Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ


Team Udayavani, Oct 1, 2024, 11:43 PM IST

Uchila: ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಹೊರೆಕಾಣಿಕೆ ಸಮರ್ಪಣೆ, ಸ್ವೀಕಾರಕ್ಕೆ ಚಾಲನೆ

 

ಕಾಪು: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 3ರಿಂದ 12ರ ವರೆಗೆ ಜರಗಲಿರುವ ಶರನ್ನವರಾತ್ರಿ ಮಹೋತ್ಸವದ ಪೂರ್ವಭಾವಿಯಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಹೊರೆಕಾಣಿಕೆ ಸಮರ್ಪಣೆ ಮತ್ತು ಸ್ವೀಕಾರಕ್ಕೆ ಅ. 1ರಂದು ಚಾಲನೆ ನೀಡಲಾಯಿತು.

ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌ ಮಾತನಾಡಿ, ಉಚ್ಚಿಲದಲ್ಲಿ ಹತ್ತು ದಿನಗಳ ಕಾಲ ಜರಗಲಿರುವ ಶರನ್ನವರಾತ್ರಿ ಮತ್ತು ದಸರಾ ಉತ್ಸವದಲ್ಲಿ ನಿತ್ಯ ಚಂಡಿಕಾಯಾಗ, ಕಲ್ಫೋಕ್ತ ಪೂಜೆ, ಅನ್ನಸಂತರ್ಪಣೆ, ನಿತ್ಯಭಜನೆ ಮತ್ತು
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಈ ವೇಳೆ ನಡೆಯುವ ಅನ್ನಸಂತರ್ಪಣೆ, ಉಪಾಹಾರ ಮತ್ತು ಪ್ರಸಾದ ವಿತರಣೆಯ ಉದ್ದೇಶದಿಂದ ಹೊರೆಕಾಣಿಕೆ ಸ್ವೀಕರಿಸಲಾಗುತ್ತಿದ್ದು ಅಕ್ಕಿ, ಬೇಳೆ, ತೊಗರಿಬೇಳೆ, ತೆಂಗಿನಕಾಯಿ, ತರಕಾರಿ ವಸ್ತುಗಳನ್ನು ಹೊರೆಕಾಣಿಕೆ ರೂಪದಲ್ಲಿ ಸ್ವೀಕರಿಸಲಾಗುವುದು ಎಂದರು.

ಯಥೇಚ್ಛ ಸೇವೆಯ ಅವಕಾಶ
ಪ್ರಧಾನ ಅರ್ಚಕ ವೇ| ಮೂ| ಕೆ. ವಿ. ರಾಘವೇಂದ್ರ ಉಪಾಧ್ಯಾಯ ಮಾತನಾಡಿ, ಉಡುಪಿ ಉಚ್ಚಿಲ ದಸರಾ ನಾಡಹಬ್ಬವಾಗಿ ಆಚರಿಸಲಾಗುತ್ತಿದೆ. ಭಕ್ತರ ಅನುಕೂಲಕ್ಕಾಗಿ ವಿವಿಧ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಶರನ್ನವರಾತ್ರಿ ಮಹೋತ್ಸವ, ನವದುರ್ಗೆಯರು, ಶಾರದಾ ಮಾತೆಯ ಆರಾಧನೆಯಿಂದ ಮಲ್ಪೆ ಬಂದರು,ಮಂಗಳೂರು ಬಂದರು ಸಹಿತ ಸಮುದ್ರದಲ್ಲಿ ಕೆಲಸ ಮಾಡುವವರಿಗೆ ಹೇರಳ ಮತ್ಸ್ಯ ಸಂಪತ್ತು ದೊರಕಿಸಿಕೊಟ್ಟು ಯಥೇಚ್ಚ ಸೇವೆ ನೀಡುವ ಅವಕಾಶ ಒದಗಿ ಬರಲಿ ಎಂದು ಪ್ರಾರ್ಥಿಸಿದರು.

ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ್‌ ಸುವರ್ಣ, ಮಹಾಜನ ಸಂಘದ ಪ್ರ. ಕಾರ್ಯದರ್ಶಿ ಶರಣ್‌ ಕುಮಾರ್‌ ಮಟ್ಟು, ಜ. ಕಾರ್ಯದರ್ಶಿ ಸುಜಿತ್‌ ಸಾಲ್ಯಾನ್‌, ಪ್ರಮುಖರಾದ ವಾಸುದೇವ ಸಾಲ್ಯಾನ್‌, ಗುಂಡು ಬಿ. ಅಮೀನ್‌, ಮೋಹನ್‌ ಬಂಗೇರ, ಸುಧಾಕರ ಕುಂದರ್‌, ಉಷಾರಾಣಿ ಬೋಳೂರು, ಸತೀಶ್‌ ಅಮೀನ್‌ ಬಾಕೂìರು, ಸಂಕರ್‌ ಸಾಲ್ಯಾನ್‌, ರವೀಂದ್ರ ಶ್ರೀಯಾನ್‌, ನಾರಾಯಣ ಕರ್ಕೇರ, ಸತೀಶ್‌ ಎರ್ಮಾಳು, ಭರತ್‌ ಎರ್ಮಾಳು, ದಿನೇಶ್‌ ಎರ್ಮಾಳು, ಸುಗುಣಾ ಕರ್ಕೇರ, ಮನೋಜ್‌ ಕಾಂಚನ್‌, ದಾಮೋದರ ಸುವರ್ಣ, ಅಶೋಕ್‌ ಸಾಲ್ಯಾನ್‌, ಪ್ರಬಂಧಕ ಸತೀಶ್‌ ಅಮೀನ್‌ ಪಡುಕೆರೆ ಉಪಸ್ಥಿತರಿದ್ದರು.

ಫಲಪುಷ್ಪ ಪ್ರದರ್ಶನ
ಉಚ್ಚಿಲ ದಸರಾ ಪ್ರಯುಕ್ತ ಅ. 3ರಿಂದ 12 ರವರೆಗೆ ಫ‌ಲ ಪುಷ್ಪ ಪ್ರದರ್ಶನ, ಗುಡಿ ಕೈಗಾರಿಕಾ ಪ್ರಾತ್ಯಕ್ಷಿಕೆ, ಪುಸ್ತಕ ಮೇಳ, ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ನಡೆಯಲಿದೆ.

ವಿದ್ಯುತ್‌ ದೀಪಾಲಂಕಾರ ಉದ್ಘಾಟನೆ
ಅ. 3ರ ಸಂಜೆ 6ಕ್ಕೆ ಪ್ರಾಯೋಜಕರಾದ ಎಂಆರ್‌ಜಿ ಗ್ರೂಫ್‌ನ ಅಧ್ಯಕ್ಷ ಡಾ| ಕೆ. ಪ್ರಕಾಶ್‌ ಶೆಟ್ಟಿ ಬಂಜಾರ ಅವರು ದಸರಾ ಪ್ರಯುಕ್ತ ವಿಶೇಷ ವಿದ್ಯುತ್‌ ದೀಪಾಲಂಕಾರ ವನ್ನು ಉದ್ಘಾಟಿಸಲಿದ್ದಾರೆ.

ಅ. 3ರಿಂದ ಅ. 12ರ ವರೆಗೆ ದೇವಸ್ಥಾನದ ಆವರಣದಲ್ಲಿ ಪ್ರತೀ ದಿನ ರಾತ್ರಿ 8ರಿಂದ 8.10ರ ವರೆಗೆ ವಿಶೇಷ ಲೇಸರ್‌ ಶೋ ಪ್ರದರ್ಶನ ನಡೆಯಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Uppinangady: ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

Road Mishap: ಬೈಕ್‌ ಸವಾರನ ಕೈ ಮೇಲೆ ಹರಿದ ಬಸ್ಸಿನ ಚಕ್ರ; ಗಂಭೀರ ಗಾಯ

Road Mishap: ಬೈಕ್‌ ಸವಾರನ ಕೈ ಮೇಲೆ ಹರಿದ ಬಸ್ಸಿನ ಚಕ್ರ; ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Udupi: ಕೊನೆಗೂ ಮಗನನ್ನು ಸೇರಿದ ತಾಯಿ

Udupi: ಕೊನೆಗೂ ಮಗನನ್ನು ಸೇರಿದ ತಾಯಿ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

1

Manipal: ವ್ಯಕ್ತಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

Udupi: ಗೀತಾರ್ಥ ಚಿಂತನೆ-52: ಯುದ್ಧ ಮೂಲ ಸ್ವಾರ್ಥ, ಪಕ್ಷಪಾತ

R.Ashok

MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಅಶೋಕ್‌

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Karkala: ರಾಷ್ಟ್ರಮಟ್ಟದ ಇನ್‌ಸ್ಪೈರ್‌ ಅವಾರ್ಡ್‌ ಕಾರ್ಕಳದ ಅಮೂಲ್ಯ ಹೆಗ್ಡೆಗೆ ಕಂಚು

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Bajpe: ಮರವೂರಿನಲ್ಲಿ ನೀರುಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Uppinangady: ಕೆಎಸ್‌ಆರ್‌ಟಿಸಿ ಬಸ್ಸುಗಳ ಢಿಕ್ಕಿ; ದಂಪತಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.