Manipal; ಅಪಾರ್ಟ್ ಮೆಂಟ್ ನಲ್ಲಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕದ್ದ ಇಬ್ಬರ ಬಂಧನ
Team Udayavani, Sep 2, 2024, 6:16 PM IST
ಉಡುಪಿ: ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಹಾಗೂ ಇತರ ವಸ್ತುಗಳನ್ನು ಕಳ್ಳತನ ಮಾಡಿದ್ದ ಆರೋಪದ ಮೇಲೆ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತಮಿಳುನಾಡಿನ ತಿರುಪತ್ತೂರು ನಿವಾಸಿ ಬಾಲನ್ (34) ಮತ್ತು ಆಂಧ್ರಪ್ರದೇಶದ ಚಿತ್ತೂರು ನಿವಾಸಿ ಕಾರ್ತಿಕ್ (28) ಎಂದು ಗುರುತಿಸಲಾಗಿದೆ.
ಆಗಸ್ಟ್ 31 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ವಿದ್ಯಾರತ್ನ ನಗರದಲ್ಲಿ ಇರುವ ಪ್ರಿನ್ಸೆಸ್ ಕೀರ್ತಿ ಅಪಾರ್ಟ್ ಮೆಂಟ್ ನಲ್ಲಿ ವಾಸವಿರುವ ಆಕಾಶ್ ಸಿ ಸೂರ್ಯ ವಂಶಿ ಎಂಬವರ ಕೊಠಡಿಯಲ್ಲಿ ಸುಮಾರು 4,00,000 ರೂ ಮೌಲ್ಯದ ಎರಡು ಲ್ಯಾಪ್ ಟಾಪ್ ಮತ್ತು ಒಂದು ಆಪಲ್ ಕಂಪನಿಯ ಐಪಾಡ್ ಕಳ್ಳತನವಾಗಿದ್ದು, ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗಾಗಿ ಮಣಿಪಾಲ ಪಿ.ಐ ಟಿ.ವಿ ದೇವರಾಜ್ ನೇತ್ರತ್ವದಲ್ಲಿ ಪಿ,ಎಸ್,ಐ ರಾಘವೇಂದ್ರ, ಪಿ,ಎಸ್,ಐ ಅಕ್ಷಯ ಕುಮಾರಿ, ಎ.ಎಸ್.ಐ ವಿವೇಕಾನಂದ , ಹೆಚ್.ಸಿ, ಇಮ್ರಾನ್, ಹೆಚ್.ಸಿ ಸುಕುಮಾರ್ ಶೆಟ್ಟಿ ಹಾಗೂ ಪಿ.ಸಿ ರಘು ನೇತ್ರತ್ವದ ತಂಡವನ್ನು ರಚಿಸಲಾಗಿತ್ತು. ಈ ತಂಡವು ಸಪ್ಟೆಂಬರ್ 2 ರಂದು ಕಳ್ಳತನ ಪ್ರಕರಣದ ಆರೋಪಿಗಳಾದ ಪಿ ಕಾರ್ತಿಕ್ ಮತ್ತು ಬಾಲನ್ ಗೋವಿಥಾನ್ ಇವರನ್ನು ಉಡುಪಿ ಜಿಲ್ಲೆಯ ಕಟಪಾಡಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡು, ಆರೋಪಿಗಳಿಂದ ವಸ್ತುಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿದ್ದಾರೆ.
ಮಣಿಪಾಲ ನಗರದಲ್ಲಿ ಅನೇಕ ಅಪಾರ್ಟಮೆಂಟ್ ಗಳು ಇದ್ದು, ಬಹುತೇಕ ವಿದ್ಯಾರ್ಥಿಗಳು ಅಪಾರ್ಟಮೆಂಟ್ ನಲ್ಲಿ ವಾಸವಿದ್ದು, ವಿದ್ಯಾರ್ಥಿಗಳು ಅವರು ಬಳಸುವ ಬೆಲೆಬಾಳುವ ಎಲೆಕ್ಟ್ರಾನಿಕ್ ಸಾಧನಗಳಾದ ಲ್ಯಾಪ್ ಟಾಪ್, ಮೊಬೈಲ್, ಐಪಾಡ್ ಗಳನ್ನು ರೂಮ್ ನಲ್ಲಿ ಇಟ್ಟು ಬಾಗಿಲು ಹಾಕದೆ ನಿರ್ಲಕ್ಷ ವಹಿಸುತ್ತಿದ್ದು ಆರೋಪಿಗಳು ಇದನ್ನೇ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದಾರೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗರೂಕತೆಯಿಂದ ಇರಬೇಕೆಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ
Udupi: ಮದ್ಯದ ನಶೆಯಲ್ಲಿ ವ್ಯಕ್ತಿ; ಅಸಹಾಯಕ ಮಗುವಿನ ರಕ್ಷಣೆ
Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 4ನೇ ರೀಲ್ಸ್ ಪ್ರಸಾರ
Malpe: ಕೊಡವೂರು ಹಿರಣ್ಯಧಾಮ ಲೇಔಟ್; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Minister ಕೆ.ಎನ್. ರಾಜಣ್ಣಗೆ ಪ್ರಾಸಿಕ್ಯೂಷನ್ ಸಂಕಷ್ಟ?
Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.