬಾೖಗೆ ತೆರಳಲು ಉದ್ದೇಶಿಸಿದ್ದರು ಎಂಬ ಅಂಶ ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ.

ಇಂದು ಪೊಲೀಸ್‌ ಕಸ್ಟಡಿಗೆ
ಆರೋಪಿಗಳನ್ನು ಈಗಾಗಲೇ ನ್ಯಾಯಾಂಗಬಂಧನಕ್ಕೆ ಒಳಪಡಿಸಿದ್ದು, ಸೋಮವಾರ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳುವರು. ಆರೋಪಿ ಗಳು ಆಧಾರ್‌ಕಾರ್ಡ್‌ಗಳನ್ನು ಫೋರ್ಜರಿ ಮಾಡಿದ್ದಾರೆಯೇ ಅಥವಾ ನಕಲಿ ಕಾರ್ಡ್‌ ಸೃಷ್ಟಿ ಆಗಿದೆಯೇ ಎಂಬ ಬಗ್ಗೆ ವಿಚಾರಣೆಯಿಂದ ತಿಳಿದುಬರಬೇಕಿದೆ.
-ಡಾ| ಕೆ.ಅರುಣ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

wages

Udupi: ಬಾಂಗ್ಲಾ ಅಕ್ರಮ ವಲಸೆ ಫಾಲೋ ಅಪ್: ನೆಪಕ್ಕಷ್ಟೇ ಬಿಹಾರ, ಒಡಿಶಾ, ಅಸ್ಸಾಂ…

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.