Udayavani Campaign: ಅದಮಾರಿಗೆ ಬಸ್ಸು ಯಾವುದಯ್ಯಾ? ನಡಿಗೆಯೇ ದಾರಿ


Team Udayavani, Jun 26, 2024, 5:52 PM IST

Udayavani Campaign: ಅದಮಾರಿಗೆ ಬಸ್ಸು ಯಾವುದಯ್ಯಾ? ನಡಿಗೆಯೇ ದಾರಿ

ಕಾಪು: ಕಾಪು, ಉಳಿಯಾರಗೋಳಿ, ಮಜೂರು, ಮಲ್ಲಾರು, ಬೆಳಪು, ಎಲ್ಲೂರು, ಕುತ್ಯಾರು, ಶಿರ್ವ, ಮುದರಂಗಡಿ, ಪಲಿಮಾರು, ಪಡುಬಿದ್ರಿ, ಹೆಜಮಾಡಿ, ತೆಂಕ ಎರ್ಮಾಳು, ಬಡಾ ಉಚ್ಚಿಲ ಸೇರಿದಂತೆ 14 ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾವಿರಾರು ವಿದ್ಯಾರ್ಥಿಗಳಿಗೆ ಅದಮಾರು ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯೇ ಪ್ರಧಾನ ಆಸರೆ.

ತೀರಾ ಗ್ರಾಮೀಣ ಪ್ರದೇಶವಾಗಿರುವ ಅದಮಾರಿನಲ್ಲಿ ಕೆಜಿಯಿಂದ ಪಿಯುವರೆಗಿನ ಶಿಕ್ಷಣ ಸೌಲಭ್ಯವಿದ್ದು ಸುಮಾರು 1,800ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳಿದ್ದಾರೆ. ಆದರೆ, ಇಲ್ಲಿಗೆ ತಲುವುದೇ ಮಹಾ ಸಾಹಸ. ಅದಮಾರು ಶಿಕ್ಷಣ ಸಂಸ್ಥೆಗೆ ಬರುವ ವಿದ್ಯಾರ್ಥಿಗಳ ಪೈಕಿ ಶೇ. 60ರಷ್ಟು ಮಕ್ಕಳು ಖಾಸಗಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಇಲ್ಲಿ ಗೆ ಉಡುಪಿ, ಪಡುಬಿದ್ರಿ, ಮುದರಂಗಡಿಯಿಂದ ನಾಲ್ಕು ಬಸ್‌ಗಳು ಬರುತ್ತವೆ. ಆದರೆ ವಿದ್ಯಾರ್ಥಿಗಳ ಅನುಕೂಲಕ್ಕೆ ಬೆಳಿಗ್ಗೆ ಎರಡು, ಸಂಜೆ ಒಂದು ಬಸ್‌ ಮಾತ್ರ ದೊರಕುತ್ತವೆ. ಇದರಲ್ಲಿ ಇರುವೆ ಹೋಗಲೂ ಜಾಗ ಇಲ್ಲದಂತೆ ವಿದ್ಯಾರ್ಥಿಗಳು ತುಂಬಿ ಬಿಡುತ್ತಾರೆ. ಹೀಗಾಗಿ ನೂರಾರು ವಿದ್ಯಾರ್ಥಿಗಳು ಬೆಳಗ್ಗೆ ಮತ್ತು ಸಂಜೆ ಕನಿಷ್ಠ ಒಂದೂವರೆ ಕಿ.ಮೀ. ದೂರದ ಎರ್ಮಾಳು ಅಥವಾ ಮುದರಂಗಡಿಯವರೆಗೆ ನಡೆಯಲೇಬೇಕು.

ಎಲ್ಲೆಲ್ಲಿ ಪಾದಯಾತ್ರೆ?
ಹೆದ್ದಾರಿ ಮೇಲಿನ ಎಲ್ಲ ಊರಿನ ಮಕ್ಕಳು ರಾ. ಹೆ. 66ರ ಎರ್ಮಾಳು ಜಂಕ್ಷನ್‌ಗೆ ಬಂದು ಅಲ್ಲಿಂದ 1.5 ಕಿ.ಮೀ. ನಡೆದು ಅದಮಾರು ತಲುಪಬೇಕು. ಸಾಂತೂರು, ಬೆಳ್ಮಣ್‌, ಜಂತ್ರ, ಶಿರ್ವ, ಪಿಲಾರುಕಾನ, ಕುತ್ಯಾರು, ಎಲ್ಲೂರು, ಇರಂದಾಡಿಯಿಂದ ಬರುವವರು ಮುದರಂಗಡಿ ಜಂಕ್ಷನ್‌ ಗೆ ಬಂದು ಅಲ್ಲಿಂದ ನಡೆಯಬೇಕು. ಅದಮಾರಿಗೆ ತಾಗಿಕೊಂಡಿರುವ ಕುಂಜೂರು, ಪಣಿಯೂರು, ಕೆಮ್ಮುಂಡೇಲು, ಪಾದೆಬೆಟ್ಟು, ನಡ್ಪಾಲು, ಎರ್ಮಾಳು ಭಾಗದವರಿಗೆ ನಿತ್ಯವೂ ನಡೆಯುವುದೇ ಸಂಪ್ರದಾಯ.

