“ವಸ್ತುಗಳ ಮೌಲ್ಯವರ್ಧನೆಗೆ ಇಂದು ಹೆಚ್ಚಿನ ಪ್ರಾಮುಖ್ಯತೆ’
Team Udayavani, Apr 24, 2019, 6:14 AM IST
ಮಣಿಪಾಲ: ವಸ್ತುಗಳ ಮೌಲ್ಯವರ್ಧನೆಗೆ ಇಂದು ಹೆಚ್ಚಿನ ಪ್ರಾಮುಖ್ಯತೆ ಇದೆ. ಸಿದ್ಧ ಉಡುಪು ತಯಾರಿಕೆಯೂ ಇದಕ್ಕೆ ಹೊರತಲ್ಲ ಎಂದು ಸೆಲ್ಕೋ ಸಂಸ್ಥೆಯ ಉಪ ಮಹಾ ಪ್ರಬಂಧಕ ಜಗದೀಶ್ ಪೈ ಹೇಳಿದರು.
ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಬೆಂಗಳೂರಿನ ಸೆಲ್ಕೋ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಉಚಿತ ಕಸೂತಿ ಮತ್ತು ಕರಕುಶಲತೆ ತರಬೇತಿ ಶಿಬಿರ ಜರಗಿತು ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಸೂತಿಗೆ ಬೇಡಿಕೆ
ಮಹಿಳೆಯರ ಸಿದ್ಧ ಉಡುಪಿಗೆ ಕಸೂತಿ ವಿನ್ಯಾಸ ಮಾಡುವುದರಿಂದ ಉತ್ತಮ ಬೇಡಿಕೆ ಮತ್ತು ದರ ಲಭ್ಯವಾಗುತ್ತದೆ. ಆದುದರಿಂದ ಇಲ್ಲಿ ತರಬೇತಿ ಪಡೆದ ಮಹಿಳೆಯರು ಹೊಲಿಗೆ, ಕಸೂತಿ ಕಲಿಯುವುದರ ಜತೆಯಲ್ಲಿ ಹೊಲಿದ ಉಡುಪುಗಳ ಮೌಲ್ಯವರ್ಧನೆಯ ಬಗ್ಗೆ ಚಿಂತಿಸಬೇಕು ಎಂದರು.
ಭಾರತೀಯ ವಿಕಾಸ ಟ್ರಸ್ಟ್ನ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಮುಕ್ತಾ ಎಸ್. ಉಪಸ್ಥಿತರಿದ್ದರು. ಬಿ.ವಿ.ಟಿ. ಸಿಬಂದಿ ಗೀತಾ ಆರ್. ರಾವ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.