Uchila Dasara 2023; ಇನ್ನಷ್ಟು ಕಾರ್ಯಕ್ರಮಕ್ಕೆ ಪ್ರೇರಣೆ: ಡಾ| ಜಿ. ಶಂಕರ್‌

ಪಿಲಿ ನಲಿಕೆ ಸ್ಪರ್ಧೆಯ ಬಹುಮಾನ ವಿತರಣೆ

Team Udayavani, Oct 22, 2023, 12:08 AM IST

Uchila Dasara 2023; ಇನ್ನಷ್ಟು ಕಾರ್ಯಕ್ರಮಕ್ಕೆ ಪ್ರೇರಣೆ: ಡಾ| ಜಿ. ಶಂಕರ್‌

ಕಾಪು: ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗುತ್ತಿರುವ ಉಚ್ಚಿಲ ದಸರಾ 2023ರ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ ಲಿ. ಪ್ರಾಯೋಜಕತ್ವದಲ್ಲಿ ಶನಿವಾರ ಜರಗಿದ ರಂಗೋಲಿ ಮತ್ತು ಮಹಿಳೆಯರ ಪಿಲಿ ನಲಿಕೆ ಸ್ಪರ್ಧೆಯ ವಿಜೇತರಿಗೆ ದಸರಾ ರೂವಾರಿ ಡಾ| ಜಿ. ಶಂಕರ್‌ ಮತ್ತು ಪತ್ನಿ ಶಾಲಿನಿ ಶಂಕರ್‌ ಬಹುಮಾನ ವಿತರಿಸಿದರು.

ಪಿಲಿ ನಲಿಕೆ ವಿಜೇತರು
ಗುಂಪು ವಿಭಾಗದಲ್ಲಿ ಡಿಡಿ ಗ್ರೂಪ್ಸ್‌ ಗರ್ಲ್ಸ್‌ ಟೀಮ್‌ ನಿಟ್ಟೂರು (ಪ್ರ), ಪಿಲಿ ಪೆಜ್ಜೆ ಟೀಮ್‌ ಕೊರಂಗ್ರಪಾಡಿ (ದ್ವಿ), ಟೈಗರ್‌ ಫ್ರೆಂಡ್ಸ್‌, ಕೊರಂಗ್ರಪಾಡಿ (ತೃ) ಮತ್ತು ಬನ್ನಂಜೆ ಟೈಗರ್‌ ಪ್ರೋತ್ಸಾಹಕ ಪ್ರಶಸ್ತಿ ಗಳಿಸಿದ್ದು, ವಿಜೇತರಿಗೆ 21,121 ರೂ., 15,115 ರೂ., 10,110 ರೂ. ಹಾಗೂ ಅಂಕಿತಾ ವೈಯಕ್ತಿಕ 5 ಸಾವಿರ ರೂ. ಬಹುಮಾನ ಪಡೆದಿದ್ದಾರೆ. ವೈಯಕ್ತಿಕ ಸೀರೆ ವಿಭಾಗದಲ್ಲಿ ಅಂತ್ರಾ ಕೋಟ್ಯಾನ್‌ (ಪ್ರ), ರಮ್ಯಾ (ದ್ವಿ), ಅಂಕಿತಾ (ತೃ) ಪ್ರಶಸ್ತಿ ಗಳಿಸಿದರು.

ರಂಗೋಲಿ ಸ್ಪರ್ಧೆ
ಮಹಿಳೆಯರ ಸಾಂಪ್ರದಾಯಿಕ ವಿಭಾಗದಲ್ಲಿ ತೃಷಾ ಯು. ಅಂಚನ್‌ ನಂದಿಕೂರು (ಪ್ರ), ಮೇಘಶ್ರೀ ಉಡುಪಿ (ದ್ವಿ), ವಿದ್ಯಾ ವಿಘ್ನೇಶ್ (ತೃ) ಮತ್ತು ಬಿಂದು, ರೂಪಾ ಶ್ರೀನಾಥ್‌ ಸಮಧಾನಕರ ಬಹುಮಾನ, ಪುರುಷರ ಐಚ್ಛಿಕ ವಿಭಾಗದಲ್ಲಿ ಕಿರಣ್‌ ಕುಮಾರ್‌ ಸುಭಾಸ್‌ನಗರ (ಪ್ರ), ಶ್ರೀಕಾಂತ್‌ ಆಚಾರ್‌ ಕಾರ್ಕಳ (ದ್ವಿ), ಪ್ರಥಮ ಕುಮಾರ್‌ ಸುರತ್ಕಲ್‌ (ತೃ), ಧೀರೇಶ್‌ ಸುಳ್ಯ, ಅತುಲ್‌ ಮಂಗಳೂರು ಸಮಾ ಧಾನಕರ ಬಹುಮಾನ ಗಳಿಸಿದ್ದಾರೆ.