ಮೂರು ಬಸ್‌ ಹಿಡಿಯಬೇಕು!
ನಾನು ಇನ್ನಾದಿಂದ ಅದಮಾರು ತಲುಪಬೇಕಾದರೆ ಇನ್ನಾದಿಂದ ಪಡುಬಿದ್ರಿ, ಪಡುಬಿದ್ರಿಯಿಂದ ಎರ್ಮಾಳು, ಎರ್ಮಾಳಿನಿಂದ ಅದಮಾರು ವರೆಗೆ ಮೂರು ಬಸ್‌ಗಳನ್ನು ಹಿಡಿಯಬೇಕು. ಸಂಜೆಯಂತೂ ಬಸ್‌ ನಲ್ಲಿ ನೇತಾಡುವುದನ್ನು ತಪ್ಪಿಸಬೇಕಾದರೆ 1.5 ಕಿ.ಮೀ. ನಡೆಯುವುದು ಅಷ್ಟೇ.
*ಸುಶಾಂತ್‌ ಇನ್ನ (ದ್ವಿತೀಯ ಪಿಯು ವಿದ್ಯಾರ್ಥಿ)

ಇರುವ ಒಂದು ಬಸ್‌ ಬೆಳಗ್ಗೆ ಬೇಗ ಬರುತ್ತದೆ
ನೇರ ಬಸ್‌ ಸೌಕರ್ಯವಿಲ್ಲ. ಇರುವ ಬಸ್‌ ಬೆಳಗ್ಗೆ ಬೇಗ ಬರುತ್ತದೆ. ಮತ್ತೊಂದು ಬಸ್‌ ತಡವಾಗಿ ಬರುತ್ತದೆ. ಎರಡೂ ಬಸ್‌ಗಳ ಸಮಯದ ಮಧ್ಯದ ಅವಧಿಯಲ್ಲಿ ಪಿಯುಸಿ ತರಗತಿಗಳು ಆರಂಭವಾಗುವುದರಿಂದ ಬಸ್‌ಗಳಿಗೆ ಹೊಂದಾಣಿಕೆ ಮಾಡಿಕೊಂಡು ಬರುವುದು ಕಷ್ಟವಾಗುತ್ತಿದೆ.
*ಶ್ರೇಯಸ್‌, ಧನ್ವಿತ್‌, ಪ್ರಣವ್‌, ಕೌಶಿಕ್‌, ಹಿತೇಶ್‌, ಕವನ್‌ (ಪ್ರಥಮ ಪಿಯು ವಿದ್ಯಾರ್ಥಿಗಳು)

ಬಸ್‌ ಮಿಸ್‌ ಆದರೆ ನಡಿಗೆಯೇ ದಾರಿ
ನಾನು ಬೆಳಗ್ಗೆ ಶಿರ್ವ, ಮುದರಂಗಡಿ, ಪಡುಬಿದ್ರಿ ಮೂಲಕ ಅದಮಾರು ತಲುಪುತ್ತೇನೆ. ಸಂಜೆ ಎರ್ಮಾಳುವರೆಗೆ ನಡೆದುಕೊಂಡು ಹೋಗಿ, ಕಾಪು ಮೂಲಕವಾಗಿ ಶಿರ್ವ ತಲುಪುತ್ತೇನೆ. ಸ್ವಲ್ಪ ತಡವಾದರೂ ಎರ್ಮಾಳು-ಕಾಪು, ಕಾಪು-ಶಿರ್ವ ನಡುವಿನ ಬಸ್‌ ಮಿಸ್‌ ಆಗುತ್ತದೆ. ಆಗ ನಡಿಗೆಯೇ ದಾರಿ.
*ದೀಕ್ಷಾ ಶಿರ್ವ (ಪ್ರಥಮ ಪಿಯು ವಿದ್ಯಾರ್ಥಿ)

ಬಸ್‌ ಸಿಗದಿದ್ದರೆ ರೈಲ್ವೇ ಹಳಿ ದಾಟಿ ಹೋಗಬೇಕು
ಬೆಳಪುವಿನಿಂದ ಅದಮಾರು ತಲುಪಲು 3 ಬಸ್‌ ಹಿಡಿಯಬೇಕು. ಬೆಳಪುವಿನಿಂದ ಪಣಿಯೂರಿನವರೆಗೆ ನಡೆದುಕೊಂಡು ಬಂದು ಪಣಿಯೂರು-ಉಚ್ಚಿಲ, ಉಚ್ಚಿಲ-ಎರ್ಮಾಳು, ಎರ್ಮಾಳು-ಅದಮಾರು ಬಸ್‌ ಬದಲಿಸಬೇಕು. ಬಸ್‌ ಸಿಗದಿದ್ದರೆ ಎರ್ಮಾಳಿನಲ್ಲಿ ರೈಲ್ವೇ ಹಳಿ ದಾಟಿ ಹೋಗಬೇಕು.
-ಸೃಜನ್‌ ಪಣಿಯೂರು

*ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.