320 ವಿದ್ಯಾರ್ಥಿಗಳಿರುವ ಶಾಲೆಗೆ ಇಬ್ಬರೇ ಖಾಯಂ ಶಿಕ್ಷಕರು !

8 ಮಂದಿ ಗೌರವ ಶಿಕ್ಷಕರ ನೇಮಕ; ಮನವಿಗೆ ಸ್ಪಂದಿಸದ ಸರಕಾರ

Team Udayavani, Aug 30, 2019, 5:55 AM IST

2908KKRAM1

ಶತಮಾನ ಕಂಡ ಎಸ್‌ವಿಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ.

ಕಾರ್ಕಳ: ಶತಮಾನ ಕಂಡ ಎಸ್‌ವಿಟಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುನ್ನೂರ ಇಪ್ಪತ್ತು ವಿದ್ಯಾರ್ಥಿಗಳಿಗೆ ಬರೇ ಇಬ್ಬರು ಖಾಯಂ ಶಿಕ್ಷಕರು. ಒಂದನೇ ತರಗತಿಯಿಂದ 7ನೇ ತರಗತಿವರೆಗೆ ಹೊಂದಿರುವ ಈ ಶಾಲೆಗೆ ಕಳೆದ 25 ವರ್ಷಗಳಿಂದ ಶಿಕ್ಷಕರ ನೇಮಕವಾಗಿಲ್ಲ.

1934ರಲ್ಲಿ ಮೇಲ್ದರ್ಜೆಗೆ
1911ರಲ್ಲಿ ಕಾರ್ಕಳ ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಮೀಪ ಸ್ವಂತ ಕಟ್ಟಡವನ್ನು ಹೊಂದಿ ಹಿಂದೂ ಬಾಲಿಕಾ ಶಾಲೆ ಎಂಬ ಹೆಸರಲ್ಲಿ ಕಾರ್ಯಾರಂಭ ಮಾಡಿದ್ದ ಈ ಶಾಲೆಯನ್ನು 1934ರಲ್ಲಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿಸುವ ಮೂಲಕ ಎಸ್‌.ವಿ.ಟಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಎಂದು ಮರು ನಾಮಕರಣ ಮಾಡಲಾಗಿತ್ತು.

ಸಮವಸ್ತ್ರ ವಿತರಣೆ
ಅನುದಾನಿತ ಶಾಲೆಯಾಗಿರುವ ಕಾರಣ ಸರಕಾರದಿಂದ ದೊರೆಯುವ ಸೌಲಭ್ಯವಲ್ಲದೇ ಇಲ್ಲಿನ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಹಾಗೂ ನೋಟ್‌ ಪುಸ್ತಕವನ್ನು ಪ್ರತಿವರ್ಷ ಉಚಿತವಾಗಿ ನೀಡಲಾಗುತ್ತಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದೊಂದಿಗೆ ವಿಶೇಷ ವಿದ್ಯಾರ್ಥಿವೇತನ ಕೊಡಲಾಗುತ್ತಿದೆ. ಯಕ್ಷಗಾನ, ಯೋಗಾಸನ ಮೊದಲಾದ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದೆ.

ಆದ್ಯತೆ ದೊರೆತಲ್ಲಿ ಅನುಕೂಲ
ತಾಲೂಕಿನ ಅನುದಾನಿತ ಶಾಲೆಗಳಲ್ಲಿ ಎಸ್‌ವಿಟಿಯಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಅತಿ ಹೆಚ್ಚು. ಹೀಗಾಗಿ ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸುವಾಗ ನಮ್ಮ ಶಾಲೆಗೂ ಆದ್ಯತೆ ದೊರೆತಲ್ಲಿ ಅನುಕೂಲ.
-ಎಂ. ಜಾನಕಿನಾಥ ರಾವ್‌,
ಮುಖ್ಯಶಿಕ್ಷಕರು, ಎಸ್‌ವಿಟಿ ಹಿರಿಯ ಪ್ರಾಥಮಿಕ ಶಾಲೆ

ಸರಕಾರ ಶಿಕ್ಷಕರನ್ನು ನೇಮಿಸಲಿ
ಸರಕಾರ ಅನುದಾನಿತ ಶಾಲೆಗಳಿಗೆ ಬೇಕಾಗಿರುವ ಶಿಕ್ಷಕರನ್ನು ಒದಗಿಸಬೇಕು. ಅನುದಾನಿತ ಶಾಲೆಗಳ ಶಿಕ್ಷಕರು ನಿವೃತ್ತಿಗೊಂಡಲ್ಲಿ ಮರುನೇಮಕವಾಗುತ್ತಿಲ್ಲ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಇಂತಹ ಶಾಲೆಗಳಿಗೂ ಶಿಕ್ಷಕರನ್ನು ನೇಮಕ ಮಾಡಬೇಕು ಎನ್ನುವುದು ಶಿಕ್ಷಣ ತಜ್ಞರ ಅಭಿಮತ.

ಮನವಿಗೆ ಸ್ಪಂದಿಸಿಲ್ಲ
ನೂರು ವರುಷ ಇತಿಹಾಸ ಹೊಂದಿರುವ ಎಸ್‌ವಿಟಿ ಕನ್ನಡ ಮಾಧ್ಯಮ ಶಾಲೆಯನ್ನು ಉತ್ತಮ ರೀತಿಯಲ್ಲಿ ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸಾಕಷ್ಟು ಶ್ರಮವಹಿಸಲಾಗುತ್ತಿದೆ. ಶಿಕ್ಷಕರ ನೇಮಕಗೊಳಿಸುವಂತೆ ಸಾಕಷ್ಟು ಬಾರಿ ಸರಕಾರದ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಸರಕಾರ ಖಾಲಿ ಹುದ್ದೆ ತುಂಬಿಸುವಲ್ಲಿ ಅಥವಾ ಹೆಚ್ಚುವರಿ ಶಿಕ್ಷಕರನ್ನು ಅನುದಾನಿತ ಶಾಲೆಗಳಿಗೆ ನೀಡುವತ್ತ ಮುತುವರ್ಜಿ ವಹಿಸಬೇಕು.
-ಕೆ.ಪಿ. ಶೆಣೈ,
ಕಾರ್ಯದರ್ಶಿ, ಎಸ್‌ವಿಟಿ ಎಜುಕೇಶನ್‌ ಟ್ರಸ್ಟ್‌

24 ಲಕ್ಷ ರೂ. ಧನ ಸಹಾಯ
ಶಿಕ್ಷಕರ ಕೊರತೆ ನಿಭಾಯಿಸುವ ನಿಟ್ಟಿನಲ್ಲಿ ಶಾಲಾಡಳಿತ ನಿರ್ವಹಿಸುವ ಶ್ರೀ ವೆಂಕಟರಮಣ ಎಜುಕೇಶನ್‌ ಟ್ರಸ್ಟ್‌ ಹಾಗೂ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ 8 ಮಂದಿ ಗೌರವ ಶಿಕ್ಷಕರನ್ನು ನೇಮಿಸಿದೆ. ಗೌರವ ಶಿಕ್ಷಕರ ವೇತನ, ಮಕ್ಕಳ ಸಾರಿಗೆ ವೆಚ್ಚ, ಶಾಲಾ ಅಭಿವೃದ್ಧಿ ಚಟುವಟಿಕೆಗಳಿಗಾಗಿ ಪ್ರತಿವರ್ಷ ಸುಮಾರು 24 ಲಕ್ಷ ರೂ. ಧನ ಸಹಾಯವನ್ನು ಟ್ರಸ್ಟ್‌ ಭರಿಸುತ್ತಿದೆ.

-ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.