ಡಾ| ಜಿ. ಶಂಕರ್‌ ಮಾತನಾಡಿ, ಮಹಿಳೆಯರ ಪಿಲಿ ನಲಿಕೆಯ ಭಾರೀ ಯಶಸ್ಸು ಮುಂದಿನ ವರ್ಷ ಇನ್ನಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರೇರಣೆ ನೀಡಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ, ಮಹಾಲಕ್ಷ್ಮೀ ಕೋ. ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಯಶಪಾಲ್‌ ಸುವರ್ಣ ಮಾತನಾಡಿ, ಎಲೆಮರೆಯ ಕಾಯಿ ಯಂತಿದ್ದ ಪ್ರತಿಭೆಗಳಿಗೆ ಉಚ್ಚಿಲ ದಸರಾ ವೈಭವದ ವೇದಿಕೆಯಲ್ಲಿ ಅವಕಾಶ ಮಾಡಿಕೊಡುವ ಭಾಗ್ಯ ನಮ್ಮ ಪಾಲಿಗೆ ಸಿಕ್ಕಿದೆ ಎಂದರು.

ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್‌, ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ, ಮಹಾಜನ ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್‌, ಮಹಿಳಾ ಸಂಘದ ಅಧ್ಯಕ್ಷೆ ಉಷಾ ರಾಣಿ, ಕಾಪು ನಾಲ್ಕುಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಮನೋಜ್‌ ಕಾಂಚನ್‌, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಕರ್ಕೇರ, ಬಡಾ ಗ್ರಾ.ಪಂ.ಅಧ್ಯಕ್ಷ ಶಿವಕುಮಾರ್‌ ಮೆಂಡನ್‌, ಪ್ರಮುಖರಾದ ಸುರೇಶ್‌ ಕರ್ಕೇರ, ಹರೀಶ್‌ ಕುಮಾರ್‌, ಮಮತಾಶ್ರೀ, ರಾಕೇಶ್‌ ಕಾಂಚನ್‌ ಬೆಳ್ಳಂಪಳ್ಳಿ, ಮಹಾಲಕ್ಷ್ಮೀ ಕೋ ಆಪ್‌. ಬ್ಯಾಂಕ್‌ನ ನಿರ್ದೇಶಕರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಸಂಚಾಲಕ ಸತೀಶ್‌ ಅಮೀನ್‌ ಪಡುಕೆರೆ ವಂದಿಸಿದರು. ಮಹಾಲಕ್ಷ್ಮೀ ಕೋ ಆಪ್‌ ಬ್ಯಾಂಕ್‌ ಸಿಬಂದಿ ವಿಜೇತಾ ಶೆಟ್ಟಿ ನಿರ್ವಹಿಸಿದರು.

ಕಾರ್ಯಕ್ರಮ ವೈವಿಧ್ಯ
ಅ. 21ರ ಬೆಳಗ್ಗೆ 9ಕ್ಕೆ ಚಂಡಿಕಾ ಹೋಮ, 9.30ರಿಂದ ಚಿತ್ರಕಲಾ ಸ್ಪರ್ಧೆ,ಮಧ್ಯಾಹ್ನ ನವದುರ್ಗೆಯರಿಗೆ ಮಹಾ ಮಂಗಳಾರತಿ, ಅನ್ನಸಂತರ್ಪಣೆ, ಸಂಜೆಸಾವಿರ ಸುಮಂಗಲೆಯರಿಂದ ಕುಂಕುಮಾರ್ಚನೆ, ರಾತ್ರಿ ಮಹಾ ಪೂಜೆ, ಕಾಂತಾರ ಖ್ಯಾತಿಯ ಮೈಮ್‌ ರಾಮದಾಸ್‌, ಶಶಿರಾಜ್‌ ಕಾವೂರು ಮತ್ತು ಬಳಗದಿಂದ ವರಾಹ ರೂಪಂ ವ್ಹಾ ಪೊರ್ಲುಯಾ ತುಳು, ಕನ್ನಡ ಹಾಗೂ ದೇಶೀಯ ಜಾನಪದ ಸಂಗೀತ ಫ್ಯೂಷನ್‌ ನಡೆಯಲಿದೆ.

7ರ ಬಾಲೆ, 72ರ
ವೃದ್ಧೆಯ ಹುಲಿ ಹೆಜ್ಜೆ !
7 ವರ್ಷದ ಬಾಲೆ ಆದ್ಯಾ ಮತ್ತು 72 ವರ್ಷ ಪ್ರಾಯದ ಸವಿತಾ ನಾಯಕ್‌ ಹುಲಿ ವೇಷ ಕುಣಿದಿದ್ದು ಪ್ರೇಕ್ಷಕರ ಭಾರೀ ಕರತಾಡನಕ್ಕೆ ಕಾರಣವಾಯಿತು. ಡಾ| ಜಿ. ಶಂಕರ್‌ ದಂಪತಿ, ಶಾಸಕ ಯಶ್‌ಪಾಲ್‌ ಸುವರ್ಣ ಸಹಿತ
ಗಣ್ಯರು ವೇದಿಕೆಯ ಮೇಲೆ ಬಂದು ಇಬ್ಬರನ್ನೂ ಗೌರವಿಸಿದರು.

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.