ಉಡುಪಿಯ ಈ ಬಸ್‌ ಚಾಲಕ “ಜಲಜಾಗೃತಿ’ ಉಪನ್ಯಾಸಕ


Team Udayavani, Apr 25, 2017, 3:04 PM IST

25-MNG-5.jpg

ಉಡುಪಿ: ನಾವೆಲ್ಲ ಇಂದಿಗೆ ಬದುಕಲು ಹಪಹಪಿಸುತ್ತಿದ್ದರೆ, ಕಾಲೇಜು ಬಸ್‌ ಚಾಲಕರೊಬ್ಬರು ನೆಮ್ಮದಿಯ ನಾಳೆಗಾಗಿ ನೀರು ಉಳಿಸುವ ಪಾಠ ಮಾಡುತ್ತಿದ್ದಾರೆ. ನಾವು ಇನ್ನಷ್ಟು ಮತ್ತಷ್ಟು ಆಳ ಭೂಮಿಯನ್ನು ಕೊರೆದು ಅಂತರ್ಜಲವನ್ನು ಖಾಲಿ ಮಾಡುತ್ತಿದ್ದರೆ, ಅವರು ಹೇಗೆ ಮರುಪೂರಣ ಮಾಡಿ ಅಂತರ್ಜಲ ಮಟ್ಟ ಸುಧಾರಿಸುವುದು ಎಂದು ಯೋಚಿಸುತ್ತಿದ್ದಾರೆ. 

ಉಡುಪಿಯ ಕಲ್ಯಾಣಪುರದ ಯುವಕ ಜೋಸೆಫ್ ಜಿ. ಎಂ. ರೆಬೆಲ್ಲೊ. ವೃತ್ತಿಯಲ್ಲಿ ಬಂಟಕಲ್ಲು ಎಂಜಿನಿಯರಿಂಗ್‌ ಕಾಲೇಜಿನ ಬಸ್‌ ಚಾಲಕ. ಇವರು ಬೆಳಗ್ಗೆ 9.30ಕ್ಕೆ ಕೆಲಸ ಮುಗಿಸಿದ ಬಳಿಕ ನೀರಿನ ಬಗ್ಗೆ ಜಾಗೃತಿ ಮೂಡಿಸುವುದರಲ್ಲಿ ತೊಡಗಿಕೊಳ್ಳುತ್ತಾ ಸಂಜೆ ಮತ್ತೆ 4ರಿಂದ 5 ಗಂಟೆವರೆಗೆ ಚಾಲಕ ವೃತ್ತಿ ಮಾಡುತ್ತಾರೆ. ಐದು ವರ್ಷಗಳಿಂದ ಪ್ರಕೃತಿಯ ಬಗ್ಗೆ ಒಂದಲ್ಲ ಒಂದು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ನಮ್ಮ ನಾಳೆಗಾಗಿಯೇ ಇವರು ದುಡಿಯುತ್ತಿದ್ದಾರೆ. ಉಡುಪಿ ಜಿಲ್ಲೆಯಷ್ಟೇ ಅಲ್ಲ. ಇತರೆಡೆಗಳಲ್ಲಿಯೂ ವನ ಮಹೋತ್ಸವ, ಜಲ ಸಂರಕ್ಷಣ ಜಾಗೃತಿ ಕಾರ್ಯಕ್ರಮ, ಸ್ವತ್ಛತೆಯ ಬಗ್ಗೆ ಅರಿವು, ಘನ ತ್ಯಾಜ್ಯ, ದ್ರವ ತ್ಯಾಜ್ಯ ಮತ್ತು ವಿಶೇಷವಾಗಿ ಪ್ಲಾಸ್ಟಿಕ್‌ ತ್ಯಾಜ್ಯದ ವಿಲೇವಾರಿಯ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

150ಕ್ಕೂ ಹೆಚ್ಚಿನ ಕಡೆ ಜಲಜಾಗೃತಿ
ಈಗ ತೆರೆದ ಬಾವಿಗೆ, ನಿರ್ಜೀವ ಹಾಗೂ ನೀರಿರುವ ಕೊಳವೆ ಬಾವಿಗಳಿಗೆ ಮಳೆ ನೀರು ಇಳಿಸುವ ವಿಧಾನಗಳನ್ನು ತಿಳಿಸುತ್ತಿದ್ದಾರೆ. “ಜಲ ಜಾಗೃತಿ’ ಎನ್ನುವ ಶೀರ್ಷಿಕೆಯಡಿ ಒಂದು ವರ್ಷದಲ್ಲಿ ಸುಮಾರು 150ಕ್ಕೂ ಹೆಚ್ಚಿನ ಕಡೆಗಳಲ್ಲಿ 8ನೇ ತರಗತಿಯಿಂದ ಹಿಡಿದು ಪಿಯುಸಿ, ಪದವಿ, ಎಂಎಸ್‌ಡಬ್ಲೂ, ನರ್ಸಿಂಗ್‌, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ, ಸ್ವಸಹಾಯ ಸಂಘಗಳಿಗೆ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಗೆ, ಗ್ರಾ. ಪಂ. ಗಳ ಸಭೆಗಳಲ್ಲಿ, ಪೊಲೀಸ್‌ ಸಿಬಂದಿಗೆ, ವಸತಿ ಸಮುಚ್ಚಯ ಇನ್ನಿತರ ಕಡೆ ನೀರಪಾಠ ಮಾಡಿದ್ದಾರೆ. ನಿಸರ್ಗದಿಂದ ಉಚಿತವಾಗಿ  ಸಿಗುತ್ತಿರುವ ಮಳೆ ನೀರನ್ನು ವ್ಯರ್ಥವಾಗಿ ಹರಿಯಲು ಬಿಡದೆ ಸದ್ಬಳಕೆ ಮಾಡಿಕೊಳ್ಳುವ ಕುರಿತು ಪವರ್‌ ಪಾಯಿಂಟ್‌ ಮೂಲಕ ಮಾಹಿತಿ ಕಾರ್ಯಾಗಾರ ನಡೆಸುತ್ತಿದ್ದಾರೆ.

