UCHILA DASARA; ಅ. 15 – 24: 2ನೇ ವರ್ಷದ ಉಚ್ಚಿಲ ದಸರಾ ವೈಭವ
ದಸರಾ 2023 ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಡಾ| ಜಿ. ಶಂಕರ್
Team Udayavani, Sep 18, 2023, 12:00 AM IST
ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಎರಡನೇ ವರ್ಷದ ದಸರಾ ಮಹೋತ್ಸವವು ಅ. 15ರಿಂದ ಅ. 24ರ ವರೆಗೆ ವೈಭವದಿಂದ ಜರಗಲಿದೆ.
ಪ್ರತೀ ದಿನ ಭಜನೆ, ಚಂಡಿಕಾಯಾಗ, ಸಹಸ್ರ ಕುಂಕುಮಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂತರ್ಪಣೆ ಸಹಿತವಾಗಿ ನವರಾತ್ರಿ ಮತ್ತು ದಸರಾ ಉತ್ಸವ ಸಂಪನ್ನಗೊಳ್ಳಲಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್ ಹೇಳಿದರು.
ಉಚ್ಚಿಲ ದೇಗುಲದಲ್ಲಿ ರವಿವಾರ ದಸರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಪ್ರತೀ ದಿನ ನಡೆಯುವ ಅನ್ನಸಂತರ್ಪಣೆಯಲ್ಲಿ ಭುವನೇಂದ್ರ ಕಿದಿಯೂರು ಹಾಲು ಪಾಯಸ ಸೇವೆ ನೀಡಲಿದ್ದಾರೆ. ಉಚ್ಚಿಲ – ಎರ್ಮಾಳು – ಕಾಪು ನಡುವಿನ 14 ಕಿಮೀ. ದೂರದವರೆಗೆ ಕಾಲ್ನಡಿಗೆ ಶೋಭಾಯಾತ್ರೆ ಯಲ್ಲಿ ತೆರಳಿ ಅ. 24ರಂದು ಜಲಸ್ತಂಭನ ನೆರವೇರಿಸಲಾಗುವುದು. ಈ ಬಾರಿಯೂ ಜಲಸ್ತಂಭನವು ಗಂಗಾರತಿ ಸಹಿತ ವಿಶೇಷ ಆಕರ್ಷಣೆಯೊಂದಿಗೆ ನಡೆಯಲಿದೆ ಎಂದರು.
ಸಮಸ್ತ ಮೊಗವೀರ ಸಮಾಜ, ಸರ್ವಭಕ್ತರ ಶ್ರೇಯೋಭಿವೃದ್ಧಿ ಮತ್ತು ಲೋಕ ಕಲ್ಯಾಣದ ಉದ್ದೇಶದೊಂದಿಗೆ ನವರಾತ್ರಿ ಮತ್ತು ದಸರಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದರು.
ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರು ಧಾರ್ಮಿಕ ವಿಧಿ ನೇರವೇರಿಸಿದರು. ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್, ಪ್ರಮುಖರಾದ ಭುವನೇಂದ್ರ ಕಿದಿಯೂರು, ಸುಭಾಸ್ಚಂದ್ರ ಕಾಂಚನ್ ಬೋಳಾರ್, ಹರಿಯಪ್ಪ ಕೋಟ್ಯಾನ್, ದಯಾನಂದ ಕೆ. ಸುವರ್ಣ ಮಲ್ಪೆ, ಸುಧಾಕರ ಕುಂದರ್ ಬಂಕೇರಕಟ್ಟ, ಸುಜಿತ್ ಎಸ್. ಸಾಲ್ಯಾನ್ ಮುಲ್ಕಿ, ನಾರಾಯಣ ಸಿ. ಕರ್ಕೆರ ಕಾಡಿಪಟ್ಣ, ಕೇಶವ ಎಂ. ಕೋಟ್ಯಾನ್ ಕುತ್ಪಾಡಿ, ಸಂಜೀವ ಮೆಂಡನ್ ಕೊಪ್ಪಲ, ರವೀಂದ್ರ ಶ್ರೀಯಾನ್ ಹಿರಿಯಡ್ಕ, ಶಂಕರ್ ಸಾಲ್ಯಾನ್ ಬಾರಕೂರು , ಬಡಾ ಗ್ರಾ.ಪಂ. ಅಧ್ಯಕ್ಷ ಶಿವಕುಮಾರ್ ಎರ್ಮಾಳು,ದಿನೇಶ್ ಕೋಟ್ಯಾನ್ ಮೂಳೂರು, ಮನೋಜ್ ಕಾಂಚನ್ ಎರ್ಮಾಳ್, ಉಷಾರಾಣಿ ಬೋಳೂರು, ಸುಗುಣ ಕರ್ಕೆರ ಮೂಳೂರು, ಮೋಹನ್ ಬಂಗೇರ ಕಾಪು, ಸುಕುಮಾರ್ ಶ್ರೀಯಾನ್, ಸದಾಶಿವ ಕೋಟ್ಯಾನ್, ರಾಜೇಂದ್ರ ಸುವರ್ಣ ಹಿರಿಯಡ್ಕ, ಶ್ರೀಪತಿ ಭಟ್ ಉಚ್ಚಿಲ, ಸಂತೋಷ್ ಸಾಲ್ಯಾನ್ ಕೋಳ, ದೇಗುಲದ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕೆರೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.