![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2024, 12:26 AM IST
ಮಣಿಪಾಲ: ಉದಯವಾಣಿ ಶಿಕ್ಷಣ ಮಾರ್ಗದರ್ಶಿಯ ವಾರ್ಷಿಕ ವಿದ್ಯಾರ್ಥಿ ವೇತನಕ್ಕೆ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ 10 ಮಂದಿ ಅದೃಷ್ಟಶಾಲಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ.
ವಿಜೇತ ವಿದ್ಯಾರ್ಥಿಗಳು: ಮೂಲ್ಕಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ನಿವೇದಿತಾ ಕಾಮತ್ (616), ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ ಮನ್ಮಿತಾ (614 ಅಂಕ), ಉಡುಪಿ ಇಂದ್ರಾಳಿ ಇಂಗ್ಲಿಷ್ ಮಾಧ್ಯಮ ಶಾಲೆಯ ನಿಶ್ಮಿತಾ ಪ್ರಭು (609), ಶಿರ್ವ ಹಿಂದೂ ಪಿಯು ಕಾಲೇಜು ಪ್ರೌಢಶಾಲಾ ವಿಭಾಗದ ದರ್ಶನ್ (606), ಬೆಳ್ಮಣ್ ಸಂತ ಜೋಸೆಫರ ಪ್ರೌಢಶಾಲೆಯ ನಿಶಿತಾ ಕೆ. ಶೆಟ್ಟಿ (603), ಬಂಟ್ವಾಳ ಕಕ್ಯಬೀಡು ಶ್ರೀ ಪಂಚದುರ್ಗಾ ಪ್ರೌಢಶಾಲೆಯ ಮೋಕ್ಷಾ (600), ಆವರ್ಸೆ ಸರಕಾರಿ ಪ್ರೌಢಶಾಲೆಯ ಪಲ್ಲವಿ (595), ಮಾಣಿಲ ಸರಕಾರಿ ಪ್ರೌಢಶಾಲೆಯ ದೀಕ್ಷಿತಾ (583), ಮಂಗಳೂರು ಕುಂಟಿಕಾನದ ಸಂತ ಆ್ಯನ್ಸ್ ಪ್ರೌಢಶಾಲೆಯ ಶಿವಾನಿ (582) ಮತ್ತು ಗುತ್ತಿಗಾರಿನ ಬ್ಲೆಸ್ಡ್ ಕುರಿಯಕೋಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸುಬ್ರಹ್ಮಣ್ಯ ಪ್ರಸಾದ (556) ಆಯ್ಕೆಯಾಗಿದ್ದಾರೆ.
ಆಯ್ಕೆ ಹೇಗೆ? ಈ ವಿದ್ಯಾರ್ಥಿ ವೇತನಕ್ಕೆ 300ಕ್ಕೂ ಅಧಿಕ ಮಂದಿ ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶಪತ್ರಗಳನ್ನು ಕಳುಹಿಸಿದ್ದರು. ವಿದ್ಯಾರ್ಥಿ ವೇತನವು ತಲಾ ರೂ. 2,500 ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಉದಯವಾಣಿ ಶಿಕ್ಷಣ ಮಾರ್ಗದರ್ಶಿಯ ಎಲ್ಲ ಪುರವಣಿಗಳನ್ನು ಅಧ್ಯಯನ ಮಾಡಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ, ಶಿಕ್ಷಣ ಮಾರ್ಗದರ್ಶಿಯ ಪುರವಣಿ ಸಂಖ್ಯೆಗಳನ್ನು ಸಂಗ್ರಹಿಸಿ ಕಳುಹಿಸುವ ಹತ್ತು ಮಂದಿ ಅದೃಷ್ಟಶಾಲಿ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.