![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 9, 2017, 1:40 PM IST
ಉಡುಪಿ: ಉಡುಪಿ ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಕಿರಿದಾದ ರಸ್ತೆಯಿಂದ ಸಂಚಾರ ಸಮಸ್ಯೆಯಾಗುತ್ತಿದ್ದು, ಅದಕ್ಕಾಗಿ ಕ್ಲಾಕ್ ಟವರ್, ಜಟಕಾ ಸ್ಟಾಂಡ್ ಹಾಗೂ ಸರ್ವಿಸ್ ಬಸ್ ನಿಲ್ದಾಣ ಬಳಿ ಇನ್ನು ಯಾವ ಸಂಘಟನೆ ಅಥವಾ ರಾಜಕೀಯ ಪಕ್ಷಗಳಿಗೆ ಪ್ರತಿಭಟನೆ, ಸಾರ್ವಜನಿಕ ಸಭೆ, ಧರಣಿ ಆಯೋಜಿಸಲು ಅವಕಾಶ ಇಲ್ಲ ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಅವರು ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಉಡುಪಿಯ ಗಾಂಧಿ ಪ್ರತಿಮೆ ಇರುವ ಕ್ಲಾಕ್ ಟವರ್ನಿಂದ ಕೆ.ಎಂ. ಮಾರ್ಗವಾಗಿ ಪ್ರತಿ ದಿನ ಸರಕಾರಿ ಹಾಗೂ ಖಾಸಗಿ ಬಸ್ಗಳು ಸಾವಿರಕ್ಕೂ ಹೆಚ್ಚು ಟ್ರಿಪ್ ಮಾಡುತ್ತಿದ್ದು, ಸಾವಿರಾರು ವಾಹನಗಳು, ಪ್ರಯಾಣಿಕರು, ವಿದ್ಯಾರ್ಥಿಗಳು, ನೌಕರರು, ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಾರ್ವಜನಿಕರ ಓಡಾಟದಿಂದ ಈ ರಸ್ತೆ ಸದಾ ಸಂಚಾರ ದಟ್ಟಣೆಯಿಂದ ಕೂಡಿದ್ದು ಸರ್ವಿಸ್ ನಿಲ್ದಾಣ, ಕ್ಲಾಕ್ ಟವರ್ ಬಳಿ ಪ್ರತಿಭಟನೆ, ಸಾರ್ವಜನಿಕ ಸಭೆ, ಧರಣಿ ನಡೆದರೆ ತೊಂದರೆಯಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಂಜೀವ್ ಎಂ. ಪಾಟೀಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದನ್ನು ಪರಿಗಣಿಸಿ ಎಡಿಸಿ ಈ ನಿರ್ಧಾರ ಕೈಗೊಂಡಿದ್ದಾರೆ.
‘ಸತ್ಯಾಗ್ರಹ ಸ್ಥಳ’ದಲ್ಲಿ ಧರಣಿ
ಇನ್ನು ಮುಂದೆ ಯಾವುದೇ ಸಂಘಟನೆಗಳು, ಬೇರೆ ಬೇರೆ ಪಕ್ಷಗಳು ಪ್ರತಿಭಟನೆ, ಧರಣಿಯನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಹೊರಭಾಗದಲ್ಲಿರುವ ಸತ್ಯಾಗ್ರಹ ಸ್ಥಳದಲ್ಲಿ ಅವಕಾಶ ನೀಡಲಾಗಿದೆ. ಉಡುಪಿಯಲ್ಲಿ ಹೆಚ್ಚಾಗಿ ಸಂಜೆ ವೇಳೆ ಪ್ರತಿಭಟನೆಗಳನ್ನು ಆಯೋಜಿಸುವುದರಿಂದ ಆ ಸಮಯದಲ್ಲಿಯೇ ಸಂಚಾರ ದಟ್ಟಣೆ, ಜನ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದರಿಂದ ಪೊಲೀಸ್ ಇಲಾಖೆ ಸೂಚನೆಯನ್ವಯ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ಮರಳು ವಿಚಾರದಲ್ಲಿ ಆ. 30 ರಂದು ಬಿಜೆಪಿ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿಗೆ ಕ್ಲಾಕ್ ಟವರ್ನಲ್ಲಿ ಅನುಮತಿ ನಿರಾಕರಿಸಲಾಗಿತ್ತು. ಇದೇ ವೇಳೆ ಬಿಜೆಪಿ ಹಾಕಿದ್ದ ಪೆಂಡಾಲ್ನ್ನು ಸಹ ನಗರಸಭೆ ತೆರವುಗೊಳಿಸಿತ್ತು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.