Thekkatte: ಕುಸಿತದ ಭೀತಿಯಲ್ಲಿದೆ ಕನ್ನುಕೆರೆ ತಡೆಗೋಡೆ
ಕಾಮಗಾರಿ ಮುಗಿದು ನಾಲ್ಕೇ ತಿಂಗಳು: ಘಟನ ಸ್ಥಳಕ್ಕೆ ಶಾಸಕ ಕೊಡ್ಗಿ ಭೇಟಿ
Team Udayavani, Oct 1, 2024, 2:25 PM IST
ತೆಕ್ಕಟ್ಟೆ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಜಲಮೂಲದಲ್ಲಿ ಒಂದಾಗಿರುವ ಸುಮಾರು 1.07 ಎಕ್ರೆ ವಿಸ್ತೀರ್ಣದ ಕನ್ನುಕರೆಯ ಸುತ್ತ ಸುಮಾರು 80 ಮೀಟರ್ ವಿಸ್ತೀರ್ಣದಲ್ಲಿ ಕಾಂಕ್ರೀಟ್ ತಡೆಗೋಡೆ ನಿರ್ಮಾಣವಾಗಿದ್ದು, ಕಾಮಗಾರಿ ಪೂರ್ಣಗೊಂಡು ನಾಲ್ಕು ತಿಂಗಳಿನಲ್ಲೇ ಕಾಂಕ್ರೀಟ್ ತಡೆಗೋಡೆಯು ಕುಸಿಯುಲು ಆರಂಭವಾಗಿದ್ದು, ಅಪಾಯಕಾರಿಯಾಗಿದೆ.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಸುಮಾರು 1 ಕೋಟಿ ರೂ. ಅನುದಾನ ಬಿಡುಗಡೆಯಾಗಿ ಕಾಮಗಾರಿ ನಡೆಸಲಾಗಿತ್ತು.
ಶಾಸಕ ಕೊಡ್ಗಿ ಭೇಟಿ
ತಡೆಗೋಡೆ ಅಪಾಯದ ಸ್ಥಿತಿಯಲ್ಲಿರುವ ಬಗ್ಗೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಸೆ. 30ರಂದು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅನಂತರ ಉದಯವಾಣಿಯ ಜತೆ ಮಾತನಾಡಿ, ಕಾಂಕ್ರೀಟ್ ತಡೆಗೋಡೆಗಳು ಸಂಪೂರ್ಣ ಕುಸಿತಗೊಂಡಿರುವುದರಿಂದ ಅದನ್ನು ತೆಗೆದು ಹೊಸದಾಗಿ ಕಾಮಗಾರಿ ಮಾಡಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್ ಗಮನಕ್ಕೆ ತಂದಿದ್ದೇನೆ. ಈಗಾಗಲೇ ಕುಸಿತಗೊಂಡಿರುವ ಕೆರೆಯ ದಡದಲ್ಲಿಯೇ ನಾಗಬನ ಹಾಗೂ ಜನವಸತಿ ಪ್ರದೇಶಗಳಿರುವುದರಿಂದ ಮುಂಜಾಗ್ರತ ಕ್ರಮವಾಗಿ ತತ್ಕ್ಷಣವೇ ದಡದಲ್ಲಿ ಮಣ್ಣು ಹಾಕಿಸುವಂತೆ ತಿಳಿಸಿದ್ದೇನೆ ಎಂದು ಹೇಳಿದರು.
ತೆಕ್ಕಟ್ಟೆ ಗ್ರಾ.ಪಂ. ಪಿಡಿಒ ಸುನಿಲ್, ಗ್ರಾ.ಪಂ. ಸದಸ್ಯೆ ಪ್ರತಿಮಾ, ಕನ್ನುಕೆರೆ ಅಭಿವೃದ್ಧಿ ಸಮಿತಿಯ ಸದಸ್ಯ ರಾಘವೇಂದ್ರ ಪುರಾಣಿಕ್, ಗಣೇಶ್ ಗಾಣಿಗ ಕನ್ನುಕೆರೆ, ವಿಶ್ವ ಹಿಂದೂ ಪರಿಷತ್ ಕುಂದಾಪುರ ಇದರ ಉಪಾಧ್ಯಕ್ಷ ಶ್ರೀನಾಥ ಶೆಟ್ಟಿ ಮೇಲ್ತಾರುಮನೆ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಗುತ್ತಿಗೆದಾರ ಸುರೇಶ್ ಶೆಟ್ಟಿ, ದರ್ಶನ್ ದೇವಾಡಿಗ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಅಪಾಯದಲ್ಲಿ ಜನವಸತಿ ಪ್ರದೇಶಗಳು
ಕನ್ನುಕೆರೆಯ ತೀರದಲ್ಲಿಯೇ ಜನವಸತಿ ಪ್ರದೇಶವಿರುವುದರಿಂದ ತಡೆಗೋಡೆ ಸಂಪೂರ್ಣ ಕುಸಿದರೆ ಅವಘಡ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಕನ್ನುಕೆರೆ ಅಭಿವೃದ್ಧಿ ಸಮಿತಿಯ ಸದಸ್ಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು
Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ
Legislative Council Bye Election: ಕಿಶೋರ್ ಕುಮಾರ್ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್
Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.