ಉದಯವಾಣಿ ಚಿಗುರುಚಿತ್ರ ಫೋಟೋ ಸ್ಪರ್ಧೆ: ಉದಯವಾಣಿ ಚಿತ್ರ ಸದಾಕಾಲ ನೆನಪು: ಡಾ| ಪುಷ್ಪಾ ಕಿಣಿ


Team Udayavani, Dec 10, 2021, 6:07 AM IST

ಉದಯವಾಣಿ ಚಿಗುರುಚಿತ್ರ ಫೋಟೋ ಸ್ಪರ್ಧೆ: ಉದಯವಾಣಿ ಚಿತ್ರ ಸದಾಕಾಲ ನೆನಪು: ಡಾ| ಪುಷ್ಪಾ ಕಿಣಿ

ಉಡುಪಿ: ಉದಯವಾಣಿ ಫೋಟೋ ಸ್ಪರ್ಧೆಯಲ್ಲಿ ಪ್ರಶಸ್ತಿ ಬಂದಿರುವುದನ್ನು ಮಕ್ಕಳು ಸದಾಕಾಲ ನೆನಪಿನಲ್ಲಿಡಲಿದ್ದಾರೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸವೂ ಸಿಗಬೇಕು. ಚಿತ್ರದಲ್ಲಿರುವ ಮಕ್ಕಳ ಅಭಿವ್ಯಕ್ತಿ ಎದುರಿಗೆ ಕಂಡಾಗ ನಿಜಕ್ಕೂ ಸಂತಸವಾಗುತ್ತದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ| ಪುಷ್ಪಾ ಜಿ. ಕಿಣಿ ಹೇಳಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ಉದಯವಾಣಿ ಹಮ್ಮಿಕೊಂಡ ಚಿಗುರುಚಿತ್ರ ಫೋಟೋ ಸ್ಪರ್ಧೆಯ ವಿಜೇತರಿಗೆ ಗುರುವಾರ ಉದಯವಾಣಿ ಮಣಿಪಾಲದ ಕೇಂದ್ರ ಕಚೇರಿಯಲ್ಲಿ ನಡೆದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತ ನಾಡಿದರು.

ಉತ್ತಮ ಸ್ಪಂದನೆ:

ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಅವರು  ಸಾವಿರ-ಸಾವಿರ ಸಂಖ್ಯೆಯಲ್ಲಿ ಓದುಗರು ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಓದುಗರ ಸಂಪ್ರೀತಿ ಮುಂದೆಯೂ ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದರು.

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ನ‌ ಕಾರ್ಯ ನಿರ್ವಾಹಕ ಅಧ್ಯಕ್ಷ ಸತೀಶ್‌ ಪೈ ಅವರು ಉಪಸ್ಥಿತರಿದ್ದರು.

ಉದಯವಾಣಿ ಸಂಪಾದಕ ಅರವಿಂದ ನಾವಡ ಅವರು ಪ್ರಸ್ತಾವನೆಗೈದು, ಓದುಗರ ಜತೆಗೆ ಉತ್ತಮ ಬಾಂಧವ್ಯ ಬೆಸೆಯಲು  ಇಂಥ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಪತ್ರಿಕೆ ಆರಂಭಗೊಂಡ 5ನೇ ವರ್ಷದಿಂದಲೇ ಮಕ್ಕಳ ಫೋಟೋ ಸ್ಪರ್ಧೆಯನ್ನು ಆರಂಭಿಸಲಾಗಿದೆ. ಪ್ರತೀ ವರ್ಷ 3ರಿಂದ 4 ಸಾವಿರ ಫೋಟೋಗಳು ಬರುತ್ತಿದ್ದವು. ಈ ವರ್ಷ 6,200 ಚಿತ್ರಗಳು ಸ್ಪರ್ಧೆಗೆ ಬಂದಿದ್ದವು. ಕೋವಿಡ್‌ ಅನಂತರವೂ ಓದುಗರು ಉತ್ತಮ ಪ್ರೋತ್ಸಾಹ ನೀಡಿದ್ದಾರೆ ಎಂದರು.

ಉಡುಪಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಧಾಕೃಷ್ಣ ಕೊಡವೂರು ಬಹುಮಾನಿತರ ಪಟ್ಟಿ ವಾಚಿಸಿದರು. ಮಂಗಳೂರು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರ್‌ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಬಹುಮಾನ ವಿಜೇತರು :

ಪ್ರಥಮ- ಅರ್ಥ್ ಸುವರ್ಣ ಕಾರ್ಕಳ, ದ್ವಿತೀಯ- ಎಸ್‌. ಆರುಷ್‌ ಅಮೀನ್‌ ಬಂಟ್ವಾಳ, ತೃತೀಯ- ಹೃಷಿÌ ಪಿ. ಬಂಗೇರ ಕೊಳಂಬೆ, ಮಾಸ್ಟರ್‌ ಅವಿನಂದನ್‌ ಪಿದಮಲೆ ಬೆಳ್ತಂಗಡಿ, ತೃಯಾಂಶ್‌ ಆರ್‌. ಆಚಾರ್ಯ ಕೋಟ, ಕ್ಷಿತಿಜ್‌ ಕಾಮತ್‌ ಕದ್ರಿ, ಸುಶೀನ್‌ ಸುಕೇಶ್‌ ಕುಮಾರ್‌ ಉಚ್ಚಿಲ, ರಿಯಾನ್‌ ನೈಲ್‌ ಪಿಂಟೋ ಕೆಳಾರ್ಕಳಬೆಟ್ಟು.

ಒಂದನೇ ತರಗತಿ ಯಿಂದಲೇ ನಾನು ಉದಯವಾಣಿ ಓದುಗ. ಫೋಟೋ ಸ್ಪರ್ಧೆಗೆ ಚಿತ್ರ ಕಳುಹಿಸಿದ್ದೆ. ತುಂಬಾ ಕುತೂಹಲವಿತ್ತು. ಬೆಳಗ್ಗೆ ಪತ್ರಿಕೆಯಲ್ಲಿ ಮೊದಲ ಬಹುಮಾನ ನಮ್ಮ ಮಗುವಿಗೆ ಬಂದಿದೆ ಎಂದಾಗ ಬಹಳಷ್ಟು ಆನಂದವಾಯಿತು.-ಅಭಿಷೇಕ್‌ ಸುವರ್ಣ,  ಪೋಷಕರು

ಫೋಟೋ ಸ್ಪರ್ಧೆಯ ಕೊನೆಯ ದಿನ ಚಿತ್ರ ಕಳುಹಿಸಿದ್ದೆ. ಬಹುಮಾನ ಬರುತ್ತೆ ಅಂದುಕೊಂಡಿರಲಿಲ್ಲ. ಈಗ ಬಹಳಷ್ಟು ಸಂತಸವಾಗಿದೆ. ಈ ಸ್ಪರ್ಧೆ ಇದೇ ರೀತಿ ಮುಂದುವರಿಯಲಿ.-ಪ್ರೀತಂ,  ಪೋಷಕರು

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.