![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 14, 2022, 6:14 AM IST
ಮಣಿಪಾಲ: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಈಗಾಗಲೇ ಎಲ್ಲೆಡೆ ತಯಾರಿಗಳು ಆರಂಭವಾಗಿವೆ. ದೀಪಾವಳಿ ಅಂದ ಕೂಡಲೇ ಹೊಸ ಬಟ್ಟೆಯ ಸಂಭ್ರಮ ಎಲ್ಲರ ಮನದಲ್ಲೂ ಮೂಡುತ್ತದೆ. ಈಗಾಗಲೇ ಹೊಸ ಬಟ್ಟೆ ಖರೀದಿ ಎಲ್ಲೆಡೆ ಭರದಿಂದ ಸಾಗುತ್ತಿದೆ.
ಪ್ರತೀ ವರ್ಷದಂತೆ ಈ ಬಾರಿ ಕೂಡ ಉದಯವಾಣಿ ರೇಷ್ಮೆ ಜತೆ ದೀಪಾವಳಿ ಫೋಟೋ ಸ್ಪರ್ಧೆಯನ್ನು ಆಯೋಜಿಸಲಿದೆ. ರೇಷ್ಮೆ ಸೀರೆ-ಉಡುಗೆಗಳನ್ನು ದೀಪಾವಳಿ ಸಂದರ್ಭ ತೊಟ್ಟು ಸಂಭ್ರಮಿಸಿದ ಫೋಟೋಗಳನ್ನು ಕಳುಹಿಸಿ ಬಹುಮಾನ ಗೆಲ್ಲಲು ಅವಕಾಶವಿದೆ.
ರೇಷ್ಮೆಯ ಪ್ರತಿಷ್ಠಿತ ಸ್ಥಾನವನ್ನು ಮತ್ತಷ್ಟು ಉನ್ನತಿಗೇರಿಸುವುದು ಹಾಗೂ ಸಾಂಪ್ರದಾಯಿಕತೆಗೆ ಒತ್ತು ನೀಡುವುದು ಈ ಸ್ಪರ್ಧೆಯ ಉದ್ದೇಶ. ಮನೆ ಮಂದಿ, ಕುಟುಂಬ ಸದಸ್ಯೆಯರು, ಗೆಳತಿಯರು ಹೀಗೆ ಗುಂಪಾಗಿ ಎಲ್ಲರೂ ರೇಷ್ಮೆ ಸೀರೆ ಧರಿಸಿ ದೀಪಾವಳಿ ಆಚರಿಸುವ ಫೋಟೋ ತೆಗೆದು ಕಳುಹಿಸಬಹುದು.
ಕಳೆದ ವರ್ಷ ಉಡುಪಿ, ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಜಿಲ್ಲೆಯ ಸಾವಿರಾರು ಮಂದಿ ಇದರಲ್ಲಿ ಭಾಗವಹಿಸಿದ್ದರು. ಈ ಬಾರಿ ಮತ್ತೂಮ್ಮೆ ರೇಷ್ಮೆ ಸೀರೆ ಧರಿಸಿ ಹಬ್ಬವನ್ನು ಸಂಭ್ರಮಿಸಿ, ಅದನ್ನು ಚಿತ್ರದ ಮೂಲಕ ಕಟ್ಟಿಕೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಿ. ಸ್ಪರ್ಧೆಯ ನಿಯಮಾವಳಿಗಳನ್ನು ಶೀಘ್ರವೇ ಪ್ರಕಟಿಸಲಾಗುವುದು.
You seem to have an Ad Blocker on.
To continue reading, please turn it off or whitelist Udayavani.