
ಪಲಿಮಾರು ಮಠದ ಉತ್ತರಾಧಿಕಾರಿ ನೇಮಕ ಪ್ರಕ್ರಿಯೆ
Team Udayavani, May 8, 2019, 6:15 AM IST

ಉಡುಪಿ: ಶ್ರೀ ಪಲಿಮಾರು ಮಠದ 31ನೇ ಪೀಠಾಧಿಪತಿಯಾಗಿ ನಿಯೋಜನೆಗೊಳ್ಳಲಿರುವ ಕೊಡವೂರು ಕಂಬಳಕಟ್ಟದ ಶೈಲೇಶ್ ಉಪಾಧ್ಯಾಯ ಅವರ ಸನ್ಯಾಸಾಶ್ರಮ ಸ್ವೀಕಾರದ ಪೂರ್ವಭಾವಿ ಪ್ರಕ್ರಿಯೆಗಳು ಅಕ್ಷಯ ತೃತೀಯಾದಂದು ಆರಂಭಗೊಂಡಿವೆ.
ಶ್ರೀಕೃಷ್ಣನ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನು ಪರ್ಯಾಯ ಶ್ರೀ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಶೈಲೇಶರ ಉಪಸ್ಥಿತಿಯಲ್ಲಿ ನಡೆಸಿದರು. ಇದಕ್ಕೂ ಮುನ್ನ ಶೈಲೇಶರು ಹಿರಿಯ ವಿದ್ವಾಂಸ
ಡಾ| ಬನ್ನಂಜೆ ಗೋವಿಂದಾಚಾರ್ಯ ಅವರನ್ನು ಅಂಬಲಪಾಡಿಯ ನಿವಾಸದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.
ಏಳು ಶತಮಾನಗಳ ಹಿಂದೆ ಆಚಾರ್ಯ ಮಧ್ವರ ಶಾಸ್ತ್ರ ವಿಚಾರಗಳನ್ನು ಲಿಪಿಬದ್ಧಗೊಳಿಸಿದ ಪಲಿಮಾರು ಮಠದ ಮೂಲ ಯತಿ ಶ್ರೀ ಹೃಷಿಕೇಶತೀರ್ಥರ “ಸರ್ವಮೂಲಗ್ರಂಥ’ವನ್ನು ಅಧ್ಯಯನ, ಸಂಶೋಧನೆಯನ್ನು ನಡೆಸಿದ ಗೋವಿಂದಾಚಾರ್ಯರು ಶೈಲೇಶರಿಂದ ಶುದ್ಧ ತಣ್ತೀಜ್ಞಾನ ಪ್ರಸಾರದ ಕೆಲಸ ನಡೆಯುವಂತಾಗಲಿ ಎಂದು ಭಾವಪೂರ್ಣವಾಗಿ ಹಾರೈಸಿದರು.
ಶ್ರೀಕೃಷ್ಣ ಮಠದಲ್ಲಿ ಮೇ 9ರಂದು ಪ್ರಾಯಶ್ಚಿತ್ತಾದಿ ಹೋಮಗಳು, ವಿರಜಾ ಹೋಮ, ಆತ್ಮಶ್ರಾದ್ಧ, ಮೇ 10ರಂದು ಸನ್ಯಾಸಾಶ್ರಮ ಸ್ವೀಕಾರ, ಪ್ರಣವ ಮಂತ್ರೋಪದೇಶ, ಮೇ 11ರಂದು ವಿವಿಧ ಮಂತ್ರಗಳ ಉಪದೇಶ, ಮೇ 12ರಂದು ಪೀಠಾಧಿಪತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮಗಳು ನಡೆಯಲಿವೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.