ಹೆಬ್ರಿ: ಕಾಲು ಜಾರಿ ಬಾವಿಗೆ ಬಿದ್ದ ಪ್ರಕರಣ; ಅಣ್ಣನೇ ತಮ್ಮನ ಕೊಲೆಗೈದಿರುವ ಶಂಕೆ
Team Udayavani, Jan 15, 2022, 3:51 PM IST
ಹೆಬ್ರಿ : ಶಿವಪುರ ಗ್ರಾಮದ ಕಾಳಾಯಿ ಮುಳ್ಳುಗುಡ್ಡೆ ನಿವಾಸಿ ರವಿರಾಜ್ ಶೆಟ್ಟಿಗಾರ(43) ಎಂಬವರು ಜ.13ರಂದು ಕಾಲು ಜಾರಿ ಬಾವಿ ಬಿದ್ದು ಮೃತ ಪಟ್ಟ ಪ್ರಕರಣ ತನಿಖೆ ವೇಳೆ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ.
ಮೃತಪಟ್ಟ ವ್ಯಕ್ತಿಯ ಅಣ್ಣ ಜಯರಾಮ ಸೆಟ್ಟಿಗಾರ ಎಂಬವರು ಠಾಣೆಗೆ ಬಂದು ನನ್ನ ತಮ್ಮ ರವಿರಾಜ ಶೆಟ್ಟಿಗಾರ ಅವರ ಮನೆಯ ಹತ್ತಿರದ ಆವರಣವಿಲ್ಲದ ಬಾವಿಯಲ್ಲಿ ನೀರನ್ನು ತೆಗೆಯಲು ಬಕೇಟಿಗೆ ಹಗ್ಗ ಕಟ್ಟಿ ಬಾವಿಯಿಂದ ನೀರನ್ನು ಎಳೆಯುವಾಗ ಅವರ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವುದಾಗಿದೆ. ಆದರೆ ಮೃತರ ದೇಹದಲ್ಲಿ ಗಾಯ ಇದ್ದು ಇನ್ನೊಬ್ಬ ತಮ್ಮ ಶಂಕರನಾರಾಯಣ ಎಂಬವ ಮನೆಯ ಬಳಿಯ ಕೋಣೆಯ ಮಾಡನ್ನು ಮೃತ ರವಿರಾಜ ಶೆಟ್ಟಿಗಾರ ರವರಿಗೆ ಹೇಳದೇ ಕಿತ್ತು ಹಾಕಿದ್ದು ಈ ಬಗ್ಗೆ ವಾದವಿವಾದ ನಡೆದಿದೆ. ಮೃತ ದೇಹದಲಿ ಗಾಯ ಇರುವುದರಿಂದ ಕೊಲೆಯಾಗಿರಬಹುದು ಎಂಬ ಸಂಶಯ ಇದ್ದು ಸೂಕ್ತ ತನಿಖೆ ನಡೆಸುವಂತೆ ಹೆಬ್ರಿ ಠಾಣೆಗೆ ದೂರು ನೀಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಠಾಣಾಧಿಕಾರಿ ಮಹೇಶ್ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿಸಿದ್ದು ಮೃತ ದೇಹದ ಶವ ತನಿಖಾ ವೇಳೆಯಲ್ಲಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಮನೆಯ ಬಳಿ ಇರುವ ಕೋಣೆಯ ಮಾಡನ್ನು ಕಿತ್ತು ಹಾಕಿರುವ ವಿಚಾರದಲ್ಲಿ ವೈಮನಸ್ಸು ಇದ್ದು ಮೃತನ ಅಣ್ಣ ಶಂಕರನಾರಾಯಣ ಸೆಟ್ಟಿಗಾರ ಮೃತ ರವಿರಾಜ ಸೆಟ್ಟಿಗಾರ ಅವರನ್ನು ಹರಿತವಾದ ಆಯಧದಿಂದ ಬಲವಾಗಿ ಕಡಿದು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Illegal Immigration: ರಬ್ಬರ್ ಎಸ್ಟೇಟ್ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?
Kasaragod: ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲು
Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್ ನೋಂದಣಿ ಆರಂಭ
Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.