ತೆರೆದ ಬಾವಿಗೆ ಮತ್ತು ಕೊಳವೆ ಬಾವಿಗೆ ಮಳೆ ನೀರನ್ನು ಇಂಗಿಸುವ ಘಟಕಗಳನ್ನು ಸ್ವತಃ ಇವರೇ ಮನೆಯಲ್ಲಿ ನಿರ್ಮಿಸಿದ್ದಾರೆ. ಅದೇ ರೀತಿ ಹೊಸದಾಗಿ ನಿರ್ಮಿಸುವವರಿಗೆ ಭೂಗರ್ಭ ಶಾಸ್ತ್ರಜ್ಞ, ಜಲ ತಜ್ಞರ ಸಲಹೆ ಪಡೆದು ಮಾರ್ಗದರ್ಶನ ನೀಡುತ್ತಿದ್ದಾರೆ. ಮನೆಯ ಛಾವಣಿಯಿಂದ ಮಳೆಗಾಲದಲ್ಲಿ  ಬೀಳುವ ಮಳೆ ನೀರು, ನಮ್ಮ ಹಿತ್ತಲ ಆವರಣದಿಂದ ಚರಂಡಿಗೆ, ತೋಡು, ಹಳ್ಳ, ನದಿಯ ಮೂಲಕ ಸಮುದ್ರಕ್ಕೆ ಸೇರಿ ವ್ಯರ್ಥವಾಗುವ ಬದಲು ಈ ರೀತಿಯಾಗಿ ಸದುಪಯೋಗವಾಗಲಿ ಎನ್ನುವುದು ಅವರ ಅಭಿಲಾಷೆ. ಭೂಮಿಯಲ್ಲಿ ನೀರು ಇಂಗಿಸಿ ಅಂತರ್ಜಲವನ್ನು ವೃದ್ಧಿಸಿ, ನೀರಿನ ಸಮಸ್ಯೆಗೆ ಸುಲಭ ಪರಿಹಾರದ ಪ್ರಕ್ರಿಯೆ ಈ ಕೂಡಲೇ ಆರಂಭಿಸದೆ ಹೋದಲ್ಲಿ ಮುಂದೆ ಅಂತರ್ಜಲ ಸಂಪತ್ತಿಗಾಗುವ ಬಹು ದೊಡ್ಡ ಅಪಾಯವನ್ನು  ನಾವು ಎದುರಿಸಬೇಕಾದೀತು. ನದಿ ಬತ್ತಿ ಹೋಗಿದೆ. ಬಾವಿಗಳಲ್ಲಿ ನೀರು ತಳಮಟ್ಟಕ್ಕಿಳಿದಿವೆ. ಎಷ್ಟು ಬೋರ್‌ವೆಲ್‌ ತೋಡಿದರೂ ನೀರು ಸಿಗುತ್ತಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಸಿಗಬೇಕೆಂದರೆ ಮಳೆ ನೀರನ್ನು ಇಂಗಿಸುವ, ಸುವ್ಯವಸ್ಥಿತ ರೀತಿಯಲ್ಲಿ ಜಲಮರುಪೂರಣ ಮಾಡಿ ಮಳೆ ನೀರನ್ನು ಭೂಮಿಗೆ ಸೇರುವಂತೆ ಮಾಡಿ ಅಂತರ್ಜಲ ಮಟ್ಟ ವೃದ್ಧಿಸುವತ್ತ ಗಮನಹರಿಸಬೇಕು ಎನ್ನುತ್ತಾರವರು.

ಎಲ್ಲರ ಜವಾಬ್ದಾರಿ 
ದೇವರು ಈ ಪ್ರಕೃತಿಗೆ ಅಗತ್ಯವಿರುವ ವಾತಾವರಣ, ಕಾಲ ಕಾಲಕ್ಕೆ ಮಳೆ, ಬೆಳೆ ಎಲ್ಲವನ್ನೂ  ನೀಡುತ್ತಿದ್ದರೂ, ನಾವು ಅದನ್ನು ಸರಿಯಾಗಿ ನಿರ್ವಹಿಸದೆ ಸಮಸ್ಯೆಯನ್ನು ತಂದುಕೊಳ್ಳುತ್ತಿದ್ದೇವೆ. ಒಂದೆಡೆ ನೀರಿನ ದುರ್ಬಳಕೆ ಮಾಡುತ್ತಾ ಮತ್ತೂಂದೆಡೆ ಮಳೆಗಾಗಿ ದೇವರ ಪ್ರಾರ್ಥಿಸಿದರೆ ಏನು ಪ್ರಯೋಜನ. ಈ ಭೂಮಿ, ಈ ಸುಂದರ ಪ್ರಕೃತಿಯ ಆರೋಗ್ಯ, ವಾತಾವರಣದ ಆರೈಕೆ, ಜೀವಜಲವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ.
ಜೋಸೆಫ್ ರೆಬೆಲ್ಲೊ, ಕಲ್ಯಾಣಪುರ

ಅರ್ಥ ಹನಿ
ನೆಮ್ಮದಿಯ ನಾಳೆಗಾಗಿ ಇಂದು ಪ್ರತಿ ಹನಿಯನ್ನೂ ಮೌಲ್ಯಯುತವಾಗಿ ಬಳಸಬೇಕು, ಉಳಿದದ್ದನ್ನು ಸಂರಕ್ಷಿಸಬೇಕು.

